ಸಹ ಶಿಕ್ಷಕರ ವರ್ಗಾವಣೆ: ತಡೆಯಾಜ್ಞೆ


Team Udayavani, Mar 1, 2022, 6:20 AM IST

ಶಿಕ್ಷಕರ ವರ್ಗಾವಣೆ: ಮತ್ತೆ ಅನಿಶ್ಚಿತತೆ

ಬೆಂಗಳೂರು: ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವರ್ಗಾವಣೆಗೆ ಕೆಎಟಿ ತಡೆಯಾಜ್ಞೆ ನೀಡಿರುವುದರಿಂದ ಮತ್ತೆ ಒಂದು ರೀತಿಯ ಅನಿಶ್ಚಿತತೆ ಮೂಡಿದಂತಾಗಿದೆ.

ವರ್ಗಾವಣೆ ಪ್ರಕ್ರಿಯೆಗೆ ತಡೆ ತಂದಿರುವುದರಿಂದ ಪ್ರಾಥಮಿಕ ಶಾಲೆಯ ಸುಮಾರು 500ರಿಂದ 600 ಮಂದಿಗೆ ಸಮಸ್ಯೆಯುಂಟಾಗಲಿದ್ದು ವರ್ಗಾವಣೆ ಆದೇಶಕ್ಕಾಗಿ ಮತ್ತಷ್ಟು ದಿನ ಕಾಯುವಂತಾಗಿದೆ.

ಕಳೆದ ಎರಡು ವರ್ಷಗಳಿಂದ ವರ್ಗಾವಣೆ ಆದೇಶಕ್ಕಾಗಿ ಕಾಯುತ್ತಿದ್ದು, ಇದೀಗ ಪ್ರಕ್ರಿಯೆ ಪ್ರಾರಂಭವಾಗಿ ಮುಗಿಯಲಿದೆ ಎನ್ನುವಷ್ಟರಲ್ಲಿ ತಡೆಯಾಜ್ಞೆ ನೀಡಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪರೀಕ್ಷಾ ಸಮಯವಾದ್ದರಿಂದ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಲು ತೊಡಕುಂಟಾಗುತ್ತಿದೆ.ಸರ್ಕಾರವು ಆದಷ್ಟು ಬೇಗ ಪ್ರಕ್ರಿಯೆ ಮುಗಿಸಿದರೆ, ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರು ಹೇಳುತ್ತಾರೆ.

ನಿಯಮಗಳ ಪ್ರಕಾರ ಸಾಮಾನ್ಯವಾಗಿ ಶಿಕ್ಷಕರ ವರ್ಗಾವಣೆಯನ್ನು ಏಪ್ರಿಲ್‌ನಿಂದ ಜೂನ್‌ ತಿಂಗಳಿನ ಬೇಸಿಗೆ ರಜೆ ಅವಧಿಯಲ್ಲಿ ಪ್ರಕ್ರಿಯೆ ನಡೆಸಬೇಕು. ಆದರೆ, ಕಳೆದ ಎರಡು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಕೊರೊನಾದಿಂದ ಶಾಲೆಗಳು ನಡೆಯದಿರುವ ವೇಳೆಯೂ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ.

ಇದೀಗ ಪರೀಕ್ಷಾ ಸಮಯದಲ್ಲಿ ನಡೆಸುತ್ತಿರುವುದರಿಂದ ಮಕ್ಕಳ ಕಲಿಕೆ ಮೇರೆ ಪರಿಣಾಮ ಬೀರಲಿದೆ. ಹೆಚ್ಚಿನ ಶಿಕ್ಷಕರು ವರ್ಗಾವಣೆಗೆ ಆದ್ಯತೆ ನೀಡುತ್ತಾರೆಯೇ ಹೊರತು ಶಿಕ್ಷಕರ ಕಲಿಕೆಗೆ ಮಹತ್ವ ನೀಡುವುದಿಲ್ಲ. ಈ ವೇಳೆ ಪ್ರಕ್ರಿಯೆ ನಡೆಸುವುದರಿಂದ ಶಿಕ್ಷಕರ ಗಮನ ವರ್ಗಾವಣೆ ಕಡೆಯೇ ಇರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರ ಸಾಧ್ಯವಾದಷ್ಟು ಬೇಗ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಯಲ್ಲಿರುವ ವರ್ಗಾವಣೆ ಪ್ರಕ್ರಿಯೆ ಕುರಿತ ಅರ್ಜಿಯನ್ನು ತೆರವುಗೊಳಿಸಬೇಕು ಎಂದು ತಿಳಿಸುತ್ತಾರೆ.

1-5ನೇ ತರಗತಿಗೆ ಬೋಧನೆ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1-7ನೇ ತರಗತಿ ವರೆಗೆ ಬೋಧನೆ ಮಾಡುತ್ತಾರೆ ಎಂದು ತಿಳಿಸಿರುವ ಸರ್ಕಾರವು, 6-8ನೇ ತರಗತಿ ಬೋಧಿಸುವ ಪದವೀಧರ ಶಿಕ್ಷಕರಿಗೆ ವರ್ಗಾವಣೆಯಲ್ಲಿ ಅವಕಾಶ ಮಾಡಿಕೊಟ್ಟಿಲ್ಲ. ಈ ನಿಯಮವು ತಾರತಮ್ಯದಿಂದ ಕೂಡಿದೆ ತಮಗೂ ವರ್ಗಾವಣೆಯಲ್ಲಿ ಅವಕಾಶ ಕಲ್ಪಿಸಬೇಕು ಎಂಬುದು ಪದವೀಧರ ಶಿಕ್ಷಕರ ಮನವಿಯಾಗಿದೆ. ಈ ವಿಚಾರವಾಗಿಯೇ ಕೆಎಟಿ ಅಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಪ್ರಕರಣವು ಕೆಎಟಿ ಅಲ್ಲಿ ಇರುವುದರಿಂದ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ. ಆದರೆ, ಅರ್ಜಿ ತೆರವುಗೊಳಿಸಿ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಸರ್ಕಾರವು ಪ್ರಯತ್ನಿಸುತ್ತಿದೆ.
– ಡಾ. ಆರ್‌. ವಿಶಾಲ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.