ಹೈಕೋರ್ಟ್ ನಿಂದ ಸುನಿಲ್‌ ಕುಮಾರ್‌ ಗೆ ತರಾಟೆ: ಕೊನೆಗೂ ವಾರೆಂಟ್‌ಗೆ ತಡೆಯಾಜ್ಞೆ

ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಪ್ರಕರಣ

Team Udayavani, Aug 10, 2024, 9:25 PM IST

sunil kumar

ಬೆಂಗಳೂರು: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿರುವ ವಾರೆಂಟ್‌ಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದರೆ ಆಕ್ರೋಶದಲ್ಲಿ ಸುನಿಲ್‌ ಕುಮಾರ್‌ ಅವರು ಮುತಾಲಿಕ್‌ ವಿರುದ್ಧ ನೀಡಿದ್ದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದೆ.

ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮೊದಲು ತಡೆಯಾಜ್ಞೆ ನೀಡಲು ನಿರಾಕರಿಸಿತು. ಆದರೆ, ಪಕ್ಷವು ವಿಪ್‌ ಜಾರಿ ಮಾಡಿದ್ದರಿಂದ ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸುನಿಲ್‌ ಕುಮಾರ್‌ ಪರ ವಕೀಲ ವಿನೋದ್‌ ಕುಮಾರ್‌ ಪೀಠದ ಗಮನಕ್ಕೆ ತಂದ ಬಳಿಕ ನ್ಯಾಯಮೂರ್ತಿ ತಡೆಯಾಜ್ಞೆ ನೀಡಿದರು.

ವಕೀಲ ವಿನೋದ್ ಕುಮಾರ್‌ ಅವರು ಚುನಾವಣೆ ಸಂದರ್ಭದಲ್ಲಿ ‘ ದೂರುದಾರ ಪ್ರಮೋದ್‌ ಮುತಾಲಿಕ್‌ ಅರ್ಜಿದಾರರ ವಿರುದ್ಧ ಹೇಳಿಕೆ ನೀಡಿದ್ದಾರೆ. ಪ್ರಮೋದ್ ಮುತಾಲಿಕ್‌ ನೀಡಿದ ಹೇಳಿಕೆಗೆ ಪ್ರತಿ ಹೇಳಿಕೆ ನೀಡಲಾಗಿದೆ. ಹೇಳಿಕೆಗೆ ಪ್ರತಿ ಹೇಳಿಕೆ ನೀಡಿದಾಗ ಮಾನನಷ್ಟ ಪ್ರಕರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ’ ಎಂದು ಹೇಳಿದರು.

ತರಾಟೆಗೆ ತೆಗದುಕೊಂಡ ನ್ಯಾಯ ಪೀಠ ”ಸುನಿಲ್‌ ಕುಮಾರ್‌ ಅವರ ಹೇಳಿಕೆ ಮೇಲ್ನೋಟಕ್ಕೆ ಮಾನಹಾನಿಕರ ಎಂಬುದು ಸ್ಪಷ್ಟವಾಗುತ್ತದೆ. ಚುನಾವಣೆ ಸಮಯ ಎಂದು ಏನು ಬೇಕಾದರೂ ಮಾತನಾಡಬಹುದೇ ? ಅರ್ಜಿದಾರರು ನೀಡಿರುವ ಹೇಳಿಕೆಯನ್ನು ವಿಚಾರಣಾ ನ್ಯಾಯಾಲಯವು ಉಲ್ಲೇಖಿಸಿ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವುದನ್ನು ವಿವರಿಸಿದೆ. ಹೇಳಿಕೆ ನೀಡುವುದಕ್ಕೂ ಒಂದು ಮಿತಿ ಇರಬೇಕು. ಟೈಗರ್‌ ಗ್ಯಾಂಗ್‌ ಏನು? ದೂರುದಾರರು ಆ ಟೈಗರ್‌ ಗ್ಯಾಂಗಿನ ಭಾಗವೇ? ಅರ್ಜಿದಾರರು ಹೇಗೆ ಆ ಹೇಳಿಕೆ ನೀಡಿದರು?’ ಎಂದು ಪ್ರಶ್ನೆಗಳನ್ನು ಮುಂದಿಟ್ಟಿದೆ.

“ಇದು ನಿಜಕ್ಕೂ ಮಾನನಷ್ಟ ಪ್ರಕರಣವಾಗಿದೆ. ಮಾನಹಾನಿ ಹೇಳಿಕೆ ನೀಡುವುದು ಸಾರ್ವಜನಿಕ ಶಾಂತಿಭಂಗವನ್ನು ಉಂಟು ಮಾಡಲು ಕಾರಣವಾಗುತ್ತದೆ.ಶಾಸಕರಾದವರು ಈ ರೀತಿ ಮಾತನಾಡಬಾರದು” ಎಂದು ತರಾಟೆಗೆ ತೆಗೆದುಕೊಂಡಿತು.

ಕಿಡಿ ಕಾರಿದ್ದ ಸುನಿಲ್ ಕುಮಾರ್
ಕಳೆದ ವಿಧಾನಸಭೆ ಚುನಾವಣೆಯಲ್ಲಿ ತನ್ನ ವಿರುದ್ಧ ಸಮರ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದ ಪ್ರಮೋದ್‌ ಮುತಾಲಿಕ್‌ ವಿರುದ್ಧ ಫಲಿತಾಂಶದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದ ಸುನೀಲ್‌ ಕುಮಾರ್‌ ‘ಪ್ರಮೋದ್ ಮುತಾಲಿಕರೇ ಹಣಕಾಗಿ ಉತ್ತರ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಯನ್ನು ಟೈಗರ್‌ ಗ್ಯಾಂಗಿನ ನೆಪದಲ್ಲಿ ಎಷ್ಟು ಬಾರಿ ಮಾಡಿಸಿದ್ದೀರಿ ನೀವು?’ ಎಂದು ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.