Tirthahalli; ಹೊಟ್ಟೆಕಿಚ್ಚು ಮಾಡಿ ರಾಜಕಾರಣ ಮಾಡಲು ಆಗುವುದಿಲ್ಲ: ಆರಗ ಜ್ಞಾನೇಂದ್ರ

ಅಂದು 5 ನಿಮಿಷ ಮೀಟಿಂಗ್ ಲೇಟ್ ಆಗಿದ್ದರು ನಾವೆಲ್ಲರೂ ನೆನಪಾಗಿ ಇರುತ್ತಿದ್ದೆವು...

Team Udayavani, Mar 4, 2024, 8:57 PM IST

1-swedasdsad

ತೀರ್ಥಹಳ್ಳಿ : ಹಿಂದಿನ ಅವಧಿಯಲ್ಲಿ ಮೀಟಿಂಗ್ ಮಾಡಿ ಹೊರ ಬರುವಾಗ ಕಟ್ಟಡ ಕುಸಿದು ಬಿತ್ತು. 5 ನಿಮಿಷ ಮೀಟಿಂಗ್ ಲೇಟ್ ಆಗಿದ್ದರು ನಾವೆಲ್ಲರೂ ನೆನಪಾಗಿ ಇರುತ್ತಿದ್ದೆವು. ನನಗೆ ಆ ಕ್ಷಣ ತುಂಬಾ ಬೇಜಾರಾಯಿತು. ಆಗಷ್ಟೇ ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಅವರು ಜವಾಬ್ದಾರಿ ವಹಿಸಿಕೊಂಡಿದ್ದರು. ನಾನು ಕೇಳಿದ ಕೂಡಲೇ 3 ಕೋಟಿ ಹಣವನ್ನು ನೀಡಿದ್ದರು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ಅತ್ಯಂತ ಭವ್ಯವಾದ ತಾ.ಪಂ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪಿಡಬ್ಲ್ಯೂಡಿ ಇಲಾಖೆಯಿಂದ 10 ಕೋಟಿ ತಂದು ಒಟ್ಟು 13.5 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದೇವೆ. 6 ತಿಂಗಳ ಕಾಲ ಇಂಜಿನಿಯರ್ ಬಳಿ ಚರ್ಚಿಸಿ ನಾಲ್ಕು ಇಲಾಖೆ ಬರುವ ಹಾಗೆ ಈ ಒಂದು ಭವ್ಯವಾದ ಕಟ್ಟಡ ನಿರ್ಮಾಣ ಮಾಡಿದ್ದೇವೆ. ಈ ಕಟ್ಟಡ ಉದ್ಘಾಟನೆ ಮಾಡಲು ನಮ್ಮ ಮನೆ ಗೃಹಪ್ರವೇಶ ಮಾಡುವ ರೀತಿಯಲ್ಲಿ ಹೋಮ ಹವನ ಮಾಡಿ ಪೂಜೆ ಸಲ್ಲಿಸಿದ್ದೇವೆ ಎಂದರು.

ತೀರಾ ಹೊಟ್ಟೆಕಿಚ್ಚು ಮಾಡಿ ರಾಜಕಾರಣ ಮಾಡಲು ಆಗುವುದಿಲ್ಲ, ನಾವು ಕಚ್ಚಾಟ ನಡೆಸಿದ್ದೇವೆ ಆದರೆ ಈಗ ಹಾಗೆ ಮಾಡಬಾರದು ಎಂದು ಕೊಂಡಿದ್ದೇನೆ. ಈ ಕಾರಣಕ್ಕೆ ಎಲ್ಲಾ ಶಾಸಕರನ್ನು ಕರೆದು ಸನ್ಮಾನ ಮಾಡಬೇಕು ಎಂದು ಅಂದುಕೊಂಡಿದ್ದೆ. ಇವತ್ತು ಕೆಲವರು ಬಂದಿಲ್ಲ ಆದರೆ ಅವರು ಕೂಡ ಶುಭ ಹಾರೈಸಿದ್ದಾರೆ. ತಾ.ಪಂ ಮಾಜಿ ಸದಸ್ಯರು ಬರಬೇಕು ಎಂದು ಪ್ರತಿಯೊಬ್ಬರನ್ನು ಕರೆದಿದ್ದೇವೆ ಎಂದರು.

5 ಬಾರಿ ಶಾಸಕರು ಏನು ಮಾಡಿದ್ದಾರೆ ಎಂದು ಕೆಲವರು ಕೇಳುತ್ತಾರೆ, ಅವರಿಗೆ ನಾನು ಹೇಳುವುದು ಇಷ್ಟೇ, ಈ ಭವ್ಯವಾದ ಕಟ್ಟಡ, ಹಳ್ಳಿ ಹಳ್ಳಿಗೂ ನೂತನ ರಸ್ತೆಗಳು , ತುಂಗಾ ನದಿಗೆ ಅಡ್ಡಲಾಗಿ ಹೊಸ ಸೇತುವೆ, ಬಾಳೆಬೈಲು ಕಾಲೇಜು, ಪಟ್ಟಣದಲ್ಲಿ 24 ಗಂಟೆ ನೀರು, ಶುದ್ಧ ಕುಡಿಯುವ ಜಲಜೀವನ್ ನೀರು ಹೀಗೆ ಹಲವು ಅಭಿವೃದ್ಧಿ ಕಾರ್ಯಗಳು ಮಾಡಿದ್ದೇನೆ. ಇದೆ ಪ್ರತಿಯೊಂದಕ್ಕೂ ಉತ್ತರ ಎಂದು ಹೇಳಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ ಅದ್ಬುತವಾದ ಕಟ್ಟಡದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತಸವಾಗಿದೆ. ಕಟ್ಟಡದಲ್ಲಿ ಒಳ್ಳೆ ಒಳ್ಳೆಯ ಕೆಲಸಗಳು ಆಗಬೇಕಿದೆ. 76000 ಶಾಲೆಗಳು ನನ್ನ ಇಲಾಖೆ ಅಡಿಯಲ್ಲಿ ಬರುತ್ತದೆ. ಬಹಳ ದೊಡ್ಡ ಇಲಾಖೆ ಎಂದರೆ ಅದು ಶಿಕ್ಷಣ ಇಲಾಖೆ, ಮುಂದಿನ ಪೀಳಿಗೆಗೆ ಒಳ್ಳೆಯದಾಗಬೇಕು ಎಂಬುದೇ ನನ್ನ ಆಸೆ ಎಂದರು.

ಬಿ ವೈ ರಾಘವೇಂದ್ರ ಮಾತನಾಡಿ ತೀರ್ಥಹಳ್ಳಿ ತಾಲೂಕಿನ ಅಭಿವೃದ್ಧಿ ಕಾರ್ಯಕ್ಕೆ, ವೇಗಕ್ಕೆ ಕಿರೀಟದಂತೆ ಕಾಣಿಸುತ್ತಿರುವ 12 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಭವ್ಯ ಕಟ್ಟಡ ಹೊರಗಡೆಯಿಂದ ಸಾಮಾನ್ಯ ಕಟ್ಟಡತರ ಕಂಡರೂ ಒಳಗಡೆ ಫೈವ್ ಸ್ಟಾರ್ ಹೋಟೆಲ್ ರೀತಿ ನಿರ್ಮಾಣಗೊಂಡಿದೆ. ಈ ಭಾಗದ ಜನರ ಸಮಸ್ಯೆಯನ್ನು ನೀಗಿಸುವ ಕಟ್ಟಡವಾಗಲಿ ಅದಕ್ಕೆ ಅಧಿಕಾರಿಗಳು ಶ್ರಮ ಹಾಕಬೇಕು ಎಂದರು.

ಈಗಾಗಲೇ ತೀರ್ಥಹಳ್ಳಿಗೆ ಸಾಕಷ್ಟು ಅಭಿವೃದ್ಧಿ ಆಗಿದೆ. 55 ಕೋಟಿ ವೆಚ್ಚದಲ್ಲಿ ತುಂಗಾ ನದಿಗೆ ಸೇತುವೆ ಉದ್ಘಾಟನೆ ಆಗಿದೆ. ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ಮಾಡಲು ಚರ್ಚೆ ನಡೆಸಿದ್ದೇವೆ, ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ ಸುರಂಗ ಮಾರ್ಗ ಮಾಡಲು ಚರ್ಚೆ ನಡೆಸಲಿದ್ದೇವೆ. ಕುಡಿಯುವ ನೀರಿನ ಜಲಜೀವನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ನೀರು ಕೊಡುವ ಯೋಜನೆ ಬಂದಿದೆ. ಶಾಸಕರ ನೇತೃತ್ವದಲ್ಲಿ ತೀರ್ಥಹಳ್ಳಿಗೆ ಕಳೆ ಬರುವ ಕೆಲಸ ಆಗಿದೆ ಎಂದರು.

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರು ಮಾತನಾಡಿ,ನಾಲ್ಕು ಶಾಖೆಗಳು ಈ ಕಟ್ಟಡದಲ್ಲಿ ನಡೆಯಲಿದೆ. ಕಡಿದಾಳ್ ಮಂಜಪ್ಪನವರಿಂದ ಆರಗ ಜ್ಞಾನೇಂದ್ರ ರವರೆಗೆ ಹಲವರು ಶಾಸಕರಾಗಿ ಹಳೆಯ ಕಟ್ಟಡದಲ್ಲಿ ಕೆಲಸ ಮಾಡಿದ್ದಾರೆ. ಪ್ರತಿಯೊಂದು ಇಲಾಖೆಗೆ ಜನರು ಅಲೆಯುವ ಬದಲು ಒಂದೇ ಕಟ್ಟಡದಲ್ಲಿ ಎಲ್ಲಾ ಇಲಾಖೆ ಕೆಲಸ ಮಾಡಿದರೆ ಜನರಿಗೆ ಅನುಕೂಲವಾಗುತ್ತದೆ. ಈ ಕಟ್ಟಡದಿಂದ ಅಧಿಕಾರಿಗಳಿಂದ ಜನರಿಗೆ ಅನುಕೂಲವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪ. ಪಂ ಅಧ್ಯಕ್ಷರಾದ ಗೀತಾ ರಮೇಶ್, ತಹಶೀಲ್ದಾರ್ ಜಕ್ಕಣ್ಣ ಗೌಡರ್, ಕಡಿದಾಳ್ ದಿವಾಕರ್, ರುದ್ರೆಗೌಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.