ವಿದ್ಯುತ್ ಸಂಪರ್ಕ ಪಡೆಯಲು ವಾಸ್ತವ್ಯ ಪ್ರಮಾಣ ಪತ್ರ ಕಡ್ಡಾಯ ನಿಯಮ ರದ್ದು ಮಾಡಿದ ರಾಜ್ಯಸರ್ಕಾರ


Team Udayavani, Jul 2, 2022, 12:38 PM IST

ವಿದ್ಯುತ್ ಸಂಪರ್ಕ ಪಡೆಯಲು ಓಸಿ ಕಡ್ಡಾಯ ಎಂಬ ನಿಯಮ ರದ್ದು ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ವಾಸ್ತವ್ಯ ಪ್ರಮಾಣ ಪತ್ರ (ಓಸಿ) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಿಸಲ್ಪಟ್ಟಿದ್ದ ಬೆಂಗಳೂರಿನ ನಾಗರಿಕರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದೆ.

ವಿದ್ಯುತ್ ಸಂಪರ್ಕ ಪಡೆಯುವುದಕ್ಕೆ ಓಸಿ ಕಡ್ಡಾಯ ಎಂಬ ನಿಯಮವನ್ನು ತೆಗೆದು ಹಾಕಲಾಗಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ್ದ ತಿದ್ದುಪಡಿ ಆದೇಶಕ್ಕೆ ಶುಕ್ರವಾರ ರಾತ್ರಿ ರಾಜ್ಯಪತ್ರ ಹೊರಡಿಸಲಾಗಿದೆ. ನಿನ್ನೆಯಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಐದು ಲಕ್ಷ ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಈ ಕತ್ತಲೆ ಭಾಗ್ಯದ ಕಾನೂನನ್ನು ನಮ್ಮ ಸರಕಾರ ಬದಲಾಯಿಸಿದ್ದು, ಎಲ್ಲರ ಮನೆಯಲ್ಲೂ ಬೆಳಕು ಮೂಡಲಿದೆ ಎಂದು ಇಂಧನ, ಕನ್ನಡ- ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಟ್ವೀಟ್ ಮೂಲಕ ಹೊಸ ಆದೇಶದ ಮಾಹಿತಿ ಹಂಚಿಕೊಂಡಿದ್ದಾರೆ.

ನಿರ್ಮಾಣ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ನೆಪ‌ ನೀಡಿ ಮನೆ, ವಸತಿ ಸಮುಚ್ಚಯಗಳಿಗೆ ಬಿಬಿಎಂಪಿ ವಾಸ್ತವ್ಯ ಪ್ರಮಾಣ ಪತ್ರ ನಿರಾಕರಿಸಿದ್ದರೆ ಅಂಥ ಮನೆ ಹಾಗೂ ಫ್ಲಾಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅಂದಿನ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದರು. ‌ಇದರಿಂದ ಸುಮಾರು ಐದು ಲಕ್ಷಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ತೊಂದರೆಗೆ ಒಳಗಾಗಿದ್ದವು.

ಇದನ್ನೂ ಓದಿ:ನಿಮಗೂ ಸ್ಪೂರ್ತಿಯಾಗಬಹುದು…; 48 ವರ್ಷ ಹಳೆಯ ತಮ್ಮ ರೆಸ್ಯೂಮ್ ಹಂಚಿಕೊಂಡ ಬಿಲ್ ಗೇಟ್ಸ್

ಕಳೆದ ಐದು ವರ್ಷಗಳಿಂದ ಈ ಸಮಸ್ಯೆ ಬೆಂಗಳೂರಿನ ನಾಗರಿಕರನ್ನು ಕಾಡುತ್ತಿತ್ತು. ಬಿಬಿಎಂಪಿ ಹಾಗೂ ಇಂಧನ‌ ಇಲಾಖೆಯ ಈ ಧೋರಣೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿಯ ಬೆಂಗಳೂರು ಶಾಸಕರು ಇಂಧನ ಸಚಿವ‌ ವಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ನಿಯಮ‌ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಕೈಗಾರಿಕೆ ಇಲಾಖೆ ಹಾಗೂ ಕಾಸಿಯಾ ಸಂಸ್ಥೆ ಕೂಡಾ ನಿಯಮ‌ ಬದಲಾವಣೆ ಕೋರಿತ್ತು. ಈ ಹಿನ್ನೆಲೆಯಲ್ಲಿ ಸಾಧ್ಯಾಸಾಧ್ಯತೆ ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಸುನೀಲ್ ಕುಮಾರ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದರು. ‌ನಂತರ ಕೆಇಆರ್ ಸಿಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಆಯೋಗ ಹೊರಡಿಸಿದ ಆದೇಶ ಈಗ ರಾಜ್ಯಪತ್ರದ ಮೂಲಕ ಅಧಿಕೃತಗೊಂಡಿದೆ. ಇನ್ನು‌ಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ಹಕ್ಕುಪತ್ರ ಇದ್ದರೆ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.