ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತ್ಮಹತ್ಯೆ ಮಾಡಿಕೊಂಡ!

ಪ್ರಾಣಾಪಾಯದಿಂದ ಪಾರಾಗಿ ಬಂದ ಪತಿ: ಮಹಿಳೆ ಸೇರಿ ಮೂವರು ಆರೋಪಿಗಳ ಬಂಧನ

Team Udayavani, Aug 20, 2022, 8:52 AM IST

1sucide

ಬೆಂಗಳೂರು: ಇದೊಂದು ವಿಚಿತ್ರ ಪ್ರಕರಣ. ಪ್ರಿಯತಮೆಯ ಪತಿಯನ್ನು ಕೊಲೆಗೈದು ಆಕೆಯ ಜತೆ ವಾಸಿಸಲು ಸುಪಾರಿ ನೀಡಿದ ಪ್ರಿಯಕರನೇ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುಪಾರಿ ಪಡೆದ ಆರೋಪಿಗಳು ಆತನನ್ನು ಕೊಲೆ ಮಾಡಿದ್ದೇವೆ ಎಂದು ಸಾಸ್‌ ಚೆಲ್ಲಿದ ಫೋಟೋ ವಾಟ್ಸ್‌ಆ್ಯಪ್‌ಗೆ ಕಳುಹಿಸಿ ನಂಬಿಸಿದ್ದರಷ್ಟೇ. ಅಸಲಿಗೆ ಆತ ಕೊಲೆಯೇ ಆಗಿರಲಿಲ್ಲ. ಆದರೆ, ಪ್ರಿಯತಮೆಗಾಗಿ ಸುಪಾರಿ ಕೊಟ್ಟ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿದ್ದ.

ಇಂತದ್ದೊಂದು ಪ್ರಕರಣ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಸುಪಾರಿ ಕೊಡಲು ಪ್ರೇರೇಪಣೆ ನೀಡಿದ್ದ ಮಹಿಳೆ ಹಾಗೂ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೊಡ್ಡಬಿದರಕಲ್ಲು ನಿವಾಸಿ ಪಲ್ಲವಿ, ಹರೀಶ್‌, ಮುಗಿಲನ್‌, ಅಮ್ಮಜಮ್ಮ ಬಂಧಿತರು. ಪಲ್ಲವಿ ಪ್ರಿಯಕರ ಹಿಮವಂತ್‌ ಆತ್ಮಹತ್ಯೆ ಮಾಡಿಕೊಂಡವ. ಅಪಹರಣಕ್ಕೊಳಗಾದರೂ ಪ್ರಾಣಾಪಾಯದಿಂದ ಪರಾರಾದವರು ಪಲ್ಲವಿ ಪತಿ ನವೀನ್‌ಕುಮಾರ್‌.

ಇದನ್ನೂ ಓದಿ:ಭೀಕರ ರಸ್ತೆ ಅಪಘಾತ ; ತೀರ್ಥಯಾತ್ರೆಗೆ ತೆರಳಿದ್ದ 7 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಘಟನೆ ಹಿನ್ನೆಲೆ: ನವೀನ್‌ ಕುಮಾರ್‌ ಚೊಕ್ಕಸಂದ್ರ ದಲ್ಲಿ ವಿಲ್ಲಿಂಗ್‌ ಫ್ಯಾಕ್ಟರಿ ನಡೆಸಿಕೊಂಡಿದ್ದಾರೆ. ಇದರ ಜತೆಗೆ ಕಾರು ಚಾಲನೆ ವೃತ್ತಿಯನ್ನು ಮಾಡುತ್ತಿದ್ದರು. ದೊಡ್ಡ ಬಿದರಕಲ್ಲು ಬಳಿ ಪತ್ನಿ ಪಲ್ಲವಿ ಹಾಗೂ ಇಬ್ಬರು ಮಕ್ಕಳ ಜತೆಗೆ ವಾಸಿಸುತ್ತಿದ್ದರು. ಪತ್ನಿಗೆ ಹಿಮ ವಂತ್‌ ಎಂಬಾತನ ಪರಿಚಯವಾಗಿತ್ತು. ಪರಿಚಯ ಪ್ರೇಮಾಂಕುರಕ್ಕೆ ತಿರುಗಿತ್ತು. ನಂತರ ಪತಿ ನವೀನ್‌ನನ್ನು ಕೊಲೆ ಮಾಡಿ ಇಬ್ಬರು ಜತೆಯಾಗಿ ವಾಸಿಸಲು ಸಂಚು ರೂಪಿಸಿದ್ದರು. ಅದರಂತೆ ನವೀನ್‌ ಕೊಲೆಗೆ ಮೂವರಿಗೆ ಹಿಮವಂತ್‌ ಸುಪಾರಿ ಕೊಟ್ಟಿದ್ದ. ಅದರಂತೆ ಮೂವರು ಆರೋಪಿಗಳು ತಮಿಳು ನಾಡಿಗೆ ಟ್ರಿಪ್‌ ಹೊಗಬೇಕೆಂದು ಹೇಳಿ ನವೀನ್‌ ಕುಮಾರ್‌ ಕಾರು ಬುಕ್‌ ಮಾಡಿದ್ದರು. ಕಾರಿನಲ್ಲಿ ತಮಿಳುನಾಡಿಗೆ ಹೋಗುತ್ತಿದ್ದಂತೆ ನವೀನ್‌ಗೆ ಬೆದರಿಸಿ ಅಪಹರಿಸಿದ್ದರು.

ನವೀನ್‌ನನ್ನು ಕೊಲೆ ಮಾಡಲು ಹೆದರಿದ ಹಂತಕರು, ಆತನಿಗೆ ಮದ್ಯಪಾನ ಮಾಡಿಸಿ ಆತನ ಮೈ ಮೇಲೆ ಸಾಸ್‌ ಚೆಲ್ಲಿ ಅದರ ಫೋಟೋವನ್ನು ಹಿಮವಂತ್‌ಗೆ ಕಳುಹಿಸಿ ಕೊಲೆ ಮಾಡಿರುವುದಾಗಿ ಹೇಳಿದ್ದರು. ನವೀನ್‌ ಕುಮಾರ್‌ ಮೊಬೈಲ್‌ ಕೆಲ ದಿನಗಳಿಂದ ಸ್ವಿಚ್ಛ್‌ಆಫ್ ಆಗಿರುವುದನ್ನು ಗಮನಿಸಿದ ಅವರ ಸಹೋದರ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ನವೀನ್‌ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದರು. ಇತ್ತ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಆತಂಕಗೊಂಡ ಹಿಮವಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ವಿಚಾರ ತಿಳಿದ ಸುಪಾರಿ ಹಂತಕರು ನವೀನ್‌ನನ್ನು ಬಿಟ್ಟು ಕಳುಹಿಸಿದ್ದಳು. ಇದಾದ ಬಳಿಕ ನವೀನ್‌ ಮನೆಗೆ ವಾಪಸ್ಸಾಗಿ, ಆರೋಪಿಗಳು ಅಪಹರಣ ಮಾಡಿರುವ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು.

ಪೊಲೀಸರು ಅನುಮಾನದ ಮೇರೆಗೆ ಪಲ್ಲವಿಯನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಪಲ್ಲವಿ ಹಾಗೂ ಸುಪಾರಿ ಪಡೆದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.