ಪ್ರಧಾನಿ ಮೋದಿ ಹೇಳಿಕೆಯಿಂದ ಶಾಕ್: ರಮೇಶ್
Team Udayavani, Jan 29, 2017, 3:45 AM IST
ಬೆಳಗಾವಿ: “ಪಂಜಾಬ್ ಚುನಾವಣಾ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಪ್ಪುಹಣ, ಐಟಿ ದಾಳಿ ವಿಚಾರದಲ್ಲಿ ಪರೋಕ್ಷವಾಗಿ ನನ್ನ ಹೆಸರು ಪ್ರಸ್ತಾಪ ಮಾಡಿದ್ದು ದೊಡ್ಡ ಶಾಕ್ ನೀಡಿದೆ. ಇದನ್ನು ನಾನು ನಿರೀಕ್ಷಿಸಿರಲಿಲ್ಲ. ಜವಾಬ್ದಾರಿ
ಸ್ಥಾನದಲ್ಲಿರುವ ದೇಶದ ಪ್ರಧಾನಿ ಈ ರೀತಿ ಆರೋಪ ಮಾಡುವ ಮೊದಲು ವಿಚಾರ ಮಾಡಬೇಕಿತ್ತು’ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” ಅಪನಗದೀಕರಣದ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪ ಮತ್ತು ರ್ಯಾಲಿಗಳಿಂದ ಪ್ರಧಾನಿ ಹೆದರಿದ್ದಾರೆ. ಅವರ ಮೇಲಿನ ಸಿಟ್ಟನ್ನು ನಮ್ಮ ಮೇಲೆ ಐಟಿಯಂತಹ ದಾಳಿ ನಡೆಸಿ ತೀರಿಸಿಕೊಳ್ಳುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರದ ಕುರ್ಚಿ ಗಟ್ಟಿ ಮಾಡಿಕೊಳ್ಳುವುದೇ ಅವರ ಪ್ರಮುಖ ಉದ್ದೇಶ’ ಎಂದರು. “ಪ್ರಧಾನಿ ಅವರ ಈ ಹೇಳಿಕೆ ಸಂಪೂರ್ಣ ರಾಜಕೀಯ ಪ್ರೇರಿತ’ ಎಂದು ನುಡಿದರು.
ಬೇನಾಮಿ ಆಸ್ತಿ ಮಾಡಿಲ್ಲ:
“ನಾನು ಯಾವುದೇ ಬೇನಾಮಿ ಆಸ್ತಿ ಮಾಡಿಲ್ಲ. ಈಗ ಐಟಿ ಅಧಿಕಾರಿಗಳು ನೀಡಿರುವ ಮಾಹಿತಿ ನಿಜವಾದರೆ, ನನ್ನ
ಮನೆಯಲ್ಲಿ ಮೂರು ಲಕ್ಷಕ್ಕಿಂತ ಹೆಚ್ಚಿಗೆ ಹಣ ಸಿಕ್ಕಿದೆ ಎಂಬುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಶಾಸಕ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಸವಾಲು ಹಾಕಿದರು.
ನಮ್ಮ ಕುಟುಂಬದ ಸದಸ್ಯರ ಮನೆಗಳ ಮೇಲೆ ನಡೆದಿರುವ ದಾಳಿಯ ಹಿಂದೆ ರಾಜಕಾರಣ ಇದೆ. ದೇವರು ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದರು.
ಸತೀಶ್ ಜತೆ ಮಾತಿಲ್ಲದೆ 30 ವರ್ಷಗಳಾದವು
ಬೆಳಗಾವಿ: “ಸಹೋದರ ಸತೀಶ್ ಜಾರಕಿಹೊಳಿಯನ್ನು ಮಾತನಾಡಿಸದೆ 30 ವರ್ಷಗಳಾಗಿವೆ. ಸಚಿವನಾದ ಮೇಲೆ ಒಮ್ಮೆ ಮಾತ್ರ ಅವರ ಮನೆಗೆ ಹೋಗಿ ಮಾತನಾಡಿದ್ದೆ.’ – ಐಟಿ ದಾಳಿಯ ನಂತರ ಸತೀಶ್ ಅವರನ್ನು ಭೇಟಿ ಮಾಡಿ
ಮಾತುಕತೆ ನಡೆಸಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ರಮೇಶ್ ಜಾರಕಿಹೊಳಿ, ಏನೇ ಮಾತನಾಡಬೇಕಿದ್ದರೂ ಅಥವಾ ಏನಾದರೂ ಹೇಳಬೇಕು ಎನಿಸಿದರೆ ಉಳಿದ ಸಹೋದರರ ಮೂಲಕ ಮಾತನಾಡುತ್ತೇವೆ. ಮುಖಾಮುಖೀ ಮಾತನಾಡಿಲ್ಲ ಎಂದು ನುಡಿದರು.
ಮೋದಿ ಹೇಳಿಕೆ ಹಾಸ್ಯಾಸ್ಪದ: ಎಚ್ಡಿಕೆ
ಬೆಂಗಳೂರು: ಪ್ರಧಾನಿ ನರೇಂದ್ರಮೋದಿ ಪಂಜಾಬ್ ಚುನಾವಣಾ ಪ್ರಚಾರದಲ್ಲಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದ ಮೇಲಿನ ಐಟಿ ದಾಳಿ ಬಗ್ಗೆ ಪ್ರಸ್ತಾಪಿಸಿರುವುದು ಹಾಗೂ ಬಿಜೆಪಿ ನಾಯಕರು, ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಈಶ್ವರಪ್ಪ-ಯಡಿಯೂರಪ್ಪ ಒಂದಾಗಿ ಹೋರಾಟ ಮಾಡಬೇಕೆಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.