![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 22, 2022, 3:54 PM IST
ಬೆಳಗಾವಿ: 2024 ರ ಲೋಕಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಎರಡು ಸೇರಿ ದೇಶದಲ್ಲಿ ಒಟ್ಟು 50 ಹೊಸ ರಾಜ್ಯಗಳು ಉದಯವಾಗಲಿವೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಹೊಸ ಬಾಂಬ್ ಸಿಡಿಸಿದರು. ನಗರದಲ್ಲಿ ಬುಧವಾರ ನ್ಯಾಯವಾದಿಗಳ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದ ಅವರು ಉತ್ತರ ಕರ್ನಾಟಕ ಸೇರಿದಂತೆ ಎರಡು ರಾಜ್ಯಗಳು ಹೊಸದಾಗಿ ಅಸ್ತಿತ್ವಕ್ಕೆ ಬರಲಿವೆ ಎಂದರು.
2024 ರ ಚುನಾವಣೆ ನಂತರ ಮೋದಿ ಅವರೇ ಹೊಸ ರಾಜ್ಯಗಳನ್ನು ಪ್ರಕಟಿಸಲಿದ್ದಾರೆ. ಉತ್ತರಪ್ರದೇಶದ ದಲ್ಲಿ ನಾಲ್ಕು, ಮಹಾರಾಷ್ಟ್ರ ದಲ್ಲಿ ಮೂರು ಹಾಗೂ ಕರ್ನಾಟಕದಲ್ಲಿ ಎರಡು ರಾಜ್ಯಗಳು ಅಸ್ತಿತ್ವಕ್ಕೆ ಬರಲಿವೆ ಎಂದರು.
ಬೆಳಗಾವಿ ಸುವರ್ಣ ವಿಧಾನಸೌಧ ಹೊಂದಿದೆ. ಧಾರವಾಡದಲ್ಲಿ ಹೈಕೋರ್ಟ್ ಇದೆ. ಕಿತ್ತೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಚಿಂತನೆ ನಡೆದಿದ್ದು ಉತ್ತರ ಕರ್ನಾಟಕ ಎಲ್ಲ ಸೌಲಭ್ಯಗಳನ್ನು ಹೊಂದಿದಂತಾಗಿದ್ದು ನೂತನ ರಾಜ್ಯ ಆಗುವದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದರು.
ಇದನ್ನೂ ಓದಿ : ಅಗ್ನಿಪಥ್ ಯೋಜನೆ ತರಲು ಹೇಳಿದವರು ಯಾರು? : ಹೆಚ್ ಡಿಕೆ ಪ್ರಶ್ನೆ
ಬೆಂಗಳೂರು ಈಗಾಗಲೇ ತುಂಬಿ ಹೋಗಿದೆ. ಕುಡಿಯುವ ನೀರಿನ ಸಮಸ್ಯೆ ಇದೆ. ಸಂಚಾರ ಸಮಸ್ಯೆ ವಿಪರೀತ ವಾಗಿದೆ. ಒಂದು ಕಿಲೋಮೀಟರ್ ದೂರ ಹೋಗಲು ತಾಸು ಗಟ್ಟಲೇ ಟ್ರಾಫಿಕ್ ದಲ್ಲಿ ಸಿಲುಕಬೇಕಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ಉತ್ತರ ಕರ್ನಾಟಕ ರಾಜ್ಯ ಸ್ಥಾಪನೆ ಮಾಡುವುದರಲ್ಲಿ ಯಾವ ತಪ್ಪಿಲ್ಲ. ಅದಕ್ಕೆ ಎಲ್ಲರೂ ಕೂಡಿ ಪ್ರಯತ್ನಿಸಬೇಕು ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.