ವಿಜಯೇಂದ್ರನ ಕುಮ್ಮಕ್ಕಿನಿಂದ ಕೆಲ ಮಾಧ್ಯಮಗಳಿಂದ ಅಪಪ್ರಚಾರ :ಯತ್ನಾಳ್

ನನಗೆ ಪಕ್ಷದಲ್ಲಿ ಕಾರ್ಯತರ್ತರಿಂದ ಹಿಡಿದು ದಿಲ್ಲಿಗೆ ನೇರ ಸಂಪರ್ಕವಿದೆ....

Team Udayavani, Oct 10, 2022, 7:45 PM IST

yatnal

ವಿಜಯಪುರ :‘ ರಾಜಕೀಯವಾಗಿ ನನ್ನನ್ನು ಮುಗಿಸಲು, ಬಿಜೆಪಿ ಪಕ್ಷದ ಸನ್ಮಾನ್ಯ ಉಪಾಧ್ಯಕ್ಷ ವಿಜಯೇಂದ್ರನ ಮಾತು ಕೇಳಿ, ಕೊಟ್ಟ ಪ್ರಸಾದ ಸ್ವೀಕರಿಸಿ, ಕೇಂದ್ರದವರು 2500 ಕೊಟಿ ರೂ. ಕೇಳಿದ್ದಾರೆಂದು ನನ್ನ ಝೀರೋ ಮಾಡುವುದಕ್ಕಾಗಿ ಕೆಲ ದೃಶ್ಯಮಾಧ್ಯಮಗಳು ವ್ಯವಸ್ಥಿವಾಗಿ ಅಪಪ್ರಚಾರ ಮಾಡಿದವು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋಮವಾರ ಹರಿಹಾಯ್ದಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಹಣ ಕೊಟ್ಟು ಅಧಿಕಾರ ಪಡೆಯುವ ಪದ್ದತಿ ಇಲ್ಲ, ನಮ್ಮ ಪಕ್ಷದಲ್ಲಿ ಕಾರ್ಯತರ್ತರಿಂದ ಹಿಡಿದು ದಿಲ್ಲಿಗೆ ನೇರ ಸಂಪರ್ಕವಿದೆ. ನಾನು ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲು ನೇರವಾಗೇ ಹೋಗುತ್ತೇನೆ. ನನಗಂತೂ ಯಾವ ದಲ್ಲಾಲಿಗಳ ಅವಶ್ಯಕತೆ ಇಲ್ಲ. ಆದರೂ ಮಾಧ್ಯಮವರು ವಿಜಯೇಂದ್ರನ ಮಾತುಕೇಳಿಕೊಂಡು ಕೆಲವು ಮಾಧ್ಯಮದವರು ಪದೇ ಪದೇ ಅದನ್ನೇ ಕೇಳುತ್ತೀರಿ ಎಂದು ಹರಿಹಾಯ್ದರು.

ದೆಹಲಿಯಿಂದ ಈಗಲೂ ಕೆಲವರು ನನಗೆ ಕರೆ ಮಾಡುತ್ತಾರೆ. ಓರ್ವ ಸ್ವಾಮೀಜಿಯಂತೂ 1500 ಕೋಟಿ ರೂ. ಕೂಡಿಸಿಕೊಂಡು ದೆಹಲಿ ಬನ್ನಿ. ನಿಮ್ಮನ್ನು ಜೆ.ಪಿ.ನಡ್ಡಾ, ಮೋದಿ ಅವರ ಭೇಟಿಗೆ ಸಮಯ ನಿಗದಿ ಮಾಡುತ್ತೇನೆ ಎಂದೆಲ್ಲ ಅಂತೆಲ್ಲ ಹೇಳುತ್ತಾರೆ, ಇಂಥದ್ದನ್ನೆಲ್ಲ ನಂಬಬೇಡಿ ಎಂದಿದ್ದೇನೆ. 3-4 ದಶಕಗಳ ಕಾಲ ರಾಜಕೀಯದಲ್ಲಿರುವ ಹಿರಿಯ ನಾಯಕರಿಗೇ ಈ ರೀತಿಯಾದರೆ ಹೇಗೆ ಎಂದರು.

ಇಂಥವರ ಮಾತು ನಂಬಿಕೊಂಡು ಹಲವರು ಭಾರಿ ಪ್ರಮಾಣದ ಹಣ ಕಳೆದುಕೊಂಡು ಸಂಕಷ್ಟ ಅನುಭವಿಸಿದ್ದಾರೆ. ಬಿಜೆಪಿ ಪಕ್ಷದಲ್ಲೇ ಕೆಲವರು ಹಣ ಕಳೆದುಕೊಂಡಿದ್ದಾರೆ. ಎಷ್ಟೋಮಂದಿ ಅಂಥವರೇ ಇಲ್ಲಿದ್ದು, ಪಕ್ಷದಲ್ಲಿ ಎಲ್ಲರೂ ಸಾಚಾ ಇಲ್ಲ. ಅಂಥವರೇ ಇದೀಗ ಮಂತ್ರಿಯೂ ಆಗಿದ್ದಾರೆ ಎಂದು ಯಾರ ಹೆಸರು ಹೇಳದೇ ಗಂಭೀರ ಆರೋಪ ಮಾಡಿದರು.

ಬಿಜೆಪಿ ಪಕ್ಷದಲ್ಲಿ ಸಿಎಂ ಆಗಲು 2500 ಕೋಟಿ ರೂಪಾಯಿ ನೀಡಬೇಕು ಎಂದು ನಾನು ಹೇಳಿದ್ದಾಗಿ ಆಪ್ ಮುಖಂಡ ಮುಖ್ಯಮಂತ್ರಿ ಚಂದ್ರು ಆರೋಪ ಮಾಡಿದ್ದಾರೆ. ಆದರೆ ನನ್ನ ಹೇಳಿಕೆ ಮತ್ತೊಮ್ಮೆ ತಿರುಗಿಸಿ ನೋಡಿ, ನಾನು ಹೇಳಿದ್ದು ಏನಿದೆ ಎಂಬುದನ್ನು ನೋಡಿ ಎಂದು ಯತ್ನಾಳ್ ಸಲಹೆ ನೀಡಿದರು.

ದೆಹಲಿ, ಬೆಂಗಳೂರಿನಲ್ಲಿ ರಾಜಕೀಯ ಕೆಲ ದಲ್ಲಾಲಿಗಳಿದ್ದಾರೆ. ಇಂಥ ದಲ್ಲಾಲಿಗಳು ಎಲ್ಲಾ ಪಕ್ಷದಲ್ಲಿದ್ದಾರೆ, ಅವರು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ರಾಮದುರ್ಗದಲ್ಲಿ ಕೆಲ ಟಿಕೆಟ್ ಆಕಾಂಕ್ಷಿಗಳು, ಬೆಂಗಳೂರು, ದೆಹಲಿಯಲ್ಲಿ ಕೆಲವರು 2-3 ಕೋಟಿ ರೂ. ಕೊಡಿ, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಮಗೆ ಹೇಳಿದ್ದಾರೆ ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿ ಇಂಥವರಿಂದ ಎಚ್ಚರವಾಗಿರಿ ಎಂದು ಹೇಳಿದ್ದೆ ಎಂದು ಸಮಜಾಯಿಸಿ ನೀಡಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.