ಮುಹೂರ್ತಕ್ಕೆ ಮುನ್ನ ಮದುವೆಯಾಗಿ ಜನತಾ ಕರ್ಫ್ಯೂಗೆ ಬೆಂಬಲ


Team Udayavani, Mar 23, 2020, 3:04 AM IST

janata

ದಾವಣಗೆರೆ: ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ವಿವಾಹ ಮುಹೂರ್ತಕ್ಕೆ ಮುನ್ನವೇ ಮದುವೆ ಆಗುವ ಮೂಲಕ ನೂತನ ವಧು-ವರರು, ಕುಟುಂಬದವರು ಬೆಂಬಲ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯ ಶೇಖರಪ್ಪ ನಗರ ಬಿ ಬ್ಲಾಕ್‌ ನಿವಾಸಿ ಜಿ. ಅಶೋಕ್‌ ಮತ್ತು ಅದೇ ಶೇಖರಪ್ಪ ನಗರದ ವಿ. ಪವಿತ್ರಾ (ಪವಿ) ಎನ್ನುವವರ ವಿವಾಹ ನಗರದ ಶ್ರೀಮತಿ ರಾಜನಹಳ್ಳಿ ಜಾನಾಬಾಯಿ ರಾಜನಹಳ್ಳಿ ಶ್ರೀನಿವಾಸ ಮೂರ್ತಿಯವರ ಧರ್ಮಶಾಲೆಯಲ್ಲಿ ನಿಗದಿಯಾಗಿತ್ತು.

ಭಾನುವಾರ ಬೆಳಗ್ಗೆ 10.30ಕ್ಕೆ ಮುಹೂರ್ತ ಇತ್ತು. ಮೋದಿ ಅವರು ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಬೆಂಬಲ ನೀಡಬೇಕು ಎಂಬ ಸದುದ್ದೇಶದಿಂದ ನಿಗದಿತ ಮುಹೂರ್ತಕ್ಕಿಂತಲೂ ಮುನ್ನವೇ ಇಬ್ಬರು ಮದುವೆಯಾಗುವ ಮೂಲಕ ಆದರ್ಶ ಮೆರೆದರು. ಇಡೀ ದೇಶದ ಜನರಿಗೆ ಒಳ್ಳೆಯದಾಗಲಿ ಎಂದು ಮೋದಿ ಅವರು ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ.

ನಾವು ಅದಕ್ಕಾಗಿ ಮುಹೂರ್ತಕ್ಕಿಂತ ಮೊದಲೇ ಮದುವೆ ಮಾಡಲು ನಿಶ್ಚಯಿಸಿ, ಅದರಂತೆ ಮದುವೆ ಮಾಡಿದ್ದೇವೆ. ಆ ಮೂಲಕ ಜನತಾ ಕರ್ಫ್ಯೂಗೆ ಬೆಂಬಲ ನೀಡಿದ್ದೇವೆ ಎಂದು ಅಶೋಕ್‌ ಸಹೋದರ ಮಣಿ ತಿಳಿಸಿದರು. ಮೋದಿ ಅವರು ಜನರಿಗೆ ಒಳ್ಳೆಯದಾಗಲಿ ಎಂದು ಇವತ್ತು ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಕೇಳಿಕೊಂಡಿದ್ದಾರೆ. ನಾವು ಅದಕ್ಕೆ ಸಪೋರ್ಟ್‌ ಮಾಡಬೇಕು ಎಂದು ಮುಹೂರ್ತಕ್ಕಿಂತಲೂ ಮೊದಲೇ ಮದುವೆ ಮಾಡಿದ್ದೇವೆ ಎಂದು ವರನ ತಂದೆ ಗಣೇಶಪ್ಪ ತಿಳಿಸಿದರು.

ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಧಾನಮಂತ್ರಿಯವರೇ ಕರೆ ನೀಡಿದ್ದಾರೆ. ಹಂಗಾಗಿ ನಮ್ಮ ಗೆಳೆಯನ ಮದುವೆಯನ್ನ ಬೇಗನೆ ಮಾಡಿದ್ದೇವೆ ಎಂದು ಗೆಳೆಯ ಶಿವಕುಮಾರ್‌ ತಿಳಿಸಿದರು. ಅಶೋಕ್‌ ಮತ್ತು ಪವಿತ್ರ ವಿಜಯದ ಸಂಕೇತ ತೋರುವ ಮೂಲಕ ಕರ್ಫ್ಯೂಗೆ ಬೆಂಬಲ ನೀಡಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.