![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 12, 2021, 11:34 AM IST
ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ.
ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ ಎಣ್ಣೆಗಳ ಆಮದು ಸುಂಕವನ್ನು ಶೇಕಡಾ 2.11 ರಷ್ಟು ಇಳಿಸಿ, ಲೀಟರ್ ಎಣ್ಣೆಗೆ 4 ರೂಪಾಯಿ ಕಡಿಮೆ ಮಾಡಿದೆ. ಜನಸಾಮಾನ್ಯರಿಗೆ ಮೋದಿ ಸರ್ಕಾರ ಹಬ್ಬಕ್ಕೆ ಕೊಟ್ಟ ಬಹುದೊಡ್ಡ ಕೊಡುಗೆಯಿದು. 80 ರೂಪಾಯಿ ಇದ್ದ ಅಡುಗೆ ಎಣ್ಣೆ ದರವನ್ನು 160 ರೂಪಾಯಿಗೆ ಏರಿಸಿದ್ದು ಇದೇ ಕೇಂದ್ರ ಸರ್ಕಾರ. ಈಗ 4 ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ಅಡುಗೆ ಎಣ್ಣೆಗಳ ಆಮದು ಸುಂಕವನ್ನು ಶೇ2.11%ರಷ್ಟು ಇಳಿಸಿ, ಲೀಟರ್ ಎಣ್ಣೆಗೆ 4 ರೂಪಾಯಿ ಕಡಿಮೆ ಮಾಡಿದೆ. ಜನಸಾಮಾನ್ಯರಿಗೆ ಮೋದಿ ಸರ್ಕಾರ ಹಬ್ಬಕ್ಕೆ ಕೊಟ್ಟ ಬಹುದೊಡ್ಡ ಕೊಡುಗೆಯಿದು.
80 ರೂಪಾಯಿ ಇದ್ದ ಅಡುಗೆ ಎಣ್ಣೆ ದರವನ್ನು 160 ರೂಪಾಯಿಗೆ ಏರಿಸಿದ್ದು ಇದೇ ಕೇಂದ್ರ ಸರ್ಕಾರ.
ಈಗ 4 ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 12, 2021
ಇದನ್ನೂ ಓದಿ : ಭಾರೀ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 28,591 ಕೋವಿಡ್ ಪ್ರಕರಣ ಪತ್ತೆ
ಇನ್ನು, ಕೇಂದ್ರ ಸರ್ಕಾರದ ಸುಂಕ ಇಳಿಕೆಯಿಂದಾಗಿ ಪ್ರತೀ ಲೀಟರ್ ಅಡುಗೆ ಎಣ್ಣೆಯ ಬೆಲೆ 4 ರೂ.ಗಳಿಂದ 5 ರೂ.ಗಳ ವರೆಗೆ ಕಡಿಮೆಯಾಗಲಿದೆ.
ಇದರಿಂದ ಕೇಂದ್ರಕ್ಕೆ 1,100 ಕೋಟಿ ರೂ. ಆದಾಯ ನಷ್ಟವಾಗಲಿದೆ ಎಂದು ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ವಿತ್ತ ಸಚಿವಾಲಯದ ಪ್ರಕಟನೆಯ ಪ್ರಕಾರ ಕಚ್ಚಾ ತಾಳೆ ಎಣ್ಣೆಯ ಆಮದು ಸುಂಕವನ್ನು ಶೇ. 10 ರಿಂದ ಶೇ. 2.5ಕ್ಕೆ, ಕಚ್ಚಾ ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 7.5 ರಿಂದ ಶೇ. 2.5ಕ್ಕೆ ಇಳಿಕೆ ಮಾಡಲಾಗಿದೆ.
ಇದನ್ನೂ ಓದಿ : ಸಚಿವರಾದ ಪ್ರಹ್ಲಾದ್ ಜೋಶಿ, ತೋಮರ್ ಗೆ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಹೊಣೆ?
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.