ಸಿಡಿಲಿಗೂ ಮುನ್ನ ಮೊಳಗಲಿದೆ ಸೈರನ್‌!


Team Udayavani, May 15, 2022, 7:10 AM IST

thumb-4

ಬೆಂಗಳೂರು: ಇನ್ನು ಮುಂದೆ ಗುಡುಗು-ಸಿಡಿಲು ಆರ್ಭ ಟಿಸುವ ಮುನ್ನವೇ ನಿಮಗೆ ಅದರ ಮಾಹಿತಿ ದೊರೆಯಲಿದೆ. ನಿಮ್ಮೂರಲ್ಲಿ ಸೈರನ್‌ ಮೊಳಗಿದರೆ, ಒಂದು ಗಂಟೆಯಲ್ಲೇ ಸಿಡಿಲು ಬಡಿಯುತ್ತದೆ ಎಂದರ್ಥ. ಕೂಡಲೇ ನೀವು ಸುರಕ್ಷಿತ ತಾಣವನ್ನು ತಲುಪಿ ಪ್ರಾಣರಕ್ಷಣೆ ಮಾಡಿಕೊಳ್ಳಬಹುದು!

ರಾಜ್ಯ ಪ್ರಾಕೃತಿಕ ವಿಪತ್ತು ನಿರ್ವಹಣ ಕೇಂದ್ರವು ರಾಜ್ಯದಲ್ಲಿ ಸಂಭವಿಸುವ ಸಿಡಿಲಿನ ಮಾಹಿತಿ ಯನ್ನು ಜನರಿಗೆ ನೀಡುವ ಮೂಲಕ ಸಾವು-ನೋವುಗಳನ್ನು ತಡೆಯಲು ಮುಂದಾಗಿದೆ. ಅದರಂತೆ ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳ ಆಯ್ದ 105 ಗ್ರಾಮ ಪಂಚಾ ಯತ್‌ಗಳಲ್ಲಿ ಈ ವರ್ಷದಿಂದ ಸಿಡಿಲು ಮತ್ತು ಗುಡುಗು ಸಂಬಂಧಿಸಿದ ಮುನ್ಸೂಚನೆ ಮತ್ತು ಮುನ್ನೆಚ್ಚರಿಕೆಗಳನ್ನು ನೀಡಲಾಗುತ್ತಿದೆ.

ಇದು ಸಿಡಿಲು-ಗುಡುಗು ಸಂಭವಿ ಸುವ ಒಂದು ಗಂಟೆ ಮೊದಲು ಸಂಬಂಧಪಟ್ಟ ಪಂಚಾಯತ್‌ಗಳಲ್ಲಿ ಅಳವಡಿಸಿರುವ ಮೈಕ್‌ಗಳಲ್ಲಿ ಸೈರನ್‌ ಮೂಲಕ ಮುನ್ನೆಚ್ಚರಿಕೆ ನೀಡಲಾಗುವುದು. ಪ್ರಾಯೋಗಿಕ ವಾಗಿ ಈ ಜಿಲ್ಲೆಗಳಲ್ಲಿ ಜಾರಿಗೊಳಿ ಸಲಾಗಿದ್ದು, ಮುಂದೆ ರಾಜ್ಯಾದ್ಯಂತ ವಿಸ್ತರಿಸುವ ಯೋಚನೆ ಇದೆ.

ದಕ್ಷಿಣ ಕನ್ನಡದಲ್ಲಿ ಮಿಂಚು ಹೆಚ್ಚು
ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಿಂಚು ಸಂಚಾರವಾಗುತ್ತದೆ. ಆದರೆ ಅಲ್ಲಿ ಹೆಚ್ಚಿನ ಮರ ಗಿಡಗಳು ಇರುವುದರಿಂದ ಮನುಷ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುವುದಿಲ್ಲ. ಆದರೆ, ಉತ್ತರ ಕರ್ನಾಟಕ ಜಿಲ್ಲೆ ಗಳಲ್ಲಿ ಬಯಲು ಪ್ರದೇಶವೇ ಹೆಚ್ಚಿನ ಪ್ರಮಾಣದಲ್ಲಿದ್ದು, ಗ್ರಾಮೀಣ ಭಾಗದ ಜನರಿಗೆ ಜಾಗೃತಿ ಇಲ್ಲ ದಿರುವ ಪರಿಣಾಮ, ಸಾವುಗಳು ಸಂಭವಿಸುತ್ತಿವೆ. ಸೈರನ್‌ ವ್ಯವಸ್ಥೆಯಿಂದ ಸಹಾಯವಾಗಲಿದೆ ಎಂದು ವಿಪತ್ತು ನಿರ್ವಹಣ ಪ್ರಾಧಿಕಾರದ ಆಯುಕ್ತ ಮನೋಜ್‌ ರಾಜನ್‌ ತಿಳಿಸಿದ್ದಾರೆ.

ದಶಕದಲ್ಲಿ 812 ಮಂದಿ ಸಾವು
ರಾಜ್ಯದಲ್ಲಿ 2011-2021ರ ಅವಧಿಯಲ್ಲಿ ಸಿಡಿಲಿನಿಂದ 812 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ವಿಜಯಪುರ, ಬಾಗಲಕೋಟೆ, ರಾಯಚೂರು, ಗದಗ ಜಿಲ್ಲೆಗಳಲ್ಲಿಯೇ ಹೆಚ್ಚಿನ ಜನರು ಮೃತಪಟ್ಟಿದ್ದಾರೆ. 2022ರಲ್ಲಿ 49, 2021ರಲ್ಲಿ 108, 2020ರಲ್ಲಿ 79, 2019ರಲ್ಲಿ 101, 2018ರಲ್ಲಿ 117, 2017ರಲ್ಲಿ 108 ಜನರು ಮೃತಪಟ್ಟಿದ್ದಾರೆ.

ಸೈರನ್‌ ಮೊಳಗಿದಾಗ ಏನು ಮಾಡಬೇಕು?
– ಕೂಡಲೇ ಮನೆಗಳಿಗೆ ತೆರಳಿ
-ಕಾಂಕ್ರೀಟ್‌ ನೆಲದಲ್ಲಿ ನಿಂತು ಕೊಳ್ಳದಿರಿ, ಕಾಂಕ್ರೀಟ್‌ ಗೋಡೆಗೆ ಒರಗಬೇಡಿ
– ಮೊಬೈಲ್‌ ಮತ್ತಿತರ ಎಲೆಕ್ಟ್ರಾನಿಕ್‌ ಉಪಕರಣ ಗಳನ್ನು ಬಳಸದಿರಿ
– ತೆರೆದ ಪ್ರದೇಶಗಳಲ್ಲಿ, ಬೆಟ್ಟದ ಮೇಲೆ ಅಥವಾ ಮರಗಳ ಕೆಳಗೆ ನಿಲ್ಲದಿರಿ
– ಕಿಟಕಿ, ಬಾಗಿಲ ಬಳಿ ನಿಲ್ಲದಿರಿ.

ರಾಜ್ಯದಲ್ಲಿ ಸಿಡಿಲಿನಿಂದ ರೈತಾಪಿ ವರ್ಗ ಮೃತಪಡುವುದನ್ನು ತಡೆಗಟ್ಟಲು ಆಯ್ದ ಗ್ರಾ.ಪಂ.ಗಳಲ್ಲಿ ಸಿಡಿಲು ಅಲರ್ಟ್‌ ನೀಡಲಾಗುತ್ತಿದೆ. ಈ ಮೂಲಕ ಸಾಧ್ಯವಾದ ಮಟ್ಟಿಗೆ ಜನರನ್ನು ಜಾಗೃತಿಗೊಳಿಸುವ ಉದ್ದೇಶ ಹೊಂದಲಾಗಿದೆ.
ಮನೋಜ್‌ ರಾಜನ್‌, ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಆಯುಕ್ತ

– ಎನ್‌.ಎಲ್‌.ಶಿವಮಾದು

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.