Fake doctors: ನಕಲಿ ವೈದ್ಯರ ಪತ್ತೆಗೆ ಏಕಕಾಲಕ್ಕೆ ದಾಳಿಗೆ ಆರೋಗ್ಯ ಇಲಾಖೆ ಸಿದ್ಧತೆ
Team Udayavani, Jun 8, 2024, 8:10 PM IST
ಬೆಂಗಳೂರು: ಅರ್ಹ ಶಿಕ್ಷಣವನ್ನು ಹೊಂದದೆ ಹಾಗೂ ಬೇರೊಬ್ಬರ ಹೆಸರಿನಲ್ಲಿ ವೈದ್ಯ ವೃತ್ತಿ ನಡೆಸುವ ನಕಲಿ ವೈದ್ಯರನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದ್ದು, ಅದರ ಭಾಗವಾಗಿ ರಾಜ್ಯದಲ್ಲಿ ನಕಲಿ ವೈದ್ಯರು, ಕ್ಲಿನಿಕ್ಗಳ ಪತ್ತೆಗೆ ಏಕಕಾಲದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ.
ಕಲಬುರಗಿಯಲ್ಲಿ ನಡೆದ ಏಕಕಾಲದ ದಾಳಿಯಿಂದ ನಕಲಿ ವೈದ್ಯರು ಸಹಿತ ಕೆಪಿಎಂಇ ಕಾಯ್ದೆ ಉಲ್ಲಂ ಸಿದವರ ವಿರುದ್ಧ 49 ಪ್ರಕರಣಗಳು ದಾಖಲಾಗಿವೆ. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ದಾಳಿಗೆ ನಿರ್ಧರಿಸಲಾಗಿದೆ. ಪ್ರತಿ 3 ತಿಂಗಳಿಗೊಮ್ಮೆ ತಾಲೂಕು ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಇಲಾಖೆ ತಿಳಿಸಿದೆ.
1,600 ಪ್ರಕರಣ ದಾಖಲು:
ಪ್ರಸ್ತಕ ಸಾಲಿನಲ್ಲಿ ನಕಲಿ ವೈದ್ಯರು, ಕಾನೂನು ಬಾಹಿರ ವೈದ್ಯ ಸಂಸ್ಥೆಗಳ ವಿರುದ್ಧ ಒಟ್ಟು 1,600 ಪ್ರಕರಣಗಳು ದಾಖಲಾಗಿವೆ. ಕಲಬುರಗಿ ಜಿಲ್ಲೆಯಲ್ಲಿ ಏಕಕಾಲದ ದಾಳಿ ಸಂದರ್ಭ ನೋಂದಣಿಯಾಗದ 7 ಆಸ್ಪತ್ರೆಗಳು, 23 ನಕಲಿ ವೈದ್ಯರು, ಕೆಪಿಎಂಇ ಕಾಯ್ದೆ ಉಲ್ಲಂ ಸುವವರ ವಿರುದ್ಧ 16, ವಿವಿಧ ವೈದ್ಯ ಪದ್ಧತಿಯಲ್ಲಿ ನಕಲಿ ವೈದ್ಯರು 3 ಸಹಿತ ಒಟ್ಟು 49 ಪ್ರಕರಣ ದಾಖಲಿಸಿ, 21.35 ಲಕ್ಷ ರೂ. ದಂಡ ವಿಧಿಸಲಾಗಿದೆ.
ನಕಲಿ ವೈದ್ಯರ ಜಾಲ, ಕೆಪಿಎಂಇ ಕಾಯ್ದೆ ಉಲ್ಲಂಘಿಸುವವರ ಪತ್ತೆಗೆ ಆಯಾ ಜಿಲ್ಲಾ ಮಟ್ಟದಲ್ಲಿ ಏಕಕಾಲಕ್ಕೆ ದಾಳಿ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಕಲಬುರಗಿಯಲ್ಲಿ ಏಕಕಾಲದ ದಾಳಿ ಯಶಸ್ವಿಯಾಗಿದ್ದು, ಒಂದೇ ದಿನ 49 ಪ್ರಕರಣ ದಾಖಲಿಸಲಾಗಿದೆ.– ಡಾ| ವಿವೇಕ್ ದೊರೈ ಆರೋಗ್ಯ ಇಲಾಖೆ ವೈದ್ಯಕೀಯ ಕಾಯ್ದೆ ಉಪ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.