ಆರಗ ಗೃಹ ಸಚಿವರಾಗುವುದಕ್ಕೆ ನಾಲಾಯಕ್: ಸಿದ್ದರಾಮಯ್ಯ
ಧರ್ಮದ ಹೆಸರಲ್ಲಿ ದಾರಿ ತಪ್ಪಿಸುತ್ತಿರುವ ಬಿಜೆಪಿಗೆ ಅದುವೇ ತಿರುಗುಬಾಣ
Team Udayavani, Apr 6, 2022, 12:47 PM IST
ಹುಬ್ಬಳ್ಳಿ: ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಜನರ ಬಳಿ ಹೋಗಲು ಅವರ ಬಳಿ ಸಾಧನೆ ಇಲ್ಲ. ಹೀಗಾಗಿ ಅದನ್ನು ಮರೆಮಾಚುವುದಕ್ಕೆ ಧಾರ್ಮಿಕ ವಿಚಾರಕ್ಕೆ ಮುಂದಾಗಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮಸೀದಿಯಲ್ಲಿ ಮೈಕ್ ಬಳಸುವ ವಿಷಯ ತಂದಿದ್ದಾರೆ. ಮತಗಳ ಕ್ರೋಢೀಕರಣ ಮಾಡಬೇಕು ಅಂತ ಹೀಗೆ ಮಾಡುತ್ತಿದ್ದಾರೆ. ಧರ್ಮದ ಹೆಸರು, ಆಹಾರ ಪದ್ಧತಿ ಮೇಲೆ ದಾರಿ ತಪ್ಪಿಸುತ್ತಿದ್ದಾರೆ. ಈ ಹುನ್ನಾರ ಜನರಿಗೆ ಗೊತ್ತಾಗುತ್ತದೆ. ಪ್ರತಿಯೊಂದರ ಬೆಲೆ ಏರಿಕೆ ಆಗಿದ್ದು, ಅದರ ಬಗ್ಗೆ ಏಕೆ ಮಾತಾಡುತ್ತಿಲ್ಲ. ಧರ್ಮದ ಹೆಸರಲ್ಲಿ ಜನರ ದಾರಿ ತಪ್ಪಿಸುತ್ತಿದ್ದು, ಅದುವೇ ಅವರಿಗೆ ತಿರುಗುಬಾಣವಾಗಲಿದೆ ಎಂದರು.
ರಾಜ್ಯದ ಗೃಹ ಸಚಿವರಿಗೆ ಅನುಭವವೇ ಇಲ್ಲ. ಅವರಿಗೆ ಇಲಾಖೆ ನಿರ್ವಹಣೆ ಮಾಡುವುದಕ್ಕೆ ಬರಲ್ಲ. ಯಾರದ್ದೇ ಕೊಲೆಯಾದರೂ ನಾನು ಖಂಡಿಸುತ್ತೇನೆ. ಹಿಂದೂಗಳು ಸತ್ತರು ಜೀವ, ಮುಸ್ಲಿಮರು ಸತ್ತರು ಜೀವವೇ. ಹರ್ಷ ಕೊಂದವರನ್ನು ನೇಣಿಗೆ ಹಾಕಿ, ಜೀವಾವಧಿ ಶಿಕ್ಷೆ ಕೊಡಿಸಿ. ಅದೇ ರೀತಿ ಮುಸ್ಲಿಂ ಯುವಕರ ಹತ್ಯೆ ಮಾಡಿದವರಿಗೂ ಶಿಕ್ಷೆಯಾಗಲಿ. ಮೈಸೂರಲ್ಲಿ ಗ್ಯಾಂಗ್ ರೇಪ್ ಆದಾಗ ಗೃಹ ಸಚಿವರು ಯುವತಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಬೇಕಿತ್ತು ಅಂತ ಹೇಳಿಕೆ ಕೊಟ್ಟರು. ಅವರು ಗೃಹ ಮಂತ್ರಿ ಆಗುವುದಕ್ಕೆ ನಾಲಾಯಕ್. ಮುಖ್ಯಮಂತ್ರಿ ಸಹ ಅವರಿಗೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದರು.
ಈಶ್ವರಪ್ಪ ಮತ್ತು ಭಗವಂತ ಖೂಬಾ, ನಿಷೇಧಾಜ್ಞೆ ಇದ್ದರೂ ಅದನ್ನು ಉಲ್ಲಂಘಿಸಿ ಮೆರವಣಿಗೆ ಮಾಡಿದ್ದರು. ಅವರನ್ನು ತಕ್ಷಣ ವಜಾ ಮಾಡಬೇಕಿತ್ತು ಎಂದರು.
ಇದನ್ನೂ ಓದಿ:ಮೆಕ್ಕಾ…ಮಕ್ಕೇಶ್ವರ್ ಮಹಾದೇವ ದೇವಸ್ಥಾನವಂತೆ; ಹಿಂದೂ ಮಹಾಸಭಾದ ಕ್ಯಾಲೆಂಡರ್ ನಲ್ಲೇನಿದೆ?
ಕೋವಿಡ್ ಇಡೀ ಜಗತ್ತಲೇ ಇದೆ. ರಾಜ್ಯದಲ್ಲಿ ಮಾತ್ರ ಅಲ್ಲ. ಕೈಗಾರಿಕಾ ಕಂಪನಿಗಳು ಹೂಡಿಕೆ ಮಾಡಲು ಕರ್ನಾಟಕಕ್ಕೆ ಬಾರದೆ ತಮಿಳುನಾಡಿಗೆ ಹೋಗುತ್ತಿವೆ. ರಾಜ್ಯದಲ್ಲಿ ಎಲ್ಲಾ ಉದ್ಯಮಗಳು ಮುಚ್ಚಿ ಹೋಗುತ್ತಿವೆ. ಹೂಡಿಕೆ ಸ್ನೇಹಿ ವಾತಾವರಣ ನಿರ್ಮಾಣವಾದಾಗ ಮಾತ್ರ ಕಂಪನಿಗಳು ಬರಲು ಸಾಧ್ಯ. ಉದ್ಯೋಗ ಸೃಷ್ಟಿಯಾಗಲು ಸಾಧ್ಯ ಎಂದರು.
ನಾವು ಸುಳ್ಳು ಹೇಳಲ್ಲ. ಸತ್ಯ ಹೇಳಿಕೊಂಡು ಜನರ ಮುಂದೆ ಹೋಗುತ್ತೇವೆ. ಬೋಗಸ್ ಧರ್ಮ ಪ್ರಚಾರ ಮಾಡುವವರ ಬಗ್ಗೆ ಜನರಿಗೆ ತಿಳಿಸುತ್ತೇವೆ. ಬಿಜೆಪಿ ಮನುವಾದಿ ಮೇಲೆ ನಂಬಿಕೆ ಇಟ್ಟಿದೆ. ನಾವು ಮನುಷ್ಯತ್ವದ ಮೇಲೆ ನಂಬಿಕೆ ಇಟ್ಟಿದ್ದೇವೆ. ರಾಹುಲ್ ಗಾಂಧಿಯವರಿಗೆ ನಾವು ರಾಜ್ಯದಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ನಾವು 150 ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.