ವ್ಯಕ್ತಿ ಪ್ರತಿಷ್ಠೆಗಿಂತ ಸಮಷಿ ಪ್ರಜ್ಞೆ ಮೂಡಿಸಿಕೊಳಬೇಕು 


Team Udayavani, Nov 18, 2017, 11:23 AM IST

sadashiv-swamiji.jpg

ಭಾರತ ಸಂಸ್ಕೃತಿಯ ಮೂಲ. ಜಗತ್ತಿನ ಇತಿಹಾಸದಲ್ಲಿ ಭಾರತಕ್ಕೆ ಉತ್ಛತಮವಾದ ಹಿರಿಮೆ-ಗರಿಮೆ ಇದೆ. ಈ ನೆಲದ ಸಂಸ್ಕೃತಿ, ಕಲೆ, ಸಾಹಿತ್ಯ, ಸಂಗೀತ ಇತರ ದೇಶಗಳಿಗೆ ಮಾದರಿಯಾಗಿದೆ. ವಿವಿಧತೆಯಲ್ಲಿ ಏಕತೆ ಕಾಣುವ ವಿಶಾಲ ಮನೋಭಾವ ನಮ್ಮದು. ಯೋಗ, ಧ್ಯಾನ, ಮೌನ, ತಪೋ ಸಾಧನಗಳ ಮೂಲಕ ಜಗತ್ತಿಗೆ ಶ್ರೇಷ್ಠತೆ ತಂದು ಕೊಟ್ಟ ಹೆಮ್ಮೆ ಭಾರತದ ಋಷಿಮುನಿಗಳವರದ್ದು. 

ಈ ನೆಲದ ಮೂಲ ಸಂಸ್ಕೃತಿ ಎಂದರೆ ಋಷಿ ಸಂಸ್ಕೃತಿ ಹಾಗೂ ಕೃಷಿ ಸಂಸ್ಕೃತಿ. ಕೃಷಿ ಪ್ರಧಾನ ವಾದ ರಾಷ್ಟ್ರದಲ್ಲಿ ಬದುಕುವ ನಾವು “ಮಣ್ಣೆನಗೆ ಹೊನ್ನು ಅಣ್ಣಯ್ಯ; ಮಣ್ಣೇ ಲೋಕದಲ್ಲಿ ಬೆಲೆಯಾದ್ದು’ ಎಂಬಂತೆ ಮಣ್ಣಿನ ಕಣ ಕಣಗಳಲ್ಲಿ ದೈವಿಶಕ್ತಿ ತುಂಬಿದವರು ಋಷಿಮುನಿಗಳು- ಸಂತ ಮಹಾಂತರು. ಧರ್ಮ, ಸಂಸ್ಕೃತಿ, ಸಂಸ್ಕಾರದೊಂದಿಗೆ ಮಾನವ ಬದುಕಿಗೆ ಮಾರ್ಗದರ್ಶನ ನೀಡಿ,

ಸನ್ಮಾರ್ಗದತ್ತ ಕೊಂಡೊಯ್ಯುವ ಗುರು ಅಥವಾ ಋಷಿಗಳು ನಾಡವರ ಆಸ್ತಿ ಮತ್ತು ಅಸ್ತಿತ್ವ. ಹಿಂದಿನಿಂದ ಬಂದ ಪರಂಪರೆಯಂತೆ ರಾಜ ಮಹಾರಾಜರು ರಾಜ್ಯಭಾರ ಮಾಡುವಲ್ಲಿ ರಾಜಗುರುಗಳ ಪಾತ್ರ ಹಿರಿದಾಗಿತ್ತು. ಹಾಗೆಯೇ ಇಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಬಂದ ನಂತರ ರಾಜಕೀಯ ನಾಯಕರು ಧರ್ಮಗುರುಗಳ ಮಾರ್ಗದರ್ಶನ ಪಡೆದು ನಡೆದರೆ ಒಳಿತಾಗುತ್ತದೆ. 

ರಾಜಕೀಯದಲ್ಲಿ ಧರ್ಮ ಇರಬೇಕೇ ವಿನಃ ಧರ್ಮದಲ್ಲಿ ರಾಜಕೀಯ ಬೆರೆಸಬಾರದು. ಧರ್ಮಸಂಸದ್‌ ಮೂಲಕ ಈ ವಿಚಾರ ಜನನಾಯಕರಿಗೆ ತಿಳಿ ಹೇಳುವಂತಾಗಬೇಕು. ಮುಖ್ಯವಾಗಿ ನಾವು ಭಾರತೀಯರು. ಧರ್ಮದ ವಿಚಾರ ಬಂದಾಗ ವ್ಯಕ್ತಿ ಪ್ರತಿಷ್ಠೆಗಿಂತ ಸಮಷ್ಟಿ ಪ್ರಜ್ಞೆ ಮೂಡಿಸಿ ಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಸುಧಾರಣಾ ಪರ್ವ ಕಾಣಲು ಸಾಧ್ಯ.

ಇಲ್ಲವಾದರೆ ನಮ್ಮ ಹಿಂದೂ ಸಂಸ್ಕೃತಿಯ ಮೂಲ ಆಶಯಕ್ಕೆ ನಾವೇ ಧಕ್ಕೆ ತಂದಂತಾಗುತ್ತದೆ. ಪ್ರಸ್ತುತ ದಿನಗಳಲ್ಲಿ ವಿಚಾರಿಸಿ ನಿರ್ಣಯ ಕೈಗೊಳ್ಳುವ ಅಂಶಗಳೆಂದರೆ, ಭಾರತೀಯ ಸಂಸ್ಕೃತಿಯ ಮೇಲೆ ಆಗುತ್ತಿರುವ ವಿದೇಶಿ ಸಂಸ್ಕೃತಿಯ ಪ್ರಭಾವ ಕಡಿಮೆಯಾಗಬೇಕು. ದೇಶೀಯ ವಸ್ತುಗಳ ಬಳಕೆ ಹೆಚ್ಚಾಗಬೇಕು. ವಿದೇಶಿ ವಸ್ತುಗಳ ಆಮದು ಕಡಿಮೆಯಾಗಬೇಕು.

ಗೋವು ರಾಷ್ಟ್ರ ಪ್ರಾಣಿಯಾಗಿ ಘೋಷಣೆಯಾಗಿ ಗೋಹತ್ಯೆ ಸಂಪೂರ್ಣವಾಗಿ ನಿಲ್ಲಬೇಕು. ಭಾರತೀಯ ಯುವಕರಲ್ಲಿ ನಮ್ಮ ನೆಲದ ಸಂಸ್ಕೃತಿ ಬಗೆಗಿನ ಅಭಿಮಾನ ಇಮ್ಮಡಿಯಾಗುವಂತೆ ಪ್ರೇರಣೆ ನೀಡಬೇಕು. ಭಾರತದ ಸಂಸ್ಕೃತಿ, ಸಂಸ್ಕಾರ, ಕಲೆ, ಸಂಗೀತ, ಸಾಹಿತ್ಯ ಜಗತ್ತಿನಲ್ಲಿ ರಾರಾಜಿಸಬೇಕು. ಇವೆಲ್ಲವುಗಳಿಗೆ ಧರ್ಮಸಂಸದ್‌ ಪ್ರೇರಣೆ, ಪೊತ್ಸಾಹದಾಯಕವಾಗಿ ನಿಲ್ಲಬೇಕು ಎಂಬುದೇ ನಮ್ಮ ಆಶಯ. 

* ಶ್ರೀ ಸದಾಶಿವ ಸ್ವಾಮೀಜಿ, ಶ್ರೀ ಹುಕ್ಕೇರಿಮಠ ಹಾವೇರಿ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.