![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 5, 2024, 5:48 PM IST
ಕಲಬುರಗಿ: ಬಿಸಿಲು ನಾಡು ಎಂದೇ ಖ್ಯಾತಿ ಪಡೆದಿರುವ ಜಿಲ್ಲೆಯಲ್ಲಿ ಕಳೆದ ವಾರದಿಂದ ರಣ ಬಿಸಿಲು ಕೇಕೇ ಹಾಕುತ್ತಿದ್ದು, ಜನಜೀವನ ಮೇಲೆ ಪರಿಣಾಮ ಬೀರುತ್ತಿದೆ. ಶುಕ್ರವಾರ ಆಳಂದ ತಾಲೂಕಿನ ಮಾದನಹಿಪ್ಪರಗಾ ಹೊಬಳಿಯ ನಿಂಬಾಳ -ಹಡಲಗಿಯಲ್ಲಿ ದಾಖಲೆಯ 44. 5 ಡಿಗ್ರಿ ಸೆಲ್ಸಿಯಸ್ ಬಿಸಿಲು ದಾಖಲಾಗಿದೆ.
ಕಳೆದ ವಾರದಿಂದ 44 ಡ್ರಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದ್ದು, ರಾಜ್ಯದಲ್ಲೇ ಇದು ಅತ್ಯಧಿಕ ತಾಪಮಾನ ಕಲಬುರಗಿಯದ್ದಾಗಿದೆ. ರಣ ರಣ ಬಿಸಿಲಿನಿಂದ ಜನ ಕಂಗೆಟ್ಟಿದ್ದು, ದಿನಚರಿಯೇ ಬದಲು ಮಾಡಿದೆ. ಮಧ್ಯಾಹ್ನ 12ರಿಂದ ಸಂಜೆ 6 ರವರೆಗೆ ಹೊರಗೆ ಬಾರದಂತೆ ಮಾಡಿದೆ.
ಜಿಲ್ಲೆಯ ಜೀವನದಿ ಭೀಮಾ ನದಿ ಸಂಪೂರ್ಣ ಬತ್ತಿರುವುದು ಉರಿ ಬಿಸಿಲಿಗೆ ತುಪ್ಪ ಸವರಿದಂತಾಗಿದೆ. ಬಿಸಿಲು ಹೀಗೆ ಮುಂದುವರೆದರೆ ಜನಜೀವನ ಅಸ್ತವ್ಯಸ್ತಗೊಳ್ಳುವ ಆತಂಕತೆ ಕಂಡು ಬರುತ್ತಿದೆ.ಪರಿಣಾಮಕಾರಿ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ವಹಿಸಿಕೊಳ್ಳುವಂತೆ ಜಿಲ್ಲಾಡಳಿತ ಜನತೆಗೆ ಕರೆ ನೀಡಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.