ಕರಾವಳಿಯಲ್ಲಿ 3 ಸೈನಿಕ ತರಬೇತಿ ಶಾಲೆ


Team Udayavani, Jun 24, 2022, 6:40 AM IST

thumb 2 mili

ಸಾಂದರ್ಭಿಕ ಚಿತ್ರ

ಕಾರವಾರ: ಸರಕಾರ ಸೈನಿಕ ತರಬೇತಿ ಶಾಲೆಗಳನ್ನು ತೆರೆಯಲು ಅತ್ಯಂತ ಉತ್ಸಾಹ ತೋರಿದ್ದು, ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿ ಯುವಕರನ್ನು ಸೈನ್ಯಕ್ಕೆ ಸೇರಿಸಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಮೂರು ಸೈನಿಕ ತರಬೇತಿ ಶಾಲೆಗಳು ಕಾರ್ಯಾರಂಭ ಮಾಡಲಿವೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಅವರು ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿರುವ ಸರಕಾರ, ದಕ್ಷಿಣ ಕನ್ನಡದಲ್ಲಿ ರಾಣಿ ಅಬ್ಬಕ್ಕ ಸೈನಿಕ ಶಾಲೆ, ಉಡುಪಿಯಲ್ಲಿ ಕೋಟಿ ಚೆನ್ನಯ್ಯ ಅವಳಿ ವೀರಪುರುಷ ಸೈನಿಕರ ಶಾಲೆ ಹಾಗೂ ಉತ್ತರಕನ್ನಡದಲ್ಲಿ ಹೆಂಜಾ ನಾಯ್ಕ ಸೈನಿಕ ಶಾಲೆ ತೆರೆಯಲು ಮುಂದಾಗಿದ್ದು, ಈ ಬಗ್ಗೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ವಿ.ಅಕ್ಕಮಹಾದೇವಿ ಆದೇಶ ಹೊರಡಿಸಿದ್ದಾರೆ.

ಈ ಸೈನಿಕ ಶಾಲೆಗಳಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ, ಸಿದ್ಧತೆ, ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ-ವಸತಿಯೊಂದಿಗೆ ನೀಡಲು ಸರಕಾರ ನಿರ್ಧರಿಸಿದೆ. ಈ ಶಾಲೆಗಳಿಗೆ ಒಂದು ವರ್ಷಕ್ಕೆ ತಗಲುವ ವೆಚ್ಚ 67.50 ಲಕ್ಷ ರೂ.ಗಳನ್ನು ಸರಕಾರ ಮಂಜೂರು ಮಾಡಿದೆ.  ಸೇನೆ ಸೇರಬಯಸುವ ಯುವಕರು ಈ ಶಾಲೆಗಳಲ್ಲಿ ತರಬೇತಿ ಪಡೆಯಬಹುದು.

ನೇವಿ ತರಬೇತಿ ಶಾಲೆ ಬೇಕಿತ್ತು :

ಈ ನಡುವೆ ಸೈನಿಕ ಶಾಲೆಯಲ್ಲಿ ನೇವಿಗೆ ಸಂಬಂಧಿಸಿದ ಹುದ್ದೆಗಳಿಗೆ ಪೂರ್ವ ತರಬೇತಿ ನೀಡುವ ಶಾಖೆ ತೆರೆಯಬೇಕು ಎಂಬ ಆಗ್ರಹವೂ ಕೇಳಿಬಂದಿದೆ. ಸೀಬರ್ಡ್‌ ನೌಕಾನೆಲೆ ಯೋಜನೆ ಬೃಹತ್ತಾಗಿ ಬೆಳೆದಿದೆ. ಯುದ್ಧ ನೌಕೆಗಳಲ್ಲಿ ಕೆಲಸ ನಿರ್ವಹಿಸುವ ತಾಂತ್ರಿಕ ಮತ್ತು ತಾಂತ್ರಿಕೇತರ ತರಬೇತಿಗಳನ್ನು, ಡಾರ್ಕ್‌ ಯಾರ್ಡ್‌ನಲ್ಲಿ ಕೆಲಸ ಮಾಡುವ ಪೂರ್ವ ತರಬೇತಿ ನೀಡುವಂತಾದರೆ ಈ ಸೈನಿಕ ಶಾಲೆಗಳ ತರಬೇತಿ ಉದ್ದೇಶ ಯಶಸ್ವಿಯಾಗಲಿದೆ.

ನೌಕಾಪಡೆಯಲ್ಲಿ ಹೆಚ್ಚು ಉದ್ಯೋಗದ ಸಾಧ್ಯತೆಗಳಿವೆ. ಮರೀನ್‌ ಡ್ರೈವರ್, ನೌಕಾ ಚಾಲನೆ, ಸೇಲರ್ ಮತ್ತು ಈಜು ತರಬೇತಿ, ಜಲ ಸಾಹಸ ಕ್ರೀಡೆಗಳನ್ನು ನೇವಿಗೆ ಪೂರಕವಾಗಿ ಕಲಿಸುವ ಸೈನಿಕ ಶಾಲೆಯೂ ಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ನೌಕಾನೆಲೆಗೆ ಬೇಕಾದ ತರಬೇತಿ ಕೋರ್ಸ್‌ ಆರಂಭಿಸಬೇಕಿದೆ. ಸದ್ಯ ಇಂಥ ತರಬೇತಿ ಶಾಲೆಗಳಿರುವುದು ದೂರದ ಮುಂಬಯಿ, ಚೆನ್ನೈ ಹಾಗೂ ಕೇರಳದಲ್ಲಿ. ಹೀಗಾಗಿ ರಾಜ್ಯ ಸರಕಾರ ಈ ತರಬೇತಿ ಶಾಖೆ-ಕೋರ್ಸ್‌ಗಳನ್ನು ಇಲ್ಲಿನ ಪದವಿ ಹಾಗೂ ಎಂಜಿನಿಯರಿಂಗ್‌ ಕಾಲೇಜು ಕಟ್ಟಡಗಳನ್ನೇ ಬಳಸಿ ಆರಂಭಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಏನಿದರ ಉಪಯೋಗ? :

ಕರಾವಳಿ ಜಿಲ್ಲೆಗಳಿಂದ ಸೈನ್ಯಕ್ಕೆ ಸೇರಲು ಯುವಕರನ್ನು ಪ್ರೇರೇಪಿಸುವುದು ಮೊದಲ ಉದ್ದೇಶ.  ಕೇಂದ್ರ ಸರಕಾರದ ಹೊಸ ಯೋಜನೆ  “ಅಗ್ನಿಪಥ’ಕ್ಕೆ ಯುವ ಪಡೆಯನ್ನು ಪ್ರೇರೇಪಿಸುವುದು ಹಾಗೂ ಮೂರು ಜಿಲ್ಲೆಗಳ ಇತಿಹಾಸದಲ್ಲಿ ಹೆಸರು ಮಾಡಿದ ಅಬ್ಬಕ್ಕ, ಕೋಟಿ ಚೆನ್ನಯ್ಯ ಹಾಗೂ ಹೆಂಜಾ ನಾಯ್ಕರ ಹೆಸರು ಉಳಿಸುವುದು ಇತರ ಉದ್ದೇಶಗಳಾಗಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.