ಸಿಂಗರೇಣಿಯಿಂದ ಕಲ್ಲಿದ್ದಲು ಪಡೆಯಲು ಕಸರತ್ತು


Team Udayavani, Jun 1, 2018, 6:00 AM IST

z-45.jpg

ಬೆಂಗಳೂರು: ಬಳ್ಳಾರಿಯ ಬಿಟಿಪಿಎಸ್‌ ಹಾಗೂ ರಾಯಚೂರಿನ ವೈಟಿಪಿಎಸ್‌ ಘಟಕಗಳಿಗೆ ಕಲ್ಲಿದ್ದಲು ಪೂರೈಕೆ ಸಂಬಂಧ ಕರ್ನಾಟಕ ವಿದ್ಯುತ್‌ ನಿಗಮ
(ಕೆಪಿಸಿಎಲ್‌), ಸಿಂಗರೇಣಿ ಕೊಲಿರೀಸ್‌ ಕಂಪೆನಿ ಲಿಮಿಟೆಡ್‌ (ಎಸ್‌ಸಿಸಿಎಲ್‌) ಹಾಗೂ ಕೇಂದ್ರ ಸರ್ಕಾರದ ನಡುವೆ ಪತ್ರ ವ್ಯವಹಾರ ಮುಂದುವರಿದಿದ್ದು ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗುವ ಆತಂಕಕ್ಕೆ ತೆರೆಬಿದ್ದಿಲ್ಲ. ವೈಟಿಪಿಎಸ್‌ನ ಒಂದು, ಎರಡನೇ ಘಟಕ ಹಾಗೂ ಬಿಟಿಪಿಎಸ್‌ನ 3ನೇ ಘಟಕಕ್ಕೆ ಈ ಹಿಂದೆ ಕಲ್ಲಿದ್ದಲು ಗಣಿ ಮಂಜೂರಾಗಿತ್ತು. ಆದರೆ ಗಣಿ ರದ್ದಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ಎಸ್‌ಸಿಸಿಎಲ್‌ನಿಂದ ಕಲ್ಪಿಸಲಾಗಿದ್ದ ಬ್ರಿಡ್ಜ್ ಲಿಂಕೇಜ್‌ ವ್ಯವಸ್ಥೆಯೂ ಮೇ 31ಕ್ಕೆ ಅಂತ್ಯವಾಗಲಿದೆ. ಕೇಂದ್ರ ಸೂಚನೆಯಂತೆ ಕಲ್ಲಿದ್ದಲು ಪೂರೈಕೆಯಾಗುವ ವಿಶ್ವಾಸವನ್ನು ಕೆಪಿಸಿಎಲ್‌ ವ್ಯಕ್ತಪಡಿಸಿದೆ. ಒಂದೆಡೆ ಉಷ್ಣ ಸ್ಥಾವರಗಳಿಗೆ ಮಂಜೂರಾಗಿದ್ದ ಗಣಿ ರದ್ದಾಗಿದ್ದರೆ, ಇನ್ನೊಂದೆಡೆ ಎಸ್‌ಸಿಸಿಎಲ್‌ನಿಂದ ಕಲ್ಲಿದ್ದಲು ಪೂರೈಕೆಗೆ ಕಲ್ಪಿಸಿದ್ದ ಬ್ರಿಡ್ಜ್ ಲಿಂಕೇಜ್‌ ವ್ಯವಸ್ಥೆಯನ್ನೂ ಕೈಬಿಟ್ಟರೆ ಘಟಕಗಳು ಸ್ಥಗಿತಗೊಳ್ಳುವ ಅಪಾಯವಿದೆ. ಹಾಗಾಗಿ “ಶಕ್ತಿ ನೀತಿ’ಯಡಿ ಕಲ್ಲಿದ್ದಲು ಹಂಚಿಕೆ ಮಾಡುವಂತೆ ಕರ್ನಾಟಕ ವಿದ್ಯುತ್‌ ನಿಗಮವು (ಕೆಪಿಸಿಎಲ್‌ ) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಲಿಂಕೇಜ್‌ ಕಲ್ಲಿದ್ದಲು ಪೂರೈಕೆಗೆ
ಸೂಚನೆ: ಅದರಂತೆ ಕೇಂದ್ರದ ಕಲ್ಲಿದ್ದಲು ಲಿಂಕೇಜ್‌ಗೆ ಸಂಬಂಧಪಟ್ಟ ಸ್ಥಾಯಿ ಸಮಿತಿಯು ಚರ್ಚೆ ನಡೆಸಿ ಲಿಂಕೇಜ್‌ ವಿಧಾನದಲ್ಲಿ ಆಯ್ದ ಘಟಕಗಳಿಗೆ ಕಲ್ಲಿದ್ದಲು ಪೂರೈಸುವಂತೆ ಎಸ್‌ಸಿಸಿಎಲ್‌ಗೆ ಸೂಚಿಸಿತ್ತು. ಆದರೆ ಕಲ್ಲಿದ್ದಲು ಪೂರೈಕೆಗೆ ಎಸ್‌ಸಿಸಿಎಲ್‌ ಆಕ್ಷೇಪ ತೆಗೆದಿದೆ. ಮೂರು ವರ್ಷ ಕಲ್ಲಿದ್ದಲು ಪೂರೈಸುವಷ್ಟು ನಿಕ್ಷೇಪವೇ ಇಲ್ಲ ಎಂಬ ಕಾರಣ ನೀಡುತ್ತಿದೆ. ಈ ಸಂಬಂಧ ಮಾತುಕತೆಗಾಗಿ ನಿಗಮವು ಮುಖ್ಯ ಎಂಜಿನಿಯರ್‌ರೊಬ್ಬರನ್ನು ಕಂಪೆನಿಗೆ ಕಳುಹಿಸಿ ಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳಿಂದ ಮನವಿ: ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ 
ನಾಯಕ್‌ ಅವರು ಇತ್ತೀಚೆಗೆ ಕಲ್ಲಿದ್ದಲು ಸಚಿವಾಲಯದ ಪ್ರಭಾರ ಕಾರ್ಯದರ್ಶಿ (ಕಲ್ಲಿದ್ದಲು) ಅನಿಲ್‌ ಗೋಪಿಶಂಕರ್‌ ಮುಕಿಮ್‌, ಜಂಟಿ ಕಾರ್ಯದರ್ಶಿ ಆರ್‌.ಕೆ.ಸಿನ್ಹಾ ಅವರನ್ನು ಭೇಟಿ ಮಾಡಿ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆಗೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ. ವೈಟಿಪಿಎಸ್‌ಗೆ
60 ಲಕ್ಷ ಟನ್‌ ಹಾಗೂ ಬಿಟಿಪಿಎಸ್‌ಗೆ 30 ಲಕ್ಷ ಟನ್‌ ಕಲ್ಲಿದ್ದಲು ಪೂರೈಕೆಗೆ ನಿಗಮ ಮನವಿ ಮಾಡಿದೆ. ಕೇಂದ್ರದ ಸೂಚನೆ ಇರುವುದರಿಂದ ಎಸ್‌ಸಿಸಿಎಲ್‌ ಅಂತಿಮವಾಗಿ ಕಲ್ಲಿದ್ದಲು ಪೂರೈಸುವ ವಿಶ್ವಾಸವನ್ನು ಕೆಪಿಸಿಎಲ್‌ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದರೆ ಕಂಪೆನಿಯು ಎಷ್ಟು ದರ ಹಾಗೂ ಯಾವ ಪ್ರಮಾಣ ದಲ್ಲಿ ಕಲ್ಲಿದ್ದಲು ಪೂರೈಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕೇಂದ್ರ ಸರ್ಕಾರ, ಎಸ್‌ಸಿಸಿಎಲ್‌ಗೆ ನಿಗಮದಿಂದ ಪತ್ರ
ಈ ನಡುವೆ ಸ್ಥಾಯಿ ಸಮಿತಿಯ ಆದೇಶ ಪಾಲಿಸದ ಎಸ್‌ಸಿಸಿಎಲ್‌ ಆಕ್ಷೇಪಣೆಗಳನ್ನು ಎತ್ತಿರುವ ಬಗ್ಗೆ ನಿಗಮವು, ಕೇಂದ್ರ ಸರ್ಕಾರಕ್ಕೆ ಪತ್ರ
ಬರೆದಿದೆ. ಜತೆಗೆ ಕಂಪೆನಿ ಉಲ್ಲೇಖೀಸಿರುವ ಅಡಚಣೆ, ತೊಂದರೆಗಳ ನಿವಾರಣೆಗೆ ಗಮನ ಹರಿಸುವಂತೆಯೂ ಪತ್ರದಲ್ಲಿ ಮನವಿ ಮಾಡಿದೆ. ಇನ್ನೊಂದೆಡೆ ನಿಗಮವು ಎಸ್‌ಸಿಸಿಎಲ್‌ಗ‌ೂ ಪತ್ರ ಬರೆದಿದೆ. ಕಂಪೆನಿ ಪ್ರಸ್ತಾಪಿಸಿರುವ ಆಕ್ಷೇಪಣೆಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಪರಿಹಾರ ಸೂಚಿಸುವಂತೆಯೂ ಕೋರಲಾಗಿದೆ. ಹಾಗಾಗಿ ಕಲ್ಲಿದ್ದಲು ಪೂರೈಸಬೇಕು. ಯಾವುದೇ ಕಾರಣಕ್ಕೂ ಪೂರೈಕೆ
ಸ್ಥಗಿತಗೊಳಿಸಬಾರದು ಎಂದು ಕೋರಿದೆ. ಇದಕ್ಕೆ ಕಂಪೆನಿ ಸ್ಪಂದಿಸುವ ವಿಶ್ವಾಸವನ್ನು ನಿಗಮ ವ್ಯಕ್ತಪಡಿಸಿದೆ.

ಕಲ್ಲಿದ್ದಲು ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಉಷ್ಣ ಸ್ಥಾವರಗಳಿಗೆ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಇನ್ನೊಂದೆಡೆ ಮುಖ್ಯ ಎಂಜಿನಿಯರ್‌ರೊಬ್ಬರನ್ನು ಕಳುಹಿಸಲಾಗಿದ್ದು, ಎಸ್‌ಸಿಸಿಎಲ್‌ ಕಂಪೆನಿಯೊಂದಿಗೆ
ಮಾತುಕತೆಗೆ ಸೂಚಿಸಲಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ಹಾಗೂ ಎಸ್‌ಸಿಸಿಎಲ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಲ್ಲಿದ್ದಲು ಪಡೆಯಲು ಪ್ರಯತ್ನ ಮುಂದುವರಿಸಲಾಗಿದೆ.

ಜಿ. ಕುಮಾರನಾಯಕ್‌, ವ್ಯವಸ್ಥಾಪಕ ನಿರ್ದೇಶಕ, ಕೆಪಿಸಿಎಲ್‌

ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.