![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 10, 2024, 10:09 PM IST
ಬೆಂಗಳೂರು: 2023-24ರ ಸಾಲಿನಲ್ಲಿ ರಾಜ್ಯದ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸೆಲಿಂಗ್ ಮೂಲಕ ಭಡ್ತಿ ನೀಡುವ ಪ್ರಕ್ರಿಯೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆ. 13ರಿಂದ 26ರ ವರೆಗೆ ಈ ಭಡ್ತಿ ಪ್ರಕ್ರಿಯೆ ನಡೆಯಲಿದೆ.
ಫೆ. 13ರಂದು ಭಡ್ತಿಗೆ ಪರಿಗಣಿಸಬೇಕಾದ ಖಾಲಿ ಹುದ್ದೆಗಳ ಪ್ರಕಟನೆ, ಫೆ. 14ರಂದು ಭಡ್ತಿಗೆ ಅರ್ಹರಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ 1:2 ಅಂತಿಮ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟನೆ, ಫೆ. 16ರಂದು ಅಂಗವಿಕಲ ಶಿಕ್ಷಕರ ವೈದ್ಯಕೀಯ ಪ್ರಮಾಣ ಪತ್ರದ ಆಧಾರದಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಜಾತಿ ಪ್ರಮಾಣ ಪತ್ರದ ಆಧಾರದಲ್ಲಿ ಅಂತಿಮ ಆದ್ಯತಾ ಪಟ್ಟಿಯಲ್ಲಿ ಭಡ್ತಿ ಮೀಸಲಾತಿಗೆ ಬಿಂದು ಮತ್ತು ರೋಸ್ಟರ್ ಗುರುತಿಸುವಿಕೆಯ ಕ್ರಮವನ್ನು ಅಂತಿಮಗೊಳಿಸುವುದು ಹಾಗೂ ಜಿಲ್ಲಾ ಹಂತದಲ್ಲಿ ಇಲಾಖಾ ಭಡ್ತಿ ಸಮಿತಿ ಸಭೆಯನ್ನು ನಡೆಸಿ ಭಡ್ತಿಗೆ ಅರ್ಹರಿರುವ ಶಿಕ್ಷಕರ ಪಟ್ಟಿಗೆ ಅನುಮೋದನೆ ನೀಡುವುದು.
ಫೆ. 15ರಿಂದ 17ರವರೆಗೆ ಅಂತಿಮ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶಿಕ್ಷಕರಿಗೆ/ಮುಖ್ಯ ಶಿಕ್ಷಕರಿಗೆ ಅವಕಾಶ ಕಲ್ಪಿಸುವುದು, ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮಗೊಳಿಸಿ ಇತ್ಯರ್ಥಪಡಿಸಲು ಫೆ. 19 ದಿನಾಂಕ ನಿಗದಿಪಡಿಸಿದೆ, ಫೆ. 20ರಂದು ಭಡ್ತಿ ಕೌನ್ಸೆಲಿಂಗ್ಗೆ ಅರ್ಹರಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ 1:1 ಅಂತಿಮ ಜೇಷ್ಠತಾ ಪಟ್ಟಿ ಪ್ರಕಟನೆ, ಫೆ. 26ರಂದು ಮುಖ್ಯ ಶಿಕ್ಷಕ ವೃಂದದಿಂದ ಹಿರಿಯ ಮುಖ್ಯ ಶಿಕ್ಷಕ ವೃಂದಕ್ಕೆ ಭಡ್ತಿ ಕೌನ್ಸೆಲಿಂಗ್, ಫೆ. 26ರಂದು ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಭಡ್ತಿ ಕೌನ್ಸೆಲಿಂಗ್ಗೆ ದಿನ ನಿಗದಿಪಡಿಸಲಾಗಿದೆ.
ಭಡ್ತಿ ಪ್ರಕ್ರಿಯೆಯನ್ನು ಸಾಂಗವಾಗಿ, ಯಾವುದೇ ಲೋಪವಾಗದಂತೆ ನಡೆಸುವಂತೆ ಸಕ್ಷಮ ಪ್ರಾಧಿಕಾರಕ್ಕೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ. ರೋಸ್ಟರ್ ಪದ್ಧತಿಯ ಬಿಂದು ಗುರುತಿಸುವಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳುವಂತೆ ಆಯುಕ್ತರು ವಿಶೇಷ ಸೂಚನೆ ನೀಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.