![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 5, 2023, 7:30 AM IST
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ರಾಜಕೀಯ ನಡೆ ಸದ್ಯಕ್ಕೆ ಸಸ್ಪೆನ್ಸ್.
ರಾಜಕೀಯವಾಗಿ ಯಾವುದಾದರೊಂದು ರಾಷ್ಟ್ರೀಯ ಪಕ್ಷದ ಜತೆ ಗುರುತಿಸಿಕೊಳ್ಳುವ ಅನಿವಾರ್ಯತೆ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದರೂ ಒಮ್ಮತಕ್ಕೆ ಬರಲು ಆಗಲಿಲ್ಲ.
ಬೆಂಬಲಿಗರ ಸಭೆಯ ಬಳಿಕ ಮಾತನಾಡಿದ ಸುಮಲತಾ, ಮುಂದಿನ ವಾರ ಮಂಡ್ಯದಲ್ಲಿ ಸಮಾವೇಶ ನಡೆಸಿ ತನ್ನ ನಿರ್ಧಾರವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ. ಬೆಂಬಲಿಗರ ಸಭೆಯಲ್ಲಿ ಕೆಲವರು ಬಿಜೆಪಿ ಸೇರುವಂತೆ ಮತ್ತೆ ಕೆಲವರು ಕಾಂಗ್ರೆಸ್ ಸೇರುವಂತೆ ಸಲಹೆ ನೀಡಿದರಾದರೂ ಅಂತಿಮ ತೀರ್ಮಾನ ನಿಮ್ಮದು. ಅದಕ್ಕೆ ನಮ್ಮ ಸಹಮತ ಇದೆ ಎಂದೂ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ವೈಯಕ್ತಿಕವಾಗಿ ಸುಮಲತಾರಿಗೆ ಕಾಂಗ್ರೆಸ್ ಸೇರ್ಪಡೆಗೆ ಒಲವು ಇದೆಯಾದರೂ ಭವಿಷ್ಯದ ರಾಜಕೀಯ ದೃಷ್ಟಿಯಿಂದ ಬಿಜೆಪಿ ಸೂಕ್ತ ಎಂದು ಕೆಲವು ಬೆಂಬಲಿಗರ ಒತ್ತಾಯವಾಗಿದೆ.
ಕೃಷ್ಣ ಜತೆ ಚರ್ಚೆ
ಹೀಗಾಗಿಯೇ ಬೆಂಬಲಿಗರ ಸಭೆಗೆ ಮುನ್ನ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ರಾಜಕೀಯವಾಗಿ ಮುಂದುವರಿಯಬೇಕಾದ ಮಾರ್ಗದ ಬಗ್ಗೆ ಸಲಹೆ ಕೇಳಿದರು. ಈ ಹಿಂದೆ ಮಂಡ್ಯದಲ್ಲೂ ಬೆಂಬಲಿಗರ ಸಭೆ ಕರೆದು ಪಕ್ಷ ಸೇರ್ಪಡೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದರು. ಆಗಲೂ ಕೆಲವರು ಬಿಜೆಪಿ ಎಂದರೆ ಮತ್ತೆ ಕೆಲವರು ಕಾಂಗ್ರೆಸ್ ಸೂಕ್ತ ಎಂದು ಪ್ರತಿಪಾದಿಸಿದ್ದರು. ಆಗಲೂ ಒಮ್ಮತ ಮೂಡಿರಲಿಲ್ಲ.
ಈಗ ಮುಂದಿನ ವಾರ ಮಂಡ್ಯದಲ್ಲೇ ಬೃಹತ್ ಸಮಾವೇಶ ನಡೆಸಿ ಘೋಷಿಸುವುದಾಗಿ ತಿಳಿಸಿದ್ದು ಬಹುತೇಕ ವಿಧಾನಸಭೆ ಚುನಾವಣೆ ಅಧಿಸೂಚನೆಗೆ ಮುನ್ನವೇ ತೀರ್ಮಾನ ಪ್ರಕಟವಾಗಬಹುದು ಎಂದು ಹೇಳಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.