State Government; ಮೈತ್ರಿ ಕಹಳೆ: ದಿನಕ್ಕೆ 8 ತಾಸು ಪಾದಯಾತ್ರೆ

ಆ. 3ರ ಬೆಳಗ್ಗೆ 8.30ಕ್ಕೆ ಕೆಂಗೇರಿಯಲ್ಲಿ ಚಾಲನೆ ; ದಿನಕ್ಕೆ 2 ತಂಡಗಳ ನಡಿಗೆ

Team Udayavani, Jul 30, 2024, 7:05 AM IST

State Government; ಮೈತ್ರಿ ಕಹಳೆ: ದಿನಕ್ಕೆ 8 ತಾಸು ಪಾದಯಾತ್ರೆ

ಬೆಂಗಳೂರು: ರಾಜ್ಯ ಸರಕಾರದ ಮೇಲೆ ನಾಲ್ಕು ಆರೋಪಗಳನ್ನು ಹೊರಿಸಿ ರಣಕಹಳೆ ಮೊಳಗಿಸಲು ಟೊಂಕ ಕಟ್ಟಿ ನಿಂತಿರುವ ಬಿಜೆಪಿ-ಜೆಡಿಎಸ್‌ ಮಿತ್ರಪಕ್ಷಗಳು ಬೆಂಗಳೂರು-ಮೈಸೂರು ನಡುವೆ ಪಾದಯಾತ್ರೆಗೆ ಸರ್ವ ಸಿದ್ಧತೆಗಳನ್ನು ಆರಂಭಿಸಿವೆ. ಆ. 3ರಿಂದ 10ರ ವರೆಗೆ ಪ್ರತೀ ದಿನ ಎರಡು ತಂಡಗಳು ಪಾದಯಾತ್ರೆ ನಡೆಸಲಿದ್ದು, ನಿತ್ಯ ಸರಾಸರಿ 8 ತಾಸು ನಡೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬೆಳಗ್ಗೆ 8 ಗಂಟೆಗೆ ಆರಂಭವಾಗುವ ಪಾದಯಾತ್ರೆ ಅಪರಾಹ್ನ 2 ಗಂಟೆ ವರೆಗೆ ಸಾಗಲಿದೆ. ಭೋಜನದ ಬಳಿಕ ಮತ್ತೊಂದು ತಂಡವು ಸಂಜೆ 4ರಿಂದ 6ರ ವರೆಗೆ ಸಾಗುವ ಬಗ್ಗೆ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಇದರ ಜತೆಗೆ 7 ತಂಡಗಳನ್ನು ರಚಿಸಿ ಜವಾಬ್ದಾರಿಗಳನ್ನು ಹಂಚಲಾಗಿದೆ.

ಪ್ರತೀ ತಂಡಕ್ಕೆ ಹೊಣೆಗಾರಿಕೆ
ರವಿವಾರವಷ್ಟೇ ಉಭಯ ಪಕ್ಷಗಳ ಸಮನ್ವಯ ಸಭೆ ನಡೆಸಿ ಪಾದಯಾತ್ರೆಯ ರೂಪುರೇಷೆ ಸಿದ್ಧಪಡಿಸಲಾಗಿತ್ತು. ಇದಕ್ಕೆ ಪೂರಕವಾಗಿ ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ಬಿಜೆಪಿಯು ಪಾದಯಾತ್ರೆಯ ಯಶಸ್ಸಿಗಾಗಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿಕೊಂಡಿದೆ. ಪಾದಯಾತ್ರೆಯ ನಿರ್ವಹಣೆಗಾಗಿ ತಂಡಗಳನ್ನು ರಚಿಸಿ, ಪ್ರತೀ ತಂಡಕ್ಕೂ ಹೊಣೆಗಾರಿಕೆ ನೀಡಲಾಗಿದೆ.

ಕೆಂಗೇರಿಯಲ್ಲಿ ಚಾಲನೆ
ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆ. 3ರ ಬೆಳಗ್ಗೆ 8.30ಕ್ಕೆ ಕೆಂಗೇರಿ ಬಳಿಯ ಕೆಂಪಮ್ಮ ದೇವಿ ಹಾಗೂ ಪಂಚಮುಖಿ ಗಣಪತಿ ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸಿ ಪಾದಯಾತ್ರೆಗೆ ಚಾಲನೆ ನೀಡಲು ನಿರ್ಣಯಿಸಲಾಗಿದೆ. ಮಾಜಿ ಸಿಎಂ ಬಿಎಸ್‌ವೈ, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಎಚ್‌.ಡಿ. ಕುಮಾರಸ್ವಾಮಿ ಸಹಿತ ಉಭಯ ಪಕ್ಷಗಳ ನಾಯಕರು ಚಾಲನೆ ನೀಡಲಿದ್ದಾರೆ ಎಂದರು.

ಮಾರ್ಗ ಇಂದು ಅಂತಿಮ: ಒಟ್ಟು 130 ಕಿ.ಮೀ. ದೂರದ ಪಾದಯಾತ್ರೆ ಇದಾಗಿರಲಿದ್ದು, ನಿತ್ಯ ಸರಾಸರಿ 18-20 ಕಿ.ಮೀ. ಕ್ರಮಿಸ ಬೇಕಿದೆ. ಪಾದಯಾತ್ರೆ ಸಾಗುವ ಮಾರ್ಗ, ವಾಸ್ತವ್ಯ ಹೂಡಬೇಕಾದ ಸ್ಥಳ, ಕಿರು ಸಭೆ ಅಥವಾ ಸಮಾವೇಶ ಏರ್ಪಡಿಸಬೇಕಾದ ಜಾಗ ಇತ್ಯಾದಿಗಳಿನ್ನೂ ಅಂತಿಮಗೊಂಡಿಲ್ಲ. ಇದಕ್ಕಾಗಿ ಮಂಗಳವಾರ ತಾಲೀಮು ನಡೆಸಲಿರುವ ಒಂದು ತಂಡವು ಪಾದಯಾತ್ರೆ ಮಾರ್ಗ ಹಾಗೂ ತಂಗಬೇಕಾದ ಸ್ಥಳದ ಸಮೀಕ್ಷೆ ನಡೆಸಲಿದೆ. ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಪಾದಯಾತ್ರೆಯ ಮಾರ್ಗನಕ್ಷೆ ಬಗ್ಗೆಯೂ ಚರ್ಚೆಗಳು ನಡೆದಿದ್ದು, ಶೀಘ್ರ ಅಂತಿಮಗೊಳ್ಳುವ ಸಾಧ್ಯತೆ ಇದೆ.

7 ದಿನ; 7 ತಂಡ: 7 ದಿನಗಳ ಪಾದಯಾತ್ರೆಯ ನಿರ್ವಹಣೆಗಾಗಿ ದಿನಕ್ಕೊಂದ ರಂತೆ 7 ತಂಡಗಳನ್ನು ರಚಿಸಿದ್ದು, ಅದರಲ್ಲಿ 8 ವಿಧಾನಸಭಾ ಕ್ಷೇತ್ರಗಳ ಶಾಸಕರು, ಪರಾಜಿತ ಅಭ್ಯರ್ಥಿ, ಜಿಲ್ಲಾಧ್ಯಕ್ಷರು, ವಿವಿಧ ಮೋರ್ಚಾ, ಪ್ರಕೋಷ್ಠ, ವಿಭಾಗ ಸೇರಿ ಪಕ್ಷದ ಪದಾಧಿಕಾರಿಗಳು ಇರಲಿದ್ದಾರೆ.

ಪ್ರತೀ ಕ್ಷೇತ್ರದಿಂದ 200-500 ಜನರನ್ನು ಕರೆತರುವ ಗುರಿ: ಪಾದಯಾತ್ರೆ ಮಾಡುವವರಿಗೆ ಪ್ರತೀ ದಿನ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಭೋಜನದ ವ್ಯವಸ್ಥೆಯನ್ನು ತಂಡ ಮಾಡಲಿದ್ದು, ದಾರಿಯುದ್ದಕ್ಕೂ ಧ್ವನಿವರ್ಧಕವುಳ್ಳ ವಾಹನ, ಕಲಾತಂಡಗಳ ನಿರ್ವಹಣೆ, ಮಳೆ ಬಂದರೆ ತಂಗಲು ವ್ಯವಸ್ಥೆ, ವೈದ್ಯೋಪಚಾರ ಇತ್ಯಾದಿ ವ್ಯವಸ್ಥೆ ಇರಲಿದೆ.
ಪ್ರತೀ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 200ರಿಂದ ಗರಿಷ್ಠ 500 ಜನರನ್ನು ಕರೆತರುವ ಗುರಿ ಕೊಡಲಾಗಿದ್ದು, 8 ವಿಧಾನಸಭಾ ಕ್ಷೇತ್ರಗಳಷ್ಟೇ ಅಲ್ಲದೆ ವಿವಿಧ ಮೋರ್ಚಾ, ಪ್ರಕೋಷ್ಠ ಮತ್ತು ವಿಭಾಗಕ್ಕೂ ಈ ರೀತಿಯ ಗುರಿ ನೀಡಲಾಗಿದೆ.

ಹೇಗಿರಲಿದೆ ಮಾರ್ಗ ನಕ್ಷೆ?
ದಿನ 1: ಕೆಂಗೇರಿ ಸಮೀಪದಿಂದ ಬಿಡದಿ
ದಿನ 2: ಬಿಡದಿಯಿಂದ ರಾಮನಗರ
ದಿನ 3: ರಾಮನಗರದಿಂದ ಚನ್ನಪಟ್ಟಣ
ದಿನ 4: ಚನ್ನಪಟ್ಟಣದಿಂದ ಮದ್ದೂರು
ದಿನ 5: ಮದ್ದೂರಿಂದ ಮಂಡ್ಯ
ದಿನ 6: ಮಂಡ್ಯದಿಂದ ಶ್ರೀರಂಗಪಟ್ಟಣ
ದಿನ 7: ಶ್ರೀರಂಗಪಟ್ಟಣದಿಂದ ಮೈಸೂರಿನ ಮಹಾರಾಜಾ ಕಾಲೇಜು

ಮುಡಾ, ವಾಲ್ಮೀಕಿ ನಿಗಮದ ಹಗರಣಗಳನ್ನು ಖಂಡಿಸಿ ಆ. 3ರಿಂದ ಪಾದಯಾತ್ರೆ ನಡೆಸಲಿದ್ದು, ಪಾದಯಾತ್ರೆಯ ಯಶಸ್ಸಿಗಾಗಿ 7 ತಂಡಗಳನ್ನು ರಚಿಸಿದ್ದೇವೆ. ನಮ್ಮ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಪಾರದರ್ಶಕ, ಭ್ರಷ್ಟಾಚಾರರಹಿತ ಎಂದೆಲ್ಲ ಹೇಳಿಕೊಂಡು ಅಧಿಕಾರಕ್ಕೆ ಬಂದವರು ಅದಕ್ಕೆ ವಿರುದ್ಧವಾಗಿ ಆಡಳಿತ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ದಲ್ಲಿ ಚರ್ಚಿಸಲೆಂದೇ ಇರುವ ವೇದಿಕೆಯಾದ ಅಧಿವೇಶನದಿಂದ ಪಲಾಯನ ಮಾಡಿದ್ದಾರೆ. ಇವರ ವಿರುದ್ಧ ಹೋರಾಡುವ ಅನಿವಾರ್ಯ ಬಂದಿದೆ.
– ಆರ್‌. ಅಶೋಕ್‌, ವಿಧಾನಸಭೆ ವಿಪಕ್ಷ ನಾಯಕ

ಇಂದಲ್ಲ ನಾಳೆ ಸರಕಾರ ಬೀಳುತ್ತದೆ ಎಂದು ಬಿಜೆಪಿಯವರು ಹೇಳುತ್ತಲೇ ಇರುತ್ತಾರೆ. ಅವರಿಗೆ ಇನ್ನೇನು ಕೆಲಸ? ವಿಪಕ್ಷಗಳು ಕ್ರಿಯಾತ್ಮಕವಾಗಿ ಕೆಲಸ ಮಾಡುವುದಾದರೆ ಮಾಡಲಿ.
-ಡಿ.ಕೆ. ಸುರೇಶ್‌, ಮಾಜಿ ಸಂಸದ

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.