ಜೆಡಿಎಸ್‌ಗೆ ಟಾನಿಕ್‌ ನೀಡಿದ ಮೈತ್ರಿ ಫ‌ಲ

ಸಮನ್ವಯದ ಮೈತ್ರಿ, ಹಳೇ ಮೈಸೂರಲ್ಲಿ ಕ್ರಾಂತಿ ;3 ಕ್ಷೇತ್ರದಲ್ಲಿ ಸ್ಪರ್ಧೆ, 2ರಲ್ಲಿ ಗೆಲುವು

Team Udayavani, Jun 5, 2024, 7:45 AM IST

ಬೆಂಗಳೂರು: ರಾಜ್ಯದಲ್ಲಿ ಜಾತ್ಯತೀತ ಜನತಾದಳದ ಅಸ್ತಿತ್ವವೇ ನಾಮಾವಶೇಷವಾಗಲಿದೆ ಎನ್ನುವ ಮಾತುಗಳಿಗೆ ಲೋಕಸಭೆ ಚುನಾವಣಾ ಫ‌ಲಿತಾಂಶ ಕಡಿವಾಣ ಹಾಕಿದ್ದು, ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಬಲ ತಂದುಕೊಂಡಿದೆ.

2019 ರಲ್ಲಿ ಕಾಂಗ್ರೆಸ್‌ ಜತೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್‌ಗೆ ತುಮಕೂರಿನಲ್ಲಿ ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ, ಮಂಡ್ಯದಲ್ಲಿ ನಿಖೀಲ್‌ ಕುಮಾರಸ್ವಾಮಿ, ಉಡುಪಿ-ಚಿಕ್ಕಮಗಳೂರಿನಲ್ಲಿ ಪ್ರಮೋದ್‌ ಮಧ್ವರಾಜ್‌ ಹಾಗೂ ವಿಜಯಪುರದಲ್ಲಿ ಸುನೀತಾ ಚೌಹಾಣ್‌ ಅವರ ಸೋಲಿನ ಕಹಿ ಅರಗಿಸಿಕೊಳ್ಳಲಾಗಿರಲಿಲ್ಲ. ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಗೆದ್ದಿದ್ದು ಮಾತ್ರ ಮೊದಲಿನಿಂದಲೂ ಪಾರಮ್ಯ ಮೆರೆದಿದ್ದ ಹಾಸನ ಲೋಕಸಭಾ ಕ್ಷೇತ್ರವೊಂದರಲ್ಲೇ. ಅಂದರೆ ಸ್ಪರ್ಧಿಸಿದ್ದ ಆರು ಕ್ಷೇತ್ರಗಳನ್ನು ಕಳೆದುಕೊಂಡಿತ್ತು.

ಇದರಿಂದ ಪಕ್ಷದ ನಾಯಕರು, ಕಾರ್ಯಕರ್ತರು ಭ್ರಮನಿರಸನರಾಗಿದ್ದರಲ್ಲದೆ, ಜೆಡಿಎಸ್‌ ಭವಿಷ್ಯದ ಬಗ್ಗೆ ಚಿಂತೆ ಶುರುವಾಗಿತ್ತು. ಹಳೆ ಮೈಸೂರಿನಲ್ಲಿ ಗಟ್ಟಿ ನೆಲೆ ಹೊಂದಿದ್ದ ತುಮಕೂರು ಮತ್ತು ಮಂಡ್ಯದಂತಹ ಕ್ಷೇತ್ರಗಳನ್ನೇ ಉಳಿಸಿಕೊಳ್ಳಲಾರದೆ ಪಕ್ಷವೂ ಉಳಿಯದು ಎಂಬ ಅವ್ಯಕ್ತ ಭಾವವಿತ್ತು. ಸಾಲದ್ದಕ್ಕೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಕೂಡ ಹಳೆ ಮೈಸೂರಿನಲ್ಲಿ ಪಕ್ಷದ ಬೇರುಗಳನ್ನು ವಿಸ್ತಾರಗೊಳಿಸಬೇಕೆಂಬ ಗಟ್ಟಿ ನಿರ್ಧಾರ ಮಾಡಿತ್ತು.

ಒಡಕು ಧ್ವನಿಗೆ ಒಗ್ಗಟ್ಟಿನ ಮಂತ್ರ
ಇದೆಲ್ಲವೂ ಪಕ್ಷದ ಬೆಳವಣಿಗೆಗೆ ಮಾರಕ ಎಂಬುದನ್ನು ಅರಿತ ಜೆಡಿಎಸ್‌ ನಾಯಕರು, ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿಯೊಟ್ಟಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮಹತ್ವದ ನಿರ್ಧಾರ ಮಾಡಿದ್ದರು. ಆರಂಭದಲ್ಲಿ ಈ ಮೈತ್ರಿಯೂ ಮುರಿದು ಬೀಳುವ ಮಾತುಗಳು ಕೇಳಿಬಂದಿತ್ತಲ್ಲದೆ, ಮೇಲ್ಮಟ್ಟದ ನಾಯಕರು ಹೊಂದಾಣಿಕೆ ಮಾಡಿಕೊಂಡರೂ ಬಿಜೆಪಿ ಕಾರ್ಯಕರ್ತರೊಂದಿಗೆ ಜೆಡಿಎಸ್‌ ಕಾರ್ಯಕರ್ತರು ಹೊಂದಿಕೊಳ್ಳುವುದಿಲ್ಲ ಎಂಬ ಒಡಕು ಧ್ವನಿಯೇ ಹೆಚ್ಚಾಗಿತ್ತು.

ಇದನ್ನೆಲ್ಲಾ ಮೀರಿ ಪಕ್ಷದ ಹಿತಕ್ಕಾಗಿ ಮೈತ್ರಿ ಸಮನ್ವಯಗೊಳಿಸಿಕೊಂಡ ನಾಯಕರು, ಕಾರ್ಯಕರ್ತರಿಗೂ ಸ್ಪಷ್ಟ ಸಂದೇಶಗಳನ್ನು ನೀಡುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದರು. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಕಾಂಗ್ರೆಸ್ಸೇ ಎದುರಾಳಿ ಎಂಬುದನ್ನು ತಿಳಿದ ದಳಪತಿಗಳು, ಕಮಲಪತಿಗಳನ್ನು ಒಪ್ಪಿ ಅಪ್ಪಿಕೊಂಡರು. ಯಾವುದೇ ಒಳ ಏಟುಗಳಿಗೂ ಅವಕಾಶ ಕೊಡದೆ, ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದರು. ಎಲ್ಲರ ಫ‌ಲವಾಗಿ ಇಂದು ಒಂದು ಸ್ಥಾನದಲ್ಲಿದ್ದ ಜೆಡಿಎಸ್‌ ಎರಡು ಸ್ಥಾನಗಳನ್ನು ಗಿಟ್ಟಿಸಿಕೊಂಡಿದ್ದು, ಅದರಲ್ಲೂ ಕಳೆದ ಬಾರಿ ಕಳೆದುಕೊಂಡಿದ್ದ ಮಂಡ್ಯ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಂಡಿದೆ. ಬೋನಸ್‌ ಎನ್ನುವಂತೆ ಕೋಲಾರದಲ್ಲೂ ವಿಜಯಮಾಲೆ ತೊಟ್ಟಿದ್ದು, ಹಾಸನದಲ್ಲಿ ಸ್ವಯಂಕೃತ ಅಪರಾಧ ಹಾಗೂ ಕಾಂಗ್ರೆಸ್‌ನ ಚಿತಾವಣೆಯಿಂದ ಸೋತಿದ್ದೇವೆ ಎಂದು ಸಮಾಧಾನಪಟ್ಟುಕೊಂಡಿದೆ.

ಕೈ ಕಟ್ಟಿ ಹಾಕಿ, ಬೇರು ವಿಸ್ತರಿಸುವ ಸಮಯ:
ಅಂದರೆ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡರಲ್ಲಿ ಗೆಲ್ಲುವ ಮೂಲಕ ಶೇ.80 ರಷ್ಟು ಸ್ಥಾನಗಳನ್ನು ಗೆದ್ದಂತಾಗಿದೆ. ಒಟ್ಟಾರೆ ಚಲಾವಣೆಯಾಗಿರುವ ಮತಗಳ ಪೈಕಿ ಸುಮಾರು ಶೇ.5.60ರಷ್ಟು ಮತವು ಜೆಡಿಎಸ್‌ಗೆ ಬತ್ತಳಿಕೆಗೆ ಬಂದಿದೆ. ಚಿಂತೆಗಳು ದೂರಾಗಿ, ಮೈಕೊಡವಿಕೊಂಡು ಎದ್ದಿರುವ ಜೆಡಿಎಸ್‌, ಪ್ರಸ್ತುತ ವಿಧಾನ ಪರಿಷತ್‌ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಚುನಾವಣೆಗಳಲ್ಲೂ ಇದೇ ರೀತಿ ಹೊಂದಾಣಿಕೆಯನ್ನು ಕೆಲಸ ಮಾಡಿದರೆ, ಕಾಂಗ್ರೆಸ್‌ನ್ನು ಕಟ್ಟಿ ಹಾಕುವುದರ ಜತೆಗೆ ಜೆಡಿಎಸ್‌ನ ಬೇರುಗಳನ್ನು ಮತ್ತಷ್ಟು ಹರಡಬಹುದು ಎಂಬ ಲೆಕ್ಕಾಚಾರವಿದೆ.

-ಶೇಷಾದ್ರಿ ಸಾಮಗ

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.