State Govt: ಕಾರ್ಡ್‌ ರದ್ದು ನಿಲ್ಲಿಸದಿದ್ದರೆ ಬೀಗ: ಅಶೋಕ್‌

ತತ್‌ಕ್ಷಣ ಬಡವರಿಗೆ ಮರಳಿಸಲು ಆಗ್ರಹ; ಪ್ರತಿಭಟನೆ ಎಚ್ಚರಿಕೆ

Team Udayavani, Nov 21, 2024, 12:22 AM IST

State Govt: ಕಾರ್ಡ್‌ ರದ್ದು ನಿಲ್ಲಿಸದಿದ್ದರೆ ಬೀಗ: ಅಶೋಕ್‌

ಬೆಂಗಳೂರು: ರಾಜ್ಯ ಸರಕಾರ ಬಡವರಿಗೆ ಬಿಪಿಎಲ್‌ ಕಾರ್ಡ್‌ ಮರಳಿ ನೀಡಬೇಕು. ಕಾರ್ಡ್‌ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

ವೃಷಭಾವತಿ ನಗರ, ನಂದಿನಿ ಲೇಔಟ್‌ಗಳಲ್ಲಿ ಬಿಪಿಎಲ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ| ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರಕಾರಕ್ಕೆ ಇರಬೇಕು ಎಂದರು.

ಬಿಪಿಎಲ್‌ ಕಾರ್ಡ್‌ ಕಳೆದುಕೊಂಡವರು ಯಾರೂ ಶ್ರೀಮಂತ ರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್‌ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ಬ್ಯಾಂಕಿನಲ್ಲಿ ಸಾಲ ಕೇಳಲು ಕೂಡ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೆ ಕಾಂಗ್ರೆಸ್‌ ಸರಕಾರ, ಮನೆಗೆ ಭೇಟಿ ನೀಡದೆ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಿದೆ. ಇನ್ನೂ 14 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತದೆ. ಇದಕ್ಕೂ ಮುನ್ನ ಒಂದು ನೋಟಿಸ್‌ ನೀಡಿ, ಮಾಹಿತಿ ಪಡೆಯಬಹುದಿತ್ತು. ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕಣ್ಣಿಲ್ಲದ ಸರಕಾರ ಹೇಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿಗೆ ದುಡ್ಡಿಲ್ಲ
ಕಾಂಗ್ರೆಸ್‌ ಸರಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರಕಾರದ ಕತ್ತುಪಟ್ಟಿ ಹಿಡಿದಿ¨ªಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್‌ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಕಾರ್ಡ್‌ ರದ್ದುಪಡಿಸಿದರೆ 20 ಸಾವಿ ರ ಕೋಟಿ ರೂ. ಬರಬಹುದು. ಆ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು. ಇದು ಕಾರ್ಡ್‌ ರದ್ದು ಮಾಡುವುದರ ಹಿಂದಿನ ಉದ್ದೇಶ ಎಂದರು.

 

ಟಾಪ್ ನ್ಯೂಸ್

5-plane-crash

Plane Crash: ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ: ಟೇಕ್ ಆಫ್ ಆದ ಕೆಲ ಕ್ಷಣಗಳಲ್ಲಿ ದುರಂತ

4-naxalites

Chikkamagalur: ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ: ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

1-horoscope

Horoscope: ಆಲಸ್ಯ ತೊಲಗಿಸಿದರೆ ಕ್ಷಿಪ್ರಫ‌ಲ, ಉತ್ಸಾಹ ವರ್ಧನೆ, ವಧೂವರ ಅನ್ವೇಷಕರಿಗೆ ಶುಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Karnataka ಕಾಂಗ್ರೆಸ್‌ನಲ್ಲಿ ಭಿನ್ನರಾಗ!: ಊಹಾಪೋಹಕ್ಕೆ ಸಚಿವರು ಗರಂ

suicide (2)

ಸಾವಿನಂಚಿನ ರೋಗಿಯ ಸುಖಮರಣಕ್ಕೆ ಸಮ್ಮತಿ : ಏನಿದು ನಿರ್ಧಾರ? ಅನುಮತಿ ಹೇಗೆ?

BJP 2

BJP; ಬಣ ಜಗಳ ದಿಲ್ಲಿ ವರಿಷ್ಠರ ಜಗಲಿಗೆ:ಬೊಮ್ಮಾಯಿ ಸಲಹೆ ಮೇರೆಗೆ ದಿಲ್ಲಿಗೆ ತೆರಳಲು ನಿರ್ಧಾರ

MUDA

MUDA; ಅಕ್ರಮ ವಹಿವಾಟು ಬಗ್ಗೆ ಯಾವುದೇ ಸಾಕ್ಷಿಯಿಲ್ಲ: ಸಿದ್ದರಾಮಯ್ಯ

chalavadi

MUDA ಹಗರಣ ಮಾಡಿಲ್ಲ ಅಂದಮೇಲೆ ಸೈಟ್‌ ಏಕೆ ವಾಪಸ್‌ ಕೊಟ್ಟಿರಿ?

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

5-plane-crash

Plane Crash: ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ: ಟೇಕ್ ಆಫ್ ಆದ ಕೆಲ ಕ್ಷಣಗಳಲ್ಲಿ ದುರಂತ

4-naxalites

Chikkamagalur: ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ: ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.