
ಎಸಿಬಿ ತನಿಖಾ ಮಾಹಿತಿ ಬಹಿರಂಗಕ್ಕೆ ಬಿಜೆಪಿ ಸವಾಲು
Team Udayavani, Aug 22, 2017, 8:00 AM IST

ಬೆಂಗಳೂರು: ಯಾರೋ ನೀಡಿದ ಖಾಸಗಿ ದೂರು ದಾಖಲಿಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದಟಛಿ ಎಫ್ಐಆರ್ ದಾಖಲಿಸಿ ಸಮನ್ಸ್ ಜಾರಿ ಮಾಡಿರುವ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳ ವಿರುದಟಛಿ ಕಿಡಿ ಕಾರಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್, ಮುಖ್ಯಮಂತ್ರಿಗಳ ವಿರುದಟಛಿ ದಾಖಲಾಗಿರುವ ದೂರುಗಳು ಸೇರಿ ಕಳೆದ ಒಂದು ವರ್ಷದಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ವಿರುದಟಛಿ ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಮೇಲೆ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಎಸಿಬಿ ಮೂಲಕ ಯಡಿಯೂರಪ್ಪ
ವಿರುದಟಛಿ ಸುಳ್ಳು ಮೊಕದ್ದಮೆ ದಾಖಲಿಸಿ ರಾಜಕೀಯವಾಗಿ ತೊಂದರೆ ನೀಡಲಾಗುತ್ತಿದೆ.
ಕೇವಲ ಎಂಟು-ಹತ್ತು ದಿನಗಳಲ್ಲಿ ದೂರು ಸ್ವೀಕರಿಸಿ ಐದಾರು ದಿನಗಳಲ್ಲಿ ಎಫ್ಐಆರ್ ದಾಖಲಿಸಿ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಆರೋಪಿಸಿದರು.
ಸಿಎಂ ವಿರುದಟಛಿ 25ಕ್ಕೂ ಹೆಚ್ಚು ದೂರು: ಎಸಿಬಿಯಲ್ಲಿ ಮುಖ್ಯಮಂತ್ರಿಗಳ ವಿರುದಟಛಿ 25ಕ್ಕೂ ಹೆಚ್ಚು ದೂರುಗಳು
ದಾಖಲಾಗಿವೆ. ಅನೇಕ ಮಂತ್ರಿಗಳು, ಐಎಎಸ್ ಅಧಿಕಾರಿಗಳ ವಿರುದಟಛಿವೂ ದೂರು ದಾಖಲಾಗಿದೆ. ಆದರೆ, ಈ ದೂರುಗಳಿಗೆ ಸಂಬಂಧಿಸಿದಂತೆ ಯಾವುದೇ ಎಫ್ಐಆರ್ ದಾಖಲಿಸಿಲ್ಲ ಮತ್ತು ವಿಚಾರಣೆಯೂ ಆಗಿಲ್ಲ. ಆದ್ದರಿಂದ ಒಂದು ವರ್ಷದಲ್ಲಿ ಎಷ್ಟು ದೂರುಗಳು ದಾಖಲಾಗಿವೆ? ಎಷ್ಟು ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಲಾಗಿದೆ ಎಂಬುದನ್ನು ಎಸಿಬಿ ಅಧಿಕಾರಿಗಳು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಬಳಿಕ ಯಡಿಯೂರಪ್ಪ ಅವರು ಸ್ವಲ್ಪ ಭೂಮಿಯನ್ನು ಡಿನೋಟಿಫೈ ಮಾಡಿದ್ದರು. ಈ ಮಧ್ಯೆ 2014 ಮತ್ತು 2015ರಲ್ಲಿ ಹಾಗೂ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗಲೇ ಹೈಕೋರ್ಟ್ ಇಡೀ ಭೂಸ್ವಾಧೀನ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲೂ ಹೋಗದ ಕಾಂಗ್ರೆಸ್ ಸರ್ಕಾರ ಬಡಾವಣೆಗೆ ನಿಗದಿಪಡಿಸಿದ್ದ 3546 ಎಕರೆ ಜಮೀನನ್ನು ಹರಾಜು ಹಾಕಲು ಹೊರಟಿದೆ. ಈ ಪ್ರಕರಣದಲ್ಲಿ ನಿಜವಾಗಿಯೂ
ದೂರು ನೀಡುವುದಿದ್ದರೆ ಅದು ಸಿದ್ದರಾಮಯ್ಯ ಅವರ ಮೇಲೆ ನೀಡಬೇಕಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.