Prajwal Revanna ಪಾಸ್ಪೋರ್ಟ್ ರದ್ದತಿಗೆ ಕೋರ್ಟ್ಗೆ ಎಸ್ಐಟಿ ಮೊರೆ?
ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಸಿದ್ಧತೆ
Team Udayavani, May 14, 2024, 6:55 AM IST
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿ ಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಎಸ್ಐಟಿ ಮತ್ತೂಂದು ಅಸ್ತ್ರ ಸಿದ್ಧಪಡಿಸಲು ಮುಂದಾಗಿದ್ದು, ಕೋರ್ಟ್ ಮೂಲಕ ಆರೋಪಿಯ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಲು ಚಿಂತನೆ ನಡೆಸಿದೆ.
ಕೇಂದ್ರ ಸರಕಾರ ನೀಡಿರುವ ರಾಜತಾಂತ್ರಿಕ ಪಾಸ್ ಪೋರ್ಟನ್ನು ರದ್ದುಗೊಳಿಸಿ ಆರೋಪಿ ದೇಶಕ್ಕೆ ಮರಳಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಬರೆದ ಪತ್ರಕ್ಕೆ ಕೇಂದ್ರ ಯಾವುದೇ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಕೋರ್ಟ್ ಮೂಲಕ ಆರೋಪಿಗೆ ನೀಡಿರುವ ರಾಜತಾಂತ್ರಿಕ ಪಾಸ್ಪೋರ್ಟ್ ಮತ್ತು ಸಾಮಾನ್ಯ ಪಾಸ್ಪೋರ್ಟ್ ರದ್ದುಗೊಳಿಸಲು ಮುಂದಾಗಿದೆ. ಈಗಾಗಲೇ ಲುಕ್ಔಟ್ ನೋಟಿಸ್, ಬ್ಲೂಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಈ ಮಧ್ಯೆ ಪ್ರಜ್ವಲ್ 2-3 ಬಾರಿ ವಿಮಾನ ಟಿಕೆಟ್ ರದ್ದುಗೊಳಿಸಿದ್ದಾನೆ. ಹೀಗಾಗಿ ಕೋರ್ಟ್ ಮೂಲಕ ಪ್ರಜ್ವಲ್ನ ಪಾಸ್ಪೋರ್ಟ್ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಲು ಎಸ್ಐಟಿ ಚಿಂತನೆ ನಡೆಸಿದೆ. ಈ ಸಂಬಂಧ ಎಸ್ಐಟಿ ಸಭೆ ಕೂಡ ನಡೆಸಿದೆ ಎಂದು ತಿಳಿದು ಬಂದಿದೆ.
ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಸಿದ್ಧತೆ
ಮತ್ತೂಂದೆಡೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಶೀಘ್ರದÇÉೇ ಪ್ರಕರಣದ ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಲು ತಯಾರಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು, ಇದುವರೆಗೂ ಆತ ವಿದೇಶದಿಂದ ವಾಪಸ್ ಬಂದಿಲ್ಲ. ಪ್ರಜ್ವಲ್ 2-3 ಬಾರಿ ದಿಢೀರ್ ಆಗಿ ವಿಮಾನದ ಟಿಕೆಟ್ ರದ್ದು ಪಡಿಸಿರುವ ಮಾಹಿತಿ ಇದೆ. ಹೀಗಾಗಿ ತನಿಖೆ ಪೂರ್ಣಗೊಳಿಸಿ, ಸಾûಾ$Âಧಾರ ಸಹಿತ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸುತ್ತೇವೆ. ಈ ಆಧಾರದ ಮೇಲೆ ರೆಡ್ಕಾರ್ನರ್ ನೋಟಿಸ್ ಜಾರಿ ಮಾಡಲಾಗುವುದು. ಸಿಬಿಐನ ಇಂಟರ್ಪೋಲ್ ಅನುಮತಿ ಕೇಳಲಾಗಿದೆ. ಒಂದು ವೇಳೆ ರಾಜತಾಂತ್ರಿಕ ಹಾಗೂ ಸಾಮಾನ್ಯ ಪಾಸ್ಪೋರ್ಟ್ ರದ್ದುಗೊಂಡರೆ ಅವರನ್ನು ಕರೆ ತರುವುದು ಸುಲಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.