![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 21, 2023, 11:01 PM IST
ಬೆಂಗಳೂರು: ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.
15ನೇ ಹಣಕಾಸು ಆಯೋಗದ ವರದಿ ಪ್ರಕಾರ ವಿಶೇಷ ಅನುದಾನವಾಗಿ ಕರ್ನಾಟಕಕ್ಕೆ 5,495 ಕೋ. ರೂ. ಶಿಫಾರಸು ಮಾಡಲಾಗಿತ್ತು. ಆದರೆ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಹಿಂದೆ 14ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇ.4.71 ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಪಾಲನ್ನು ಶೇ.3.647ಕ್ಕೆ ಇಳಿಸಲಾಗಿದೆ. ಆಯೋಗವು ನಿಗದಿಪಡಿಸಿದ್ದ ಆದಾಯದ ಮಾನ ದಂಡಗಳನ್ನು ಕರ್ನಾಟಕ ಕಳೆದುಕೊಂಡಿದೆ. 2011-12ರಲ್ಲಿ ರಾಜ್ಯದ ಜಿಎಸ್ಡಿಪಿಯನ್ನು ಶೇ. 30ರಷ್ಟು ಹೆಚ್ಚಿಸಲಾಗಿದೆ.
ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರಕಾರದ ಹಣಕಾಸಿನ ಬದ್ಧತೆಗಳನ್ನು ಗಮನ
ದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರ ಸನ್ನು ಸೂಕ್ತವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದರೂ ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಈಗಾಗಲೇ ಸಂಕಷ್ಟದಲ್ಲಿ ರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದರಿಂದ ಹಿನ್ನಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನೀರಾವರಿ ಯೋಜನೆ ಹಾಗೂ ಫೆರಿಪೆಲರ್ ರಸ್ತೆ ನಿರ್ಮಾಣಕ್ಕೆ ಆಯೋಗ ಒತ್ತು ನೀಡಿತ್ತು. ಆದರೆ ಯಾವುದೇ ಅನುದಾನ ಕರ್ನಾಟಕಕ್ಕೆ ಬಂದಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆಯಾಗಿದೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ವಿವರಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.