![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 11, 2018, 12:00 PM IST
ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಟ್ಟಾ ಅಭಿಮಾನಿಯೋರ್ವ ದರ್ಶನ್ ಅವರೊಂದಿಗೆ ಶುಕ್ರವಾರ ವಿಡಿಯೋಕಾಲ್ನಲ್ಲಿ ಮಾತನಾಡಿ ತಮ್ಮ ಕೊನೇ ಆಸೆ ತೀರಿಸಿಕೊಂಡು ಶನಿವಾರ ಮೃತಪಟ್ಟಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಶಿವಮೊಗ್ಗದ ರೇವಂತ್ ಮೃತಪಟ್ಟವರು. ದರ್ಶನ್ ಅವರ ಭಾರೀ ಅಭಿಮಾನಿಯಾದ ರೇವಂತ್ ಮೂಳೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು.
ಮನೆಯವರಿಗೆ ಇದು ಗೊತ್ತಿದ್ದರೂ ರೇವಂತ್ ಅವರಿಗೆ ಮಾತ್ರ ಈ ವಿಷಯ ಮೊದಲಿಗೆ ತಿಳಿದಿರಲಿಲ್ಲ. ವೈದ್ಯರ ಸಲಹೆ ಮೇರೆಗೆ ಕಾಲು ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೇವಂತ್ಗೆ ತಿಳಿಸಲಾಗಿತ್ತು. ಐಟಿಐ ಮುಗಿಸಿದ ನಂತರ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ರೇವಂತ್, ಕಾಲು ನೋವು ಎಂದು ಶಿವಮೊಗ್ಗಕ್ಕೆ ವಾಪಸ್ ಬಂದಿದ್ದರು.
ವೈದ್ಯರ ಬಳಿ ಹೋದಾಗ ಮೂಳೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕುಟುಂಬದವರು ರೇವಂತ್ ಅವರಿಗೆ ಈ ವಿಷಯ ಗೊತ್ತಾಗದಂತೆ ನೋಡಿಕೊಂಡಿದ್ದರು. ದರ್ಶನ್ ಅವರ ಭಾರೀ ಅಭಿಮಾನಿಯಾದ ರೇವಂತ್ ಪ್ರತಿ ವರ್ಷ ದರ್ಶನ್ ಜನ್ಮದಿನದಂದು ಬೆಂಗಳೂರಿಗೆ ತೆರಳಿ ಶುಭಾಶಯ ಕೋರುತ್ತಿದ್ದರು.
ಈ ವರ್ಷ ಫೆ. 16 ರಂದು ನೆಚ್ಚಿನ ನಟನಿಗೆ ಜನ್ಮ ದಿನದ ಶುಭಾಶಯ ಕೋರಲು ಬೆಂಗಳೂ ರಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂಬ ಚಿಂತೆಯಲ್ಲಿದ್ದರು. ತಾವು ದರ್ಶನ್ ಅವರೊಂದಿಗೆ ಮಾತನಾಡಬೇಕೆಂದು ಹಠ ಹಿಡಿದರು. ವಿಷಯ ತಿಳಿದ ದರ್ಶನ್ ಶುಕ್ರವಾರ ಸ್ನೇಹಿತರ ಮೊಬೈಲ್ಗೆ ವಿಡಿಯೋ ಕಾಲ್ ಮಾಡಿ ರೇವಂತ್ ಮತ್ತು ಆತನ ತಾಯಿಯೊಂದಿಗೆ ಮಾತನಾಡಿ ಧೈರ್ಯ ತುಂಬಿದ್ದರು.
ಶೀಘ್ರದಲ್ಲೇ ಶಿವಮೊಗ್ಗಕ್ಕೆ ಬಂದು ಭೇಟಿ ಮಾಡುತ್ತೇನೆಂದು ಹೇಳಿದ್ದರು. ದರ್ಶನ್ ಅವರೊಂದಿಗೆ ಮಾತನಾಡುವ ವೇಳೆಯಲ್ಲಿ ರೇವಂತ್ ಅವರಿಗೆ ಕ್ಯಾನ್ಸರ್ ಇರುವ ವಿಷಯ ತಿಳಿಸಬೇಡಿ ಎಂದು ಮುಂಚಿತವಾಗಿಯೇ ಮನವಿ ಮಾಡಲಾಗಿತ್ತು. ನೆಚ್ಚಿನ ನಟನೊಂದಿಗೆ ಮಾತನಾಡಿದ ಬಳಿಕ ರೇವಂತ್ ಖುಷಿಯಾಗಿದ್ದರು. ಆದರೆ ತಮ್ಮ ಆಸೆ ತೀರಿಸಿಕೊಂಡ ರೇವಂತ್ ಶನಿವಾರ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.