![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 9, 2021, 6:00 AM IST
ಬೆಂಗಳೂರು, ಜ. 8: 2030ರೊಳಗೆ ರಾಜ್ಯದ ಪ್ರಗತಿ ಸಾಧಿಸುವ ಸಲುವಾಗಿ ಎಲ್ಲ 17 ಸುಸ್ಥಿರ ಗುರಿ ಸಾಧಿಸಲು ಸೂಕ್ತ ಕಾರ್ಯ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧ ಸಭಾಂಗಣದಲ್ಲಿ ನಡೆದ ಪ್ರಥಮ ಯೋಜನಾ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯಲ್ಲಿ ರಾಜ್ಯ 100ಕ್ಕೆ 66 ಅಂಕಗಳೊಂದಿಗೆ ದೇಶದಲ್ಲಿ 6ನೇ ಸ್ಥಾನದ
ಲ್ಲಿದೆ. ಬಡತನ ಮುಕ್ತ, ಹಸಿವು ಮುಕ್ತ, ಲಿಂಗ ಸಮಾನತೆ, ಕೈಗಾರಿಕೆ, ನಾವೀನ್ಯ ಮತ್ತು ಮೂಲ ಸೌಕರ್ಯ ಹಾಗೂ ಸುಸ್ಥಿರ ನಗರಗಳು ಮತ್ತು ಸಮುದಾಯಗಳೆಂಬ ಆರು ಗುರಿಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಬೇಕಿದೆ ಎಂದರು. ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಪ್ರಮುಖ ತೀರ್ಮಾನಗಳು :
ರಾಜ್ಯದಲ್ಲಿ 1800 ಯೋಜನೆಗಳಿವೆ. ಅವುಗಳಲ್ಲಿ 300ಕ್ಕೂ ಹೆಚ್ಚು ಯೋಜನೆಗಳಿಗೆ 1ಕೋಟಿಗೂ ಕಡಿಮೆ ಬಜೆಟ್ ಇದೆ. ಅಂತಹ ಯೋಜನೆಗಳನ್ನು ಬೇರೆ ಯೋಜನೆಗಳ ಜತೆ ವಿಲೀನ ಮಾಡಲಾಗುವುದು. ಆತ್ಮ ನಿರ್ಭರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.–ಡಾ| ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಯೋಜನಾ ಇಲಾಖೆ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.