TAPAS UAV ಚಿತ್ರದುರ್ಗದಿಂದ ಹಾರಿ ಕಾರವಾರದ ಅರಬ್ಬಿಯಲ್ಲಿ ಲ್ಯಾಂಡಿಂಗ್

ಸುರಕ್ಷಿತವಾಗಿ ಇಳಿಯುವ ಮೂಲಕ ಹೊಸ ಮೈಲಿಗಲ್ಲು ಸಾಧನೆ

Team Udayavani, Jun 18, 2023, 8:50 PM IST

1-asdasdas

ಕಾರವಾರ: ಚಿತ್ರದುರ್ಗದಿಂದ ರೆಕ್ಕಿ ಬಿಚ್ಚಿ ಗರಿಗೆದರಿ ಹಾರಿದ ತಪಸ್ ಕಾರವಾರದ ನೌಕಾನೆಲೆ ವ್ಯಾಪ್ತಿಯ ಅರಬ್ಬಿಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ.

ತಪಸ್- 201 ಏರಿಯಲ್ ವೆಹಿಕಲ್‌ನ (ಯುಎವಿ) ಕಮಾಂಡ್ ಮತ್ತು ಕಂಟ್ರೋಲ್ ಸಾಮರ್ಥ್ಯಗಳ ಪ್ರಾಯೋಗಿಕ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಕಾರವಾರ ನೌಕಾನೆಲೆಯಿಂದ 285 ಕಿ.ಮೀ. ದೂರದಲ್ಲಿರುವ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್)ನಿಂದ ತಪಸ್ ಹಾರಾಟ ನಡೆಸಿ, ನೌಕಾನೆಲೆಯಿಂದ 148 ಕಿ.ಮೀ. ದೂರದ ಕಡಲಿನಲ್ಲಿದ್ದ ಐಎನ್‌ಎಸ್ ಸುಭದ್ರದಲ್ಲಿ ಸುರಕ್ಷಿತವಾಗಿ ಇಳಿಯುವ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ಮತ್ತು ಭಾರತೀಯ ನೌಕಾಪಡೆಯು ಏರಿಯಲ್ ವೆಹಿಕಲ್‌ನ ಸಾಮರ್ಥ್ಯ ಪರೀಕ್ಷೆಗಾಗಿ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್)ನಿಂದ ಹಾರಾಟಕ್ಕೆ ಚಾಲನೆ ನೀಡಿತ್ತು. ಈ ಏರಿಯಲ್ ವೆಹಿಕಲ್‌ನ ನಿಯಂತ್ರಣಕ್ಕಾಗಿ ಐಎನ್‌ಎಸ್ ಸುಭದ್ರಾದಲ್ಲಿ ಒಂದು ಗ್ರೌಂಡ್ ಕಂಟ್ರೋಲ್ ಸ್ಟೇಷನ್ (ಜಿಸಿಎಸ್) ಮತ್ತು ಎರಡು ಶಿಪ್ ಡೇಟಾ ಟರ್ಮಿನಲ್ (ಎಸ್‌ಡಿಟಿ) ಸ್ಥಾಪಿಸಲಾಗಿದೆ. 20,000 ಅಡಿ ಎತ್ತರದಲ್ಲಿ ಹಾರಾಡಿದ ತಪಸ್, ಚಿತ್ರದುರ್ಗದಿಂದ 3.30 ಗಂಟೆಗಳ ತಡೆರಹಿತ ಹಾರಾಟ ನಡೆಸಿ ಕಾರವಾರದ ಅರಬ್ಬಿ ಸಮುದ್ರದಲ್ಲಿದ್ದ ಐಎನ್‌ಎಸ್ ಸುಭದ್ರಾ ಇಳಿದಾಣದ ಮೇಲೆ ಸುರಕ್ಷಿತವಾಗಿ ಇಳಿದಿದೆ. ಪ್ರಾಯೋಗಿಕ ಪರೀಕ್ಷೆಯ ಬಳಿಕ ಮತ್ತೆ ಚಿತ್ರದುರ್ಗದ ಎಟಿಆರ್‌ಗೆ ಸುರಕ್ಷಿತವಾಗಿ ತಲುಪಿದೆ.

ಮಧ್ಯಮ ಎತ್ತರದ ಈ ತಪಸ್- 201ನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಶ್‌ಮೆಂಟ್ (ಎಡಿಇ) ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ. ಈ ವೆಹಿಕಲ್, 24ರಿಂದ 30 ಗಂಟೆಗಳಷ್ಟು ಹಾರಾಟ ನಡೆಸುವ ಮೂಲಕ ಮೂರೂ ಸಶಸ್ತ್ರ ಪಡೆಗಳಿಗೆ ಗುಪ್ತಚರ, ಕಣ್ಗಾವಲು ಮತ್ತು ವಿಚಕ್ಷಣ ಪಾತ್ರಗಳನ್ನು ನಿರ್ವಹಿಸಲು ಅಭಿವೃದ್ಧಿಪಡಿಸಲಾಗಿದೆ. ಪ್ರಿಡೇಟರ್ ಡ್ರೋನ್‌ಗಳ ಭಾರತೀಯ ಆವೃತ್ತಿ ಎಂದು ಕರೆಯಲ್ಪಡುವ ಈ ತಪಸ್, ಮಧ್ಯಮ ಶ್ರೇಣಿಯ ಎಲೆಕ್ಟ್ರೋ ಆಪ್ಟಿಕ್, ಲಾಂಗ್ ರೇಂಜ್ ಎಲೆಕ್ಟ್ರೋ ಆಪ್ಟಿಕ್, ಸಿಂಥೆಟಿಕ್ ಅಪರ್ಚರ್ ರಾಡಾರ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್, ಸಂವಹನ ಬುದ್ಧಿವಂತಿಕೆ ಮತ್ತು ದಿನವಿಡೀ ಕಾರ್ಯಕ್ಷಮತೆಯನ್ನು ಹೊಂದಿದೆ. ನಿತ್ಯದ ಪೇಲೋಡ್‌ಗಳಂತಹ ವಿಭಿನ್ನ ಸಂಯೋಜನೆಯ ಪೇಲೋಡ್‌ಗಳನ್ನು ಸಾಗಿಸಲು ಸಮರ್ಥವಾಗಿದೆ.

ಟಾಪ್ ನ್ಯೂಸ್

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.