Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಗರಿಷ್ಠ ತಾಪಮಾನ 45 ಡಿ.ಸೆ. ಗಡಿ ದಾಟುವ ಸಾಧ್ಯತೆ ; ಬೆಂಗಳೂರಿನಲ್ಲಿ ದಾಖಲೆಯ 38.5 ಡಿ.ಸೆ. ದಾಖಲು

Team Udayavani, Apr 29, 2024, 6:50 AM IST

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಬೆಂಗಳೂರು: ಬಿಸಿಲ ಬೇಗೆಗೆ ರಾಜ್ಯವು ಬೆಂದು ಬಳಲಿ ಹೋಗಿದ್ದು, ಅರ್ಧ ಕರ್ನಾಟಕಕ್ಕೆ ಹವಾಮಾನ ಇಲಾಖೆಯಿಂದ ಉಷ್ಣ ಅಲೆಯ ಮುನ್ನೆಚ್ಚರಿಕೆ ಕೊಡಲಾಗಿದೆ. ಬೆಂಗಳೂರಿನಲ್ಲಿ 2024ರಲ್ಲೇ ಅತ್ಯಧಿಕ 38.5 ಡಿ.ಸೆ. ಗರಿಷ್ಠ ದಾಖಲೆಯ ಉಷ್ಣಾಂಶ ವರದಿಯಾಗಿದೆ.

ಕರ್ನಾಟಕದ ಉತ್ತರ ಒಳನಾಡಿನ ಭಾಗವಾದ ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮುಂದಿನ 5 ದಿನಗಳಿಗೆ ಉಷ್ಣ ಅಲೆ ಮುನ್ನೆಚ್ಚರಿಕೆ ಕೊಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಬೇಗೆಯ ಅನುಭವ ಹೆಚ್ಚಲಿದೆ.

ರಾಜ್ಯದಲ್ಲಿ ಮೇ ಮೊದಲ ವಾರದಲ್ಲಿ ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೊಪ್ಪಳ ಸಹಿತ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಮುಂದಿನ ವಾರದೊಳಗೆ 44ರಿಂದ 45ರ ಗಡಿ ದಾಟುವ ಸಾಧ್ಯತೆಗಳಿವೆ. ಸಾಕಷ್ಟು ನೀರು ಕುಡಿಯಬೇಕು, ಅಲ್ಕೋಹಾಲ್‌, ಚಹಾ, ಕಾಫಿ, ತಂಪು ಪಾನೀಯಗಳನ್ನು ಆದಷ್ಟು ತ್ಯಜಿಸುವುದು ಒಳಿತು ಎಂದು ಹವಾಮಾನ ಇಲಾಖೆ ಹೇಳಿದೆ.

ಯಾಕೆ ಅತಿಯಾದ ತಾಪಮಾನ?
ಎಲ್‌ನಿನೋ ಪ್ರಭಾವದಿಂದ ಈ ಬಾರಿ ಮಳೆ ಆಗದೆ ಉಷ್ಣಾಂಶ ಹೆಚ್ಚಾಗಿದೆ. ಇದರಿಂದ ಭೂಮಿ ಕಾದು ತಾಪಮಾನದಲ್ಲಿ ಹೆಚ್ಚುತ್ತದೆ. ಸದ್ಯ ರಾಜ್ಯದ ಕೆಲವು ಕಡೆ ಶೇ.10 ಮಾತ್ರ ತೇವಾಂಶ ಇದೆ. ಎಲ್‌ನಿನೋ ಶೂನ್ಯವಾದರೆ ಮಳೆಯಾಗುವ ಸಾಧ್ಯತೆಗಳಿವೆ. ಪ್ರಸ್ತುತ ಕರ್ನಾಟಕದ ವಾತಾವರಣ ಗಮನಿಸಿದರೆ ಜುಲೈ, ಆಗಸ್ಟ್‌, ಸೆಪ್ಟಂಬರ್‌ನಲ್ಲಿ ಉತ್ತಮ ಮಳೆಯಾಗಲಿದೆ.

ಬೆಂಗಳೂರಿನಲ್ಲಿ 38.5 ಡಿ.ಸೆ. ತಾಪಮಾನ
ಬೆಂಗಳೂರಿನಲ್ಲಿ ರವಿವಾರ 38.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು 2024ರಲ್ಲಿ ದಾಖಲಾದ ಅತ್ಯಧಿಕ ತಾಪಮಾನವಾಗಿದೆ. 2016ರ ಎ. 25ರಂದು ಬೆಂಗಳೂರಿನಲ್ಲಿ ದಾಖಲಾದ 39.2 ಡಿ.ಸೆ. ದಾಖಲೆಯ ತಾಪಮಾನವನ್ನೂ ಹಿಂದಿಕ್ಕುವ ಲಕ್ಷಣ ಗೋಚರಿಸಿದೆ. ಇನ್ನೆರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 39 ಡಿ.ಸೆ.ಗೆ ಏರಿಕೆಯಾಗಬಹುದು ಎಂದು ಹವಾಮಾನ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ರಾಜ್ಯದ ಎಲ್ಲೆಲ್ಲಿ ಎಷ್ಟೆಷ್ಟು ಉಷ್ಣಾಂಶ ?
ರಾಯಚೂರು 43, ಕಲಬುರಗಿ 42.9, ಗದಗ 40.2, ಗಂಗಾವತಿ 41.9, ಬಾಗಲಕೋಟೆ 42.3, ಧಾರವಾಡ 39.2, ಮಂಡ್ಯ 39.6, ಬೆಳಗಾವಿ 39.4 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಸಾಧಾರಣ ಬೇಸಗೆ ಅವಧಿಯಲ್ಲಿ ಸರಾಸರಿ ಗರಿಷ್ಠ ಮಿತಿಗಿಂತ 4 ಡಿ.ಸೆ. ಹೆಚ್ಚಿನ ತಾಪಮಾನ, ಅಂದರೆ 38.5 ಡಿ.ಸೆ. ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಿವಿಧೆಡೆ ತಾಪಮಾನವು ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ. ಎನ್‌ನಿನೋ ಪ್ರಭಾವದಿಂದ ಈ ಮಾದರಿಯ ವಾತಾವರಣ ಉಂಟಾಗಿದೆ. ಜನ ಸಾಮಾನ್ಯರು ತಾಪಮಾನದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
-ಸಿ.ಎಸ್‌.ಪಾಟೀಲ್‌, ಹವಾಮಾನ ತಜ್ಞ, ಭಾರತೀಯ ಹವಾಮಾನ ಇಲಾಖೆ

 

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.