ಸಿಂಡಿಕೇಟ್‌ ಬ್ಯಾಂಕ್‌ ಒಟ್ಟಾರೆ ವಹಿವಾಟು 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ


Team Udayavani, Feb 12, 2020, 3:05 AM IST

syndicate

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ತ್ತೈಮಾಸಿಕದಲ್ಲಿ ಸಿಂಡಿಕೇಟ್‌ ಬ್ಯಾಂಕ್‌ 435 ಕೋಟಿ ರೂ.ನಿವ್ವಳ ಲಾಭ ಗಳಿಸಿದ್ದಲ್ಲದೇ, ಬ್ಯಾಂಕ್‌ನ ಒಟ್ಟಾರೆ ವಹಿವಾಟನ್ನು ಐದು ಲಕ್ಷ ಕೋಟಿ ರೂ.ಗೆ ಏರಿಸಿ ದಾಖಲೆ ಮಾಡಿದೆ.

ಗಾಂಧಿನಗರದ ಸಿಂಡಿಕೇಟ್‌ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಪ್ರಸಕ್ತ ಆರ್ಥಿಕ ವರ್ಷದ ಮೂರನೇ ತ್ತೈಮಾಸಿಕದ ಫ‌ಲಿತಾಂಶ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೃತ್ಯುಂಜಯ ಮಹಾಪಾತ್ರ, 2019-20ನೇ ಆರ್ಥಿಕ ವರ್ಷದ ಮೂರನೇ ತ್ತೈಮಾಸಿಕದ ಅಂತ್ಯಕ್ಕೆ ಸಿಂಡಿಕೇಟ್‌ ಬ್ಯಾಂಕ್‌ ಐದು ಲಕ್ಷ ಕೋಟಿ ರೂ. ವಹಿವಾಟು ನಡೆಸಿ ದಾಖಲೆ ಮಾಡಿದೆ ಎಂದರು.

ಕಳೆದ ಆರ್ಥಿಕ ವರ್ಷದ (2018-19)ಮೂರನೇ ತ್ತೈಮಾಸಿಕದಲ್ಲಿ 108 ಕೋಟಿ ರೂ. ಇದ್ದ ನಿವ್ವಳ ಲಾಭವು ಈ ಬಾರಿ 435 ಕೋಟಿ ರೂ.ಗೆ ಏರಿಕೆಯಾಗಿದೆ. ಪ್ರಮುಖವಾಗಿ ಒಟ್ಟು ಅನುತ್ಪಾದಕ ಆಸ್ತಿ ಪ್ರಮಾಣ ಅನುಪಾತವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 12.54 ರಿಂದ 11.33ಕ್ಕೆ ಇಳಿಕೆಯಾಗಿದೆ. ಅಂತೆಯೇ ನಿವ್ವಳ ಅನುತ್ಪಾದಕ ಆಸ್ತಿ ಪ್ರಮಾಣ ಅನುಪಾತ ಕೂಡ 6.75 ರಿಂದ 5.94 ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದರು.

ಅಂತೆಯೇ 2018-19ರ ಮೂರನೇ ತ್ತೈಮಾಸಿಕಕ್ಕಿಂತ ಈ ಬಾರಿ ನಿರ್ವಹಣಾ ಲಾಭ ಪ್ರಮಾಣವು ಶೇ.111 ರಷ್ಟು ಏರಿಕೆಯಾಗಿದ್ದು, 1336 ಕೋಟಿ ರೂ. ತಲುಪಿದೆ. ಜತೆಗೆ ಬಡ್ಡಿಯಿಂದ ಬರುವ ನಿವ್ವಳ ಬಡ್ಡಿ ಆದಾಯವು ಶೇ.16 ರಷ್ಟು ಏರಿಕೆಯಾಗಿದ್ದು, 1871 ರೂ.ಗೆ ತಲುಪಿದೆ. ಚಾಲ್ತಿ ಹಾಗೂ ಉಳಿತಾಯ ಖಾತೆಯ ಠೇವಣಿ ಪ್ರಮಾಣವು ಶೇ 8.19 ಏರಿಕೆಯಾಗಿದೆ.

ಕಳೆದ ಡಿಸೆಂಬರ್‌ನಲ್ಲಿದ್ದ ಶೇ.64.81 ನಿಬಂಧನೆ ವ್ಯಾಪ್ತಿ ಅನುಪಾತವು 2019 ಡಿಸೆಂಬರ್‌ನಲ್ಲಿ ಶೇ.69.28 ಸುಧಾರಿಸಿದೆ. ಒಟ್ಟಾರೆ ಸಿಬ್ಬಂದಿ ಶ್ರಮದಿಂದ ಮೂರನೇ ತ್ತೈಮಾಸಿಕದಲ್ಲಿ ಬ್ಯಾಂಕ್‌ ಅತ್ಯುತ್ತಮ ವಹಿವಾಟು ನಡೆಸಿದ್ದು, ನಾಲ್ಕನೇ ತ್ತೈಮಾಸಿಕದಲ್ಲಿಯೂ ಮುಂದುವರೆಸುವ ಭರವಸೆ ಇದೆ ಎಂದರು.

ಒಟ್ಟು ವ್ಯವಹಾರ ಶೇ.7ರಷ್ಟು ಹೆಚ್ಚಳ: 2018ರ ಡಿಸೆಂಬರ್‌ನಲ್ಲಿ ರೂ. 4,67,911 ಕೋಟಿ ರೂ. ಇದ್ದ ವಹಿವಾಟು ಶೇ.7ರಷ್ಟು ಹೆಚ್ಚಳವಾಗಿ 5,00,971 ಕೋಟಿ ರೂ.ಗೆ ತಲುಪಿದೆ. ಈ ದಾಖಲೆಯ ವಹಿವಾಟಿಗೆ ಮೂರನೇ ತ್ತೈಮಾಸಿಕದಲ್ಲಿ ಠೇವಣಿ ಹೆಚ್ಚಳವು ಪ್ರಮುಖ ಕಾರಣವಾಗಿದೆ. ಚಿಲ್ಲರೆ ಮತ್ತು ಕೃಷಿ ಕ್ಷೇತ್ರದಲ್ಲಿ ಕ್ರಮವಾಗಿ ಶೇ.7 ಮತ್ತು ಶೇ.10ರಷ್ಟು ಬೆಳವಣಿಗೆ ಕಂಡು ಬಂದಿದೆ ಎಂದು ಹೇಳಿದರು.

ಗ್ರಾಹಕರ ಅನುಕೂಲವನ್ನು ಹೆಚ್ಚಿಸಲು ಮೊಬೈಲ್ ಬ್ಯಾಂಕಿಂಗ್‌ ಅಪ್ಲಿಕೇಶನ್‌ನ ಪರಿಷ್ಕೃತ ಆವೃತ್ತಿಯಲ್ಲಿ ಬ್ಯಾಂಕ್‌ ಹಿಂದಿ, ಇಂಗ್ಲಿಷ್‌ ಭಾಷೆಗಳ ಜತೆಗೆ 9 ಪ್ರಾದೇಶಿಕ ಭಾಷೆಗಳನ್ನು ಸಕ್ರಿಯಗೊಳಿಸಿದೆ. ಆಕಸ್ಮಿಕ ಮರಣ ವಿಮೆ, ಮೈಕ್ರೋ ಲೈಫ್‌, ಇನುರೆನ್ಸ್‌ ಮತ್ತು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗೆ ದಾಖಲಾತಿ, ನೆಫ್ಟ್‌, ಸಾಲ ಖಾತೆಗಳಿಗೆ ಬಡ್ಡಿ ಪ್ರಮಾಣ ಪತ್ರ ವಿತರಣೆ,

ಟಿಡಿಎಸ್‌, ಫಾರ್ಮ್ 16 ಪ್ರಮಾಣಪತ್ರ ವಿತರಣೆ ಮತ್ತು ಇತರ ಹಲವು ಸೌಲಭ್ಯಗಳನ್ನು ನೀಡಲಾಗಿದೆ. ಇನ್ನು ಬ್ಯಾಂಕ್‌ ವಿಲೀನ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಬ್ಯಾಂಕ್‌ ಅಧಿಕಾರಿಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್‌ನ ಕಾರ್ಯ ನಿರ್ವಾಹಕ ನಿರ್ದೇಶಕರಾದ ಎಸ್‌.ಕೃಷ್ಣನ್‌, ಅಜಯ್‌ ಕೆ.ಕುರಾನಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.