
ಶ್ರೀಲಂಕಾ ಬಾಂಬ್ ಸ್ಫೋಟ: ಗುರುತು ಸಿಗದ ಕನ್ನಡಿಗ
Team Udayavani, Apr 25, 2019, 3:25 AM IST

ಬೆಂಗಳೂರು: ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟದಿಂದ ಸಾವಿಗೀಡಾಗಿರುವ ಏಳು ಜನ ಕನ್ನಡಿಗರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲಾಗಿದ್ದು, ಇನ್ನೊಬ್ಬ ಕನ್ನಡಿಗನ ಪಾರ್ಥಿವ ಶರೀರವನ್ನು ಶ್ರೀಲಂಕಾ ಸರ್ಕಾರ ಗುರುತಿಸಿದೆ. ಆದರೆ, ಮೃತ ವ್ಯಕ್ತಿ ಯಾರು ಎನ್ನುವುದು ಖಚಿತವಾಗದ ಕಾರಣ ಅವರ ಪಾರ್ಥಿವ ಶರೀರವನ್ನು ಇನ್ನೂ ರಾಜ್ಯಕ್ಕೆ ತರಲಾಗಿಲ್ಲ.
ಶ್ರೀಲಂಕಾದಲ್ಲಿ ಕಳೆದ ಭಾನುವಾರ ನಡೆದ ಬಾಂಬ್ ಸ್ಫೋಟದಲ್ಲಿ 10 ಜನ ಭಾರತೀಯರು ಮೃತ ಪಟ್ಟಿದ್ದು, ಅವರಲ್ಲಿ ಎಂಟು ಜನ ಕನ್ನಡಿಗರು ಮೃತ ಪಟ್ಟಿದ್ದರು ಎಂದು ಶ್ರೀಲಂಕಾ ಸರ್ಕಾರ ಘೋಷಿಸಿದೆ. ಅವರಲ್ಲಿ ರಾಜ್ಯದ ಕಾಚರಕನಹಳ್ಳಿ ಹನುಮಂತರಾಯಪ್ಪ, ಲಕ್ಷ್ಮೀನಾರಾಯಣ, ರಂಗಪ್ಪ, ಅಡಕಮಾರನಹಳ್ಳಿ ಮಾರೇಗೌಡ, ಹಾರೋಕ್ಯಾತನಹಳ್ಳಿ ಪುಟ್ಟರಾಜು, ಗೋವೇನ್ ಹಳ್ಳಿ ಶಿವಕುಮಾರ್, ಬಿಟಿಎಂ ಲೇಔಟ್ನ ನಾಗರಾಜ್ ರೆಡ್ಡಿ ಅವರ ಪಾರ್ಥೀವ ಶರೀರವನ್ನು ರಾಜ್ಯಕ್ಕೆ ತರಲಾಗಿದ್ದು, ಬುಧವಾರ ಎಲ್ಲರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಶ್ರೀಲಂಕಾ ಸರ್ಕಾರ ಗುರುತಿಸಿರುವ ಇನ್ನುಳಿದ ಮೂವರು ಭಾರತೀಯರಲ್ಲಿ ಒಬ್ಬರು ಕನ್ನಡಿಗರು ಯಾರು ಎನ್ನುವುದನ್ನು ಕೇಂದ್ರ ಸರ್ಕಾರ ಇನ್ನೂ ಗುರುತಿಸದೆ ಇರುವುದರಿಂದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ನಿಲುವಿಗೆ ಕಾಯುತ್ತಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.