![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 19, 2017, 9:50 AM IST
ಬೆಂಗಳೂರು: ಅಕ್ರಮ ಕಸಾಯಿಖಾನೆ ಮುಚ್ಚಲು ಹೈಕೋರ್ಟ್ ನೇಮಿಸಿದ ಕೋರ್ಟ್ ಕಮಿಷನರ್ ತಂಡದ ಸದಸ್ಯರು ಹಾಗೂ ಪೊಲೀಸರ ಮೇಲೆ ಕಸಾಯಿಖಾನೆ ಮಾಲಕರು ಹಲ್ಲೆ ನಡೆಸಿದ್ದು, ಪೊಲೀಸರ ವಾಹನ ಜಖಂಗೊಳಿಸಿರುವ ಘಟನೆ ಯಲಹಂಕ ನ್ಯೂಟೌನ್ ಠಾಣೆ ವ್ಯಾಪ್ತಿ ಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ವಕೀಲರಾದ ಹರೀಶ್, ಪ್ರಸನ್ನ, ಪವನ್, ಸರಕಾರಿ ಅಭಿಯೋಜಕ ರಾಚಯ್ಯ, ದೂರುದಾರರಾದ ಕವಿತಾ ಜೈನ್, ಜೋಶಿನ್ ಆಂಥೋಣಿ ಹಾಗೂ ವಿದ್ಯಾರಣ್ಯಪುರ ಠಾಣೆ ಪೊಲೀಸರ ಮೇಲೆ ಹಲ್ಲೆ ನಡೆದಿದೆ.
ನಗರದಲ್ಲಿ ಅಕ್ರಮವಾಗಿ ಕಸಾಯಿ ಖಾನೆ ಪತ್ತೆ ಹಚ್ಚಿ ಕ್ರಮಕೈಗೊಳ್ಳಲು ಹೈಕೋರ್ಟ್, ಕೋರ್ಟ್ ಕಮಿಷನರ್ಗಳನ್ನು ನೇಮಿಸಿತ್ತು. ಬೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಅಕ್ರಮ ವಾಗಿ ನಡೆಸುತ್ತಿದ್ದ ಕಸಾಯಿ ಖಾನೆಗಳನ್ನು ಪತ್ತೆಹಚ್ಚಿ ನೋಟಿಸ್ ಕೊಟ್ಟು ಮುಚ್ಚಿಸಲು ಪೊಲೀಸರೊಂದಿಗೆ ಕಮಿಷನರ್ಗಳು ಹೋಗಿದ್ದರು. ಸ್ಥಳೀಯರು ಪೊಲೀಸರು ಸೇರಿದಂತೆ ಎಲ್ಲರ ಮೇಲೆ ಹಲ್ಲೆ ಚಾಡಿ, ವಾಹನಗಳನ್ನು ಜಖಂಗೊಳಿಸಿದರು. ಕೆಎಸ್ಆರ್ಪಿ ತುಕಡಿ ನೆರವು ಪಡೆದು ಪರಿಸ್ಥಿತಿ ನಿಯಂತ್ರಿಸಲಾಯಿತು.
23 ಆರೋಪಿಗಳ ಸೆರೆ
ಕಸಾಯಿಖಾನೆಗಳಿಗೆ ಭೇಟಿ ನೀಡಿದವರ ಮೇಲೆ ಹಲ್ಲೆನಡೆಸಿದ ಎರಡು ಘಟನೆಗಳ ಸಂಬಂಧ 23 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕ ಬೆಟ್ಟಹಳ್ಳಿಯ ಕಸಾಯಿಖಾನೆಯಲ್ಲಿ ಕೋರ್ಟ್ ತಂಡದ ಮೇಲೆ ದಾಳಿ ನಡೆಸಿದ 10 ಮಂದಿ ಸೆರೆಯಾಗಿದ್ದಾರೆ. ಅ. 14ರ ಘಟನೆ ಸಂಬಂಧ 13 ಜನರನ್ನು ಬಂಧಿಸಲಾಗಿದೆ. ದೂರು ನೀಡಿದ ನಂದಿನಿಯ ಕಾರು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಕಾರಣ ಗಲಭೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.