ಬೇಡಿಕೆ ಈಡೇರದಿದ್ರೆ ವಾಲ್ಮೀಕಿ ಸಮಾಜದವರೇ ಮುಂದಿನ ಮುಖ್ಯಮಂತ್ರಿ
Team Udayavani, Dec 31, 2019, 3:03 AM IST
ಹೂವಿನಹಡಗಲಿ: ವಾಲ್ಮೀಕಿ ಸಮಾಜದ ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ವಾಲ್ಮೀಕಿ ಸಮಾಜದವರೇ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು ವಾಲ್ಮೀಕಿ ಸಮಾಜದ ಪ್ರಸನ್ನಾನಂದ ಪುರಿ ಶ್ರೀ ಎಚ್ಚರಿಕೆ ನೀಡಿದರು. ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಸೋಮವಾರ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಾಲ್ಮೀಕಿ ಸಮಾಜದ ಬೇಡಿಕೆ ಈಡೇರಿಸುತ್ತೇನೆಂದು ಸಿಎಂ ಯಡಿಯೂರಪ್ಪ ಮಾತು ಕೊಟ್ಟಿದ್ದಾರೆ.
ಅದರಂತೆ, ಜಾತ್ರಾ ಮಹೋತ್ಸವದಲ್ಲಿ ಘೋಷಣೆ ಮಾಡಬೇಕು. ಸರ್ಕಾರದ ವರದಿ ಬಂದ ನಂತರ ನಮ್ಮ ಸಮುದಾಯಕ್ಕೆ ಮೀಸಲಾತಿ ಕೊಡಬೇಕು. ಇಲ್ಲವಾದರೆ ಸಮಾಜದವರು ತೆಗೆದುಕೊಳ್ಳುವ ನಿರ್ಧಾರ ಬಹಳ ಕಠಿಣವಾಗಿರುತ್ತವೆ ಎಂದು ಎಚ್ಚರಿಸಿದರು. ಪರಿಶಿಷ್ಟ ಜಾತಿಗೆ ಸಮುದಾಯ ಹಾಗೂ ವಾಲ್ಮೀಕಿ ಸಮಾಜಕ್ಕೆ ಶೇ.3ರಿಂದ ಶೇ.7 ಮೀಸಲಾತಿ ಕೊಡಲೇಬೇಕೆಂದು ಅಂಬೇಡ್ಕರ್ ಅವರೇ ಸಂವಿಧಾನದಲ್ಲಿ ಹೇಳಿದ್ದಾರೆ.
ಅದರಂತೆ ರಾಜ್ಯದಲ್ಲಿ ಇಲ್ಲಿವರೆಗೂ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಬೇಡಿಕೆ ಈಡೇರಿಸಿಲ್ಲ. ನಮ್ಮ ಸಮಾಜದವರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಅಧಿಕಾರಕ್ಕೇರಿದ ನಂತರ ಸಮಾಜವನ್ನು ಮರೆಯುತ್ತಾರೆ. ಹಂಪಿ ಕನ್ನಡ ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರನ್ನಿಡಬೇಕು. ಇಲ್ಲವಾದರೆ ಸಮಾಜದ 15 ಶಾಸಕರು ತೆಗೆದುಕೊಳ್ಳುವ ನಿರ್ಧಾರಗಳನ್ನು ಜನರೇ ತೀರ್ಮಾನಿಸುತ್ತಾರೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.