![Parameshwar](https://www.udayavani.com/wp-content/uploads/2024/07/Parameshwar-415x249.jpg)
ಬಕ್ರೀದ್ ಹಬ್ಬದ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
Team Udayavani, Jul 8, 2022, 10:00 AM IST
![ಬಕ್ರೀದ್ ಹಬ್ಬದ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ](https://www.udayavani.com/wp-content/uploads/2022/07/bakrid-620x342.jpg)
ಬೆಂಗಳೂರು: ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಸೂಚಿಸಲಾಗಿದೆ.
ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ನೆರವೇರಿಸಬೇಕು.
ಇದನ್ನೂ ಓದಿ:ಭಾಷಣ ಮಾಡುತ್ತಿರುವಾಗಲೇ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ
ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
ಪೊಲೀಸ್ ಇಲಾಖೆ, ಪಶು ಪಾಲನಾ ಮತ್ತು ಪಶು ವೈದ್ಯ ಸೇವೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಟಾಪ್ ನ್ಯೂಸ್
![Parameshwar](https://www.udayavani.com/wp-content/uploads/2024/07/Parameshwar-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Parameshwar](https://www.udayavani.com/wp-content/uploads/2024/07/Parameshwar-150x90.jpg)
Congress Party; ನೋಟಿಸ್ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್
![Sunil-kumar](https://www.udayavani.com/wp-content/uploads/2024/07/Sunil-kumar-150x90.jpg)
CM Siddaramaiah; ಅನುದಾನ ಹಿಂಪಡೆದಂತೆ ಸೈಟ್ ವಾಪಸ್ ಕೊಡಿ: ಸುನಿಲ್ ವ್ಯಂಗ್ಯ
![Shivaraj-Thangadagi](https://www.udayavani.com/wp-content/uploads/2024/07/Shivaraj-Thangadagi-150x90.jpg)
Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ](https://www.udayavani.com/wp-content/uploads/2024/07/Aravinda-Limbavali-150x89.jpg)
Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.