![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 23, 2022, 10:31 PM IST
ಹುಬ್ಬಳ್ಳಿ: ಭಾರತ ಜೋಡೋ ಕಾಂಗ್ರೆಸ್ ತೋಡೋ ಯಾತ್ರೆ ಆಗುತ್ತಿದ್ದು, ಹಲವರು ಕಾಂಗ್ರೆಸ್ ಚೋಡೋ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ವ್ಯಂಗ್ಯವಾಡಿದರು.
ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಪಾಕ್ ಹಾಗೂ ಚೀನ ಆಕ್ರಮಿತ ಜಾಗವನ್ನು ಭಾರತಕ್ಕೆ ಜೋಡಿಸುವ ಯಾತ್ರೆಯನ್ನು ರಾಹುಲ್ ಮಾಡಲಿ, ಕಾಂಗ್ರೆಸ್ ತೋಡೋ ಮಾಡಿದವರನ್ನು ಜೋಡೋ ಮಾಡಲಿ. ರಾಹುಲ್ ಗಾಂಧಿಗೆ ಯಾರೋ ಬರೆದು ಕೊಡುತ್ತಾರೆ. ಸಭೆ-ಸಮಾರಂಭಗಳಲ್ಲಿ ಅದನ್ನು ಓದುತ್ತಾರೆ. ಬರೆದು ಕೊಟ್ಟಿದ್ದನ್ನು ಬಿಟ್ಟು ಬೇರೆ ಪ್ರಶ್ನೆ ಮಾಡಿದರೆ ಉತ್ತರ ಕೊಡುವುದಕ್ಕೂ ಬರುವುದಿಲ್ಲ. ಅವರ ಮಾತಿಗೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥವಿಲ್ಲ ಎಂದರು.
ಸಂಪುಟ ಬಗ್ಗೆ ದಿಲ್ಲಿಯಲ್ಲಿ ಚರ್ಚೆ
ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿಗಳು ದಿಲ್ಲಿಗೆ ಬರುತ್ತೇನೆ ಎಂದು ಹೇಳಿದ್ದಾರೆ. ಅವರು ಬಂದ ಬಳಿಕ ಚರ್ಚಿಸಿ ಮಾತನಾಡುತ್ತೇವೆ ಎಂದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.