State Govt; ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ
Team Udayavani, Oct 17, 2024, 12:07 AM IST
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕೂಗು ದಿನೇದಿನೆ ಹೆಚ್ಚುತ್ತಿದೆ. ಈ ಸಂಬಂಧ ರಾಜ್ಯ ಸರಕಾರದ ಮೇಲೆ ಒತ್ತಡಗಳೂ ಬರುತ್ತಿವೆ. ಇನ್ನು ಬುಧವಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗಾಗಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದು, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಕಾರವಾರದಲ್ಲಿ ಬುಧವಾರ ಸಾಂಕೇತಿಕ ಪ್ರತಿಭಟನೆ ನಡೆಯಿತು.
ರಾಯಚೂರಿನಲ್ಲಿ ಎಸ್ಸಿ ಒಳ ಮೀಸಲಾತಿ ಜಾರಿ ಐಕ್ಯ ಹೋರಾಟ ಸಮಿತಿಯಿಂದ ಬುಧವಾರ ಜಿಲ್ಲಾ ಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಈ ವೇಳೆ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾ ರೆ. ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿ ಮಾಡುವವರೆಗೂ ಯಾವುದೇ ರೀತಿಯ ಹುದ್ದೆ ಗಳ ಭರ್ತಿ ಮಾಡಬಾರದು ಎಂದು ಆಗ್ರಹಿಸಲಾಗಿದೆ.
ಹಾಸನದಲ್ಲಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟವು ಪ್ರತಿಭಟಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ. ಮೈಸೂರಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಪದಾಧಿಕಾರಿಗಳು ಪುರಭವನ ಆವರಣದಲ್ಲಿ ಪ್ರತಿಭಟಿಸಿದರು.
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಹಾಗೂ ಮಂಡ್ಯದಲ್ಲಿ ಮಾದಿಗರ ಒಳಮೀಸಲಾತಿ ಜಾರಿಗಾಗಿ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಆಕ್ರೋಶವನ್ನು ಹೊರಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KEA: ಯುಜಿನೀಟ್; ಮಾಪ್ಅಪ್ ಸುತ್ತಿನ ಸೀಟು ಹಂಚಿಕೆ ಪ್ರಕಟ
Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ
KSRTC: ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ
G Parameshwara: ಹರಿಪ್ರಸಾದ್ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್ ಅಸಾಧ್ಯ
Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ
MUST WATCH
ಹೊಸ ಸೇರ್ಪಡೆ
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ
Udupi: “ಸಾಗರ್ ಕವಚ್’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್, ವಾಹನಗಳು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.