Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ
Team Udayavani, May 16, 2024, 9:28 PM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ 2024ರ ಸಿಇಟಿಯಲ್ಲಿ ಪಠ್ಯಪುಸ್ತಕದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದ ಆರೋಪ-ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಕೆಇಎ ಕಾರ್ಯಕಾರಿ ನಿರ್ದೇಶಕಿ ಎಸ್.ರಮ್ಯಾ ಅವರನ್ನು ಎತ್ತಂಗಡಿ ಮಾಡಿದೆ.
ರಮ್ಯಾ ಅವರು ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಗೆ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಚ್.ಪ್ರಸನ್ನ ಅವರನ್ನು ನೇಮಿಸಿ ಆದೇಶಿಸಲಾಗಿದೆ.
ಸರ್ಕಾರವು ರಮ್ಯಾ ಅವರನ್ನು ಎತ್ತಂಗಡಿ ಮಾಡಿ ಆದೇಶಿಸಿದೆ. ಆ ಹುದ್ದೆಗೆ ತಾಂತ್ರಿಕ ಶಿಕ್ಷಣ ಇಲಾಖೆಯ ಹಾಲಿ ನಿರ್ದೇಶಕರಾಗಿದ್ದ ಎಚ್.ಪ್ರಸನ್ನ ಅವರಿಗೆ ಪ್ರಾಧಿಕಾರ ಕಾರ್ಯಕಾರಿ ನಿರ್ದೇಶಕ ಸ್ಥಾನವನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಪ್ರಸನ್ನ ಅವರು ಗುರುವಾರ ಮಧ್ಯಾಹ್ನವೇ ಪ್ರಾಧಿಕಾರಕ್ಕೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ. ರಮ್ಯಾ ಅಧಿಕಾರ ಹಸ್ತಾಂತರ ಮಾಡಿ ಹೊರ ನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪೂರ್ಣಾವಧಿ ನಿರ್ದೇಶಕರನ್ನು ನೇಮಿಸಿಲ್ಲ. ಜತೆಗೆ ರಮ್ಯಾ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ಏನಿದು ಆರೋಪ ?:
ಸಿಇಟಿಯಲ್ಲಿ 50 ಪಠ್ಯೇತರ ಪ್ರಶ್ನೆಗಳನ್ನು ಕೇಳಿದ ಆರೋಪ ಎದುರಿಸುತ್ತಿದ್ದ ಕೆಇಎ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಭಾರೀ ಆಕ್ರೋಶ ಹೊರಹಾಕಿದ್ದರು. ಇದು ಸಾಕಷ್ಟು ವಿವಾದಕ್ಕೆ ಸಿಲುಕಿ ಸರ್ಕಾರವೂ ಮುಜುಗರಕ್ಕೊಳಗಾಗಿತ್ತು. ಸರ್ಕಾರವು ತಜ್ಞರ ಸಮಿತಿ ರಚನೆ ಮಾಡಿ ಈ ಬಗ್ಗೆ ವರದಿ ಪಡೆದಿತ್ತು. ಆ ವೇಳೆ ಪಠ್ಯದಿಂದ ಹೊರತಾದ ಪ್ರಶ್ನೆಗಳು ಬಂದಿರುವುದು ಸಾಬೀತುಗೊಂಡಿತು ಎನ್ನಲಾಗಿದೆ. ಈ ಬೆಳವಣಿಗೆ ಬಳಿಕವೂ ಕೆಇಎ ಕಾರ್ಯಕಾರಿ ನಿರ್ದೇಶಕಿ ಹುದ್ದೆಯನ್ನು ರಮ್ಯಾ ಮುಂದುವರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.