ಡಿಸೆಂಬರ್ ವೇಳೆಗೆ ನೈತಿಕ ಶಿಕ್ಷಣ ಬೋಧನೆ: ಸಚಿವ ನಾಗೇಶ್
Team Udayavani, Sep 19, 2022, 8:45 PM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲೇ ನೈತಿಕ ಶಿಕ್ಷಣ ಜಾರಿಗೊಳಿಸಲು ಸರಕಾರ ಉದ್ದೇಶಿಸಿದ್ದು, ಇದರಲ್ಲಿ ಭಗವದ್ಗೀತೆಯ ಅಂಶಗಳೂ ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನೈತಿಕ ಶಿಕ್ಷಣದಲ್ಲಿ ಏನೇನು ಇರಬೇಕು ಎಂಬುದರ ಬಗ್ಗೆ ತಜ್ಞರ ಸಮಿತಿ ಶಿಫಾರಸು ಮಾಡಲಿದೆ ಎಂದು ಹೇಳಿದರು.
ಲಿಖೀತ ಉತ್ತರದಲ್ಲಿ, ಪ್ರಸ್ತುತ ಶಾಲಾ ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಪ್ರತ್ಯೇಕವಾಗಿ ಬೋಧಿಸುವ ವಿಚಾರ ಸರಕಾರದ ಮುಂದಿಲ್ಲ ಎಂದು ಹೇಳಲಾಗಿದೆ. ಹಾಗಿದ್ದರೆ ಭಗವದ್ಗೀತೆ ಕಲಿಸುವುದಾಗಿ ಹೇಳಲು ಮುಜುಗರವೇ ಎಂದು ಪ್ರಾಣೇಶ್ ಖಾರವಾಗಿ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ ಪ್ರತ್ಯೇಕವಾಗಿ ಬೋಧಿಸುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಇದರಲ್ಲಿ ಮುಜುಗರದ ಪ್ರಶ್ನೆಯೇ ಇಲ್ಲ ಎಂದರು.
ಪಠ್ಯದಲ್ಲಿ ಆಯಾ ಜಿಲ್ಲೆಗಳ ಇತಿಹಾಸ
ಇನ್ನು ಮುಂದಿನ ಪಠ್ಯಪುಸ್ತಕ ಪುನರ್ರಚನೆಯ ಸಂದರ್ಭದಲ್ಲಿ ಜಿಲ್ಲೆಗಳ ಸ್ಥಳೀಯ ಇತಿಹಾಸವನ್ನು ಆಯಾ ಜಿಲ್ಲಾ ಮಕ್ಕಳಿಗೆ ತಿಳಿಸುವ ಕುರಿತು ತಜ್ಞರ ಸಲಹೆ ಮೇರೆಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಪ್ರಸ್ತುತ ಜಾರಿಯಲ್ಲಿರುವ 7ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದ “ಮೈಸೂರು ಮತ್ತು ಇತರ ಸಂಸ್ಥಾನಗಳು’ ಅಧ್ಯಾಯದಲ್ಲಿ ತುಳುನಾಡು ಎಂಬ ಪ್ರತ್ಯೇಕ ಉಪ ಘಟಕವಿದ್ದು, ತುಳುನಾಡಿನಲ್ಲಿ ಆಳಿದ ಅರಸು ಮನೆತನಗಳ ಬಾಕೂìರು ರಾಜಧಾನಿಯ ಆಳುಪ ಮನೆತನದ ವಿವರವು ಉಪಘಟಕದಲ್ಲಿದೆ ಎಂದು ತಿಳಿಸಿದರು.
6ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದ “ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಎಂಬ ಪಾಠದಲ್ಲಿ ಕರ್ನಾಟಕ ಕರಾವಳಿ ಪ್ರದೇಶ ಆಳುಪ ಮನೆತನದ ಅರಸರ ಬಗ್ಗೆಯೂ ಉಲ್ಲೇಖವಿದೆ.
ಜತೆಗೆ 6-10ನೇ ತರಗತಿಗೆ ತೃತೀಯ ಭಾಷೆಯಾಗಿ ಅಳವಡಿಸಲಾದ ತುಳು ಪಠ್ಯಪುಸ್ತಕಗಳಲ್ಲಿ ತುಳುನಾಡಿನ ಆಡಳಿತ, ಕಲೆ, ಸಂಸ್ಕೃತಿ, ಭಾಷೆ ಮುಂತಾದವುಗಳ ಬಗ್ಗೆ ಅನೇಕ ಪಾಠ/ ಪದ್ಯಗಳನ್ನು ಅಳವಡಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.