MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

ಜಾತಿನಿಂದನೆ, ಹಣ ಸುಲಿಗೆ, ಜೀವ ಬೆದರಿಕೆ ಪ್ರಕರಣ

Team Udayavani, Sep 16, 2024, 7:10 AM IST

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

ಬೆಂಗಳೂರು: ಗುತ್ತಿಗೆದಾರ ಮತ್ತು ಬಿಬಿಎಂಪಿ ಮಾಜಿ ಸದಸ್ಯರಿಗೆ ಜಾತಿನಿಂದನೆ, ಹಣ ಸುಲಿಗೆ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧನಕ್ಕೆ ಒಳ ಗಾಗಿರುವ ಆರ್‌. ಆರ್‌. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವೈಯಾಲಿ ಕಾವಲ್‌ ಠಾಣೆ ಪೊಲೀಸರು ನ್ಯಾಯಾ ಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 2 ದಿನ ಪೊಲೀಸ್‌ ಕಸ್ಟಡಿಗೆ ಪಡೆದಿದ್ದಾರೆ.

ಮುನಿರತ್ನ ಅವರನ್ನು ಅಶೋಕನಗರ ಠಾಣೆಯಲ್ಲಿ ತೀವ್ರ ವಿಚಾರಣೆಗೆ ಳಪಡಿಸಲಾಗಿದೆ. ವಿಚಾರಣೆ ವೇಳೆ ವೈರಲ್‌ ಆಗಿರುವ ಆಡಿಯೋದಲ್ಲಿರುವ ಧ್ವನಿ ತಮ್ಮದಲ್ಲ ಎಂದು ಮುನಿರತ್ನ ಹೇಳಿದ್ದಾಗಿ ತಿಳಿದುಬಂದಿದೆ.ಶನಿವಾರ ಸಂಜೆ ಕೋಲಾರದ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಬಂಧಿಸಿ ನಗರಕ್ಕೆ ಕರೆತಂದು ತಡರಾತ್ರಿಯೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗಜಾನನ ಭಟ್‌ ಅವರ ನಿವಾಸಕ್ಕೆ ಹಾಜರು ಪಡಿಸಿ, 2 ದಿನಗಳ ಕಾಲ ವಶಕ್ಕೆ ಪಡೆಯಲಾಯಿತು. ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಹೆಚ್ಚಿನ ವಿಚಾರಣೆಗಾಗಿ ಅಶೋಕನಗರ ಠಾಣೆಗೆ ಕರೆದೊಯ್ಯಲಾಗಿತ್ತು.

ಒಂದೂವರೆ ತಾಸು ವಿಚಾರಣೆ
ಶೇಷಾದ್ರಿಪುರ ಉಪವಿಭಾಗದ ಎಸಿಪಿ ಪ್ರಕಾಶ್‌ ತಡರಾತ್ರಿಯೇ ಮುನಿರತ್ನ ಅವರನ್ನು ಒಂದೂವರೆ ತಾಸು ಕಾಲ ಪ್ರಾಥಮಿಕ ವಿಚಾರಣೆ ನಡೆಸಿದ್ದರು. ರವಿವಾರ ಬೆಳಗ್ಗೆ ಮತ್ತೂಮ್ಮೆ ತೀವ್ರವಾಗಿ ವಿಚಾರಣೆ ನಡೆಸಿದ್ದು, ಪಾಲಿಕೆ ಸದಸ್ಯ ವೇಲುನಾಯಕರ್‌ಗೆ ಜಾತಿನಿಂದನೆ ಮಾಡಿದ್ದು ನಿಜವೇ? ಎಷ್ಟು ವರ್ಷಗಳಿಂದ ವೇಲು ಪರಿಚಯವಿದ್ದಾರೆ? ನಿಮ್ಮಿಬ್ಬರ ನಡುವೆ ಯಾವ ವಿಚಾರಕ್ಕೆ ಗಲಾಟೆ ಆಗಿತ್ತು? ಗುತ್ತಿಗೆದಾರ ಚೆಲುವರಾಜು ಅವರಿಂದ ಲಂಚ ಕೇಳಿದ್ದೀರಾ? ಯಾವ ಕಾಮಗಾರಿ ಗುತ್ತಿಗೆ ಸಂಬಂಧ ಅವರಿಂದ ಕಮಿಷನ್‌ ಕೇಳಿದ್ದಿರಿ? ಚೆಲುವರಾಜು ತಮ್ನನ್ನು ಭೇಟಿಯಾದಾಗ ವೇಲು ನಾಯಕರ್‌ ಬಗ್ಗೆ ಅಶ್ಲೀಲ ಪದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದು ನಿಜವೇ? ಆ ಆಡಿಯೋವನ್ನು ಚೆಲವರಾಜು ವೇಲು ನಾಯಕರ್‌ಗೆ ಕೇಳಿಸಿದ್ದಾರೆ, ಹಾಗಾದರೆ, ಆ ಆಡಿಯೋದಲ್ಲಿರುವುದು ನಿಮ್ಮ ಧ್ವನಿಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಎಸಿಪಿಯವರು ಕೇಳಿದ್ದಾರೆ.

ಧ್ವನಿ ನನ್ನದಲ್ಲ
ಅದಕ್ಕೆ ಉತ್ತರಿಸಿರುವ ಮುನಿರತ್ನ, ಆ ಆಡಿಯೋದಲ್ಲಿ ಇರುವುದು ನನ್ನ ಧ್ವನಿಯಲ್ಲ. ನಾನು ಎಂಎಲ್‌ಎ. ಆ ರೀತಿ ಮಾತನಾಡಲಿಲ್ಲ. ನನ್ನ ವಿರುದ್ಧ ಪಿತೂರಿ ಹಾಗೂ ಷಡ್ಯಂತ್ರ ಮಾಡಿದ್ದಾರೆ. ರಾಜಕೀಯ ದ್ವೇಷದಿಂದಲೇ ಈ ರೀತಿ ಪ್ರಕರಣ ದಾಖಲಿಸಿದ್ದಾರೆ. ದೂರುದಾರ ಚೆಲವರಾಜು ತನಗೆ ಪರಿಚಿತ ವ್ಯಕ್ತಿ. ಆದರೆ ಆತನನ್ನು ನಿಂದಿಸಿಲ್ಲ. ಹಲ್ಲೆಯೂ ಮಾಡಿಲ್ಲ. ವೇಲುನಾಯಕರ್‌ಗೂ ಜಾತಿ ನಿಂದನೆ ಮಾಡಿಲ್ಲ. ಯಾರೋ ಮಿಮಿಕ್ರಿ ಮಾಡುವ ವ್ಯಕ್ತಿಗಳ ಮೂಲಕ ಈ ಆಡಿಯೋವನ್ನು ತನ್ನ ರಾಜಕೀಯ ವೈರಿಗಳು ಸೃಷ್ಟಿಸಿದ್ದಾರೆ ಎಂದಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಧ್ವನಿ ಮಾದರಿ
ಎಫ್ಎಸ್‌ಎಲ್‌ಗೆ
ಮುನಿರತ್ನ ಅವರ ಧ್ವನಿ ಮಾದರಿ ಯನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸ ಲಾಗಿದೆ. ಜತೆಗೆ ಆಡಿಯೋವನ್ನು ಕೂಡ ಕಳುಹಿಸಲಾಗಿದೆ. ಪ್ರಾಥಮಿಕ ವರದಿ ಪ್ರಕಾರ, ಆಡಿಯೋದಲ್ಲಿರುವ ಧ್ವನಿ ಬಂಧಿತ ಬಿಜೆಪಿ ಶಾಸಕ ಮುನಿರತ್ನ ಅವರ ಧ್ವನಿಗೆ ಹೋಲಿಕೆ ಆಗುತ್ತಿದೆ. ಆದರೆ ವರದಿ ಬಂದ ಅನಂತರವೇ ಸತ್ಯ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.