
15 ಕ್ಷೇತ್ರಗಳಲ್ಲೂ ಗೆಲುವು ಖಚಿತ
Team Udayavani, Nov 25, 2019, 3:04 AM IST

ಹಾವೇರಿ: ಉಪ ಚುನಾವಣೆಯಲ್ಲಿ ಬೆಂಗಳೂರು ಶಿವಾಜಿನಗರ ಸೇರಿ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಈಗ ಗೆಲುವು ಎಷ್ಟು ಅಂತರದಲ್ಲಿ ಇರಬೇಕು ಎನ್ನುವುದಷ್ಟೇ ಯೋಚನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಯಡಿಯೂರಪ್ಪ ಎಂದಿಗೂ ಕಲ್ಪನೆ ಮಾಡಿಕೊಂಡು ಹೇಳಿಕೆ ಕೊಟ್ಟು ಜನರನ್ನು ಮರುಳು ಮಾಡುವುದಿಲ್ಲ. ಗುಪ್ತಚರ ಮಾಹಿತಿ ಆಧರಿಸಿಯೇ ಹೇಳುತ್ತಿದ್ದು, ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
ಕೇವಲ ಹಿರೇಕೆರೂರು ಮಾತ್ರವಲ್ಲ ಯಾವ 17 ಶಾಸಕರು ರಾಜೀನಾಮೆ ಕೊಟ್ಟು ನನ್ನ ಕೈ ಹಿಡಿದಿದ್ದಾರೋ ಅವರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದೇನೆ; ಮುಂದೆಯೂ ಕೊಡುತ್ತೇನೆ. ಹಿರೇಕೆರೂರು ತಾಲೂಕು ಮಾದರಿ ಆಗಲು ಏನು ಬೇಕೋ ಅದೆಲ್ಲವನ್ನೂ ಕೊಡುತ್ತೇನೆ. ಬರುವ ಬಜೆಟ್ನಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಯೋಚನೆ ಮಾಡಿದ್ದೇನೆ. ರೈತರು ಸ್ವಾಭಿಮಾನದಿಂದ ತಲೆ ಎತ್ತಿ ಓಡಾಡುವಂತೆ ಮಾಡುವುದು ನನ್ನ ಸಂಕಲ್ಪ ಎಂದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದರಾದ ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿ, ವಿಪ ಸದಸ್ಯರಾದ ಪ್ರದೀಶ ಶೆಟ್ಟರ್, ಎಸ್.ವಿ. ಸಂಕನೂರ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಮಾಜಿ ಸಂಸದ ಮಂಜುನಾಥ ಕುನ್ನೂರು, ಮಾಜಿ ಶಾಸಕ ಯು.ಬಿ. ಬಣಕಾರ, ಪಕ್ಷದ ಅಭ್ಯರ್ಥಿ ಬಿ.ಸಿ. ಪಾಟೀಲ, ಪ್ರಮುಖರಾದ ಕುಮಾರ ಬಂಗಾರಪ್ಪ, ಚಿಂಚನಸೂರ, ಕೆ.ಪಿ. ನಂಜುಂಡಿ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.