![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 13, 2022, 12:47 PM IST
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಲಾಡ್ಜ್ ಆವರಣಕ್ಕೆ ಮಾಜಿ ಸಚಿವ ವಿನಯಕುಮಾರ ಸೊರಕೆ ಅವರು ಆಗಮಿಸಿದ್ದು, ಪಂಚನಾಮೆ ಪ್ರಗತಿಯಲ್ಲಿರುವುದರಿಂದ ಪೊಲೀಸರು ಅವಕಾಶ ನಿರಾಕರಿಸಿದ್ದು, ಪಂಚನಾಮೆ ಮುಗಿದ ಬಳಿಕ ಭೇಟಿಗೆ ಅವಕಾಶ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶವ ಇನ್ನೂ ತೆಗೆಯುವ ಕೆಲಸ ಆಗಿಲ್ಲ. ಕುಟುಂಬ ಭೇಟಿಗೆ ಬಂದರೂ ಸಾಧ್ಯವಾಗಿಲ್ಲ. ಇದೊಂದು ದೊಡ್ಡ ದುರಂತ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ. ಶೆ. 40 ಕಮಿಷನ್ ಗಾಗಿ ಆತ್ಮಹತ್ಯೆ ದೇಶದಲ್ಲೇ ಪ್ರಥಮವಾಗಿದೆ ಎಂದರು.
ಆಡಳಿತ ಸರಕಾರ, ಈಶ್ವರಪ್ಪ ಈ ಮೂಲಕ ಪ್ರಸಿದ್ದಿ ಪಡೆದಂತಾಗಿದೆ. ಈ ಹಿಂದೆ ನೋಟು ಲೆಕ್ಕ ಮಾಡುವ ಮಿಷನ್ ಬಳಸಿ ಪ್ರಸಿದ್ಧರಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಕೇವಲ ಸಂತೋಷ್ ಪಾಟೀಲ್ ಗೆ ಮಾತ್ರ ಅಲ್ಲ. ಅನೇಕರು ಆದೇಶ ಇಲ್ಲದೆ ಗುತ್ತಿಗೆ ಕೆಲಸ ಮಾಡಿದ್ದಾರೆ. ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂತೋಷ್ ಪಾಟೀಲ್ ಹೊಸದಿಲ್ಲಿಗೆ ಹೋದರೂ ನ್ಯಾಯ ಸಿಗಲಿಲ್ಲ. ಪ್ರಧಾನಿ, ಶಾ ಭೇಟಿಗೂ ಪ್ರಯತ್ನಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೇವೆಂದು ಭರವಸೆ ನೀಡಿರುವ ಪಕ್ಷ ಬಿಜೆಪಿ. ಆದರೆ ಈಗ ಭ್ರಷ್ಟಾಚಾರದ ಕಾರಣಕ್ಕೆ ಆತ್ಮಹತ್ಯೆಯಾಗುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ:ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ: ರಮಾನಾಥ ರೈ
ಹಿಜಾಬ್ ಸಮಸ್ಯೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಮುಟ್ಟಿತು. ವಿದ್ಯಾಭ್ಯಾಸದಲ್ಲಿ ಪ್ರಥಮ ಇದ್ದ ಉಡುಪಿ ಜಿಲ್ಲೆಯಲ್ಲಿ ನಿರಂತರ ವಿವಾದ, ದುರಂತ ಸಂಭವಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರನ್ನು ಬಿಜೆಪಿ ಮತ್ತು ಅದರ ಕಾರ್ಯಕರ್ತರೇ ಕೊಲ್ಲುತ್ತಿದ್ದಾರೆ. ಕೋಟದಲ್ಲಿ ಡಬ್ಬಲ್ ಮರ್ಡರ್ ಆಯಿತು. ಅವರ ಪಕ್ಷದವರನ್ನು ಅವರ ಪಕ್ಷದವರೇ ಕೊಲ್ಲುತ್ತಾರೆ. ಈಗ ಆತ್ಮಹತ್ಯೆಗೂ ಅವರದೇ ಪಕ್ಷ ಕಾರಣವಾಗಿದೆ ಎಂದರು.
ಈ ಹಿಂದೆ ಕಾಂಗ್ರೆಸ್ ಪಕ್ಷದ ಜಾರ್ಜ್ ಮೇಲೆ ಆರೋಪ ಬಂದಾಗ ಅವರು ರಾಜಿನಾಮೆ ನೀಡಿದ್ದರು. ಈಶ್ಚರಪ್ಪ ರಾಜಿನಾಮೆ ಕೊಟ್ಟು ಘನಸ್ತಿಕೆ ಉಳಿಸಿಕೊಳ್ಳಲಿ. ಬಹಳಷ್ಟು ಮಂದಿ ಗುತ್ತಿಗೆದಾರರು ಬಿಲ್ ಆಗದೆ ಕಾಯುತ್ತಿದ್ದಾರೆ. ಇನ್ನೆಷ್ಟು ಆತ್ಮಹತ್ಯೆ ಆಗಬೇಕು. ಮುಚ್ಚಿ ಹಾಕುತ್ತೀರಾ? ಸತ್ಯ ಬೆಳಕಿಗೆ ಬರುತ್ತಾ? ಇದಕ್ಕಿಂತ ಇನ್ಯಾವ ದಾಖಲೆ ಬೇಕು, ತಕ್ಷಣ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದರು.
ಸಿಎಂ ಅವರು ಈಶ್ವರಪ್ಪಗೆ ಹೆದರಬೇಡ ಅಂತಾರೆ. ತಡ ಮಾಡಬೇಡದೆ ತಕ್ಷಣ ರಾಜಿನಾಮೆ ಕೊಡಿ. ಇಲ್ಲದಿದ್ದರೆ ಜನರೇ ರೊಚ್ಚಿಗೆದ್ದು ರಾಜಿನಾಮೆ ಕೊಡಿಸುತ್ತಾರೆ. ರಾಜಿನಾಮೆ ಕೊಡದಿದ್ದರೆ ಪ್ರಕರಣ ತಿರಿಚುವ ಸಾಧ್ಯತೆ ಇದೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.