Tirupati; ಹೆಚ್ಚುವರಿ 250 ಟನ್‌ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!

ಲಡ್ಡು ಪ್ರಕರಣದ ಪರಿಣಾಮ ತಿರುಪತಿಗೆ ಒಟ್ಟು 600 ಟನ್‌ ತುಪ್ಪ ಪೂರೈಕೆ

Team Udayavani, Oct 8, 2024, 7:20 AM IST

1-tirr

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರೆಕೆ ತುಪ್ಪ ಬಳಸಲಾಗಿದೆ ಎಂಬ ವಿಚಾರ ದೇಶದಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನ ಸಮಿತಿ (ಟಿಟಿಡಿ) ಇದೀಗ ಕರ್ನಾಟಕ ಹಾಲು ಒಕ್ಕೂಟಕ್ಕೆ (ಕೆಎಂಫ್) ಮತ್ತೆ ಸುಮಾರು 250 ಟನ್‌ ಶುದ್ಧ ಹಸುವಿನ ತುಪ್ಪ ಪೂರೈಸುವಂತೆ ಕೋರಿದೆ. ಕೆಎಂಎಫ್ ಒಪ್ಪಿಗೆ ನೀಡಿದೆ.

ಈ ಹಿಂದೆ ತಿರುಪತಿ ಲಡ್ಡು ತಯಾರಿಗೆ ಕೆಎಂಎಫ್ ತುಪ್ಪವನ್ನೇ ಬಳಸಲಾಗುತ್ತಿತ್ತು. ಒಂದೆರಡು ವರ್ಷಗಳ ಹಿಂದೆ ಬೆಲೆ ಹೆಚ್ಚಳ ನೆಪವೊಡ್ಡಿ ಕೆಲವು ಖಾಸಗಿ ಹಾಲಿನ ಡೇರಿಗಳಿಂದ ತುಪ್ಪ ಖರೀದಿಸಲು ಆರಂಭಿಸಿತ್ತು. ಕೋಟ್ಯಂತರ ಭಕ್ತರ ನಂಬಿಕೆಯ ಬುನಾದಿಯನ್ನು ಅಲುಗಾಡಿಸಿರುವ ಕಹಿ ವಿವಾದದ ಅನಂತರ ಎಚ್ಚೆತ್ತುಕೊಂಡಿರುವ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಮತ್ತೆ ಕೆಎಂಎಫ್‌ನಿಂದ ಹೆಚ್ಚುವರಿ ತುಪ್ಪ ಖರೀದಿಸುವ ನಿರ್ಧಾರಕ್ಕೆ ಬಂದಿದೆ.
250 ಟನ್‌ ನಂದಿನಿ

ತುಪ್ಪ ಪೂರೈಕೆಗೆ ಸಿದ್ಧತೆ
ತಿರುಪತಿ ದೇವಸ್ಥಾನ ಆಡಳಿತ ಮತ್ತು ಕೆಎಂಎಫ್ ತುಪ್ಪ ಪೂರೈಕೆ ಸಂಬಂಧ ಒಡಬಂಡಿಕೆ ಮಾಡಿಕೊಂಡಿವೆ. ಕಳೆದ ಸೆಪ್ಟಂಬರ್‌ನಿಂದಲೇ 3 ತಿಂಗಳು 350 ಟನ್‌ ತುಪ್ಪ ಪೂರೈಸುವ‌ ಪ್ರಕ್ರಿಯೆ ಆರಂಭವಾಗಿದೆ. ಮತ್ತೆ ಹೆಚ್ಚುವರಿಯಾಗಿ 250 ಟನ್‌ ಹಸುವಿನ ತುಪ್ಪಕ್ಕೆ ಬೇಡಿಕೆ ಸಲ್ಲಿಸಿದೆ ಎಂದು ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್‌ ಹೇಳಿದ್ದಾರೆ.

7,500 ಟನ್‌ ದಾಸ್ತಾನು
ಕರ್ನಾಟಕ ಹಾಲು ಒಕ್ಕೂಟದಲ್ಲಿ ಸುಮಾರು 7,500 ಟನ್‌ ತುಪ್ಪ ದಾಸ್ತಾನು ಇದೆ. ಇದಲ್ಲದೆ 2,500 ಟನ್‌ ತುಪ್ಪವನ್ನು ಚಿಲ್ಲರೆ ಮತ್ತು ಇತರ ಉದ್ದೇಶಗಳಿಗಾಗಿ ಪೂರೈಸಲಾಗುತ್ತಿದೆ. ಭಕ್ತರಿಗೆ ಪ್ರಸಾದ ಮತ್ತು ಇತರ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ನಂದಿನಿ ತುಪ್ಪ ಬಳಕೆಯನ್ನು ರಾಜ್ಯ ಸರಕಾರವು ಕಡ್ಡಾಯಗೊಳಿಸಿದ ಅನಂತರ ಕೆಎಂಎಫ್ ತುಪ್ಪಕ್ಕೆ ಈಗ ರಾಜ್ಯವ್ಯಾಪಿ ಹಲವಾರು ಧಾರ್ಮಿಕ ಸಂಸ್ಥೆಗಳು ಮತ್ತು ದೇವಾಲಯಗಳಿಂದ ಬೇಡಿಕೆ ಬರುತ್ತಿದೆ ಎಂದು ಕೆಎಂಎಫ್ನ ಮಾರಾಟ ವಿಭಾಗದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಎಂಎಫ್ ಈಗಾಗಲೇ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಧರ್ಮಸ್ಥಳ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಕಟೀಲು ದುರ್ಗಾ ಪರಮೇಶ್ವರೀ ದೇವಸ್ಥಾನ ಮತ್ತು ಇತರ ದೇವಸ್ಥಾನಗಳಿಗೆ ತುಪ್ಪವನ್ನು ಪೂರೈಸುತ್ತಿದೆ. ಟಿಟಿಡಿ ಪ್ರಸ್ತುತ ಕೆಎಂಎಫ್‌ ತುಪ್ಪವನ್ನು ಕೆಜಿಗೆ 475 ರೂ.ಗೆ ಖರೀದಿಸುತ್ತಿದೆ ಎಂದು ಹೇಳಿದ್ದಾರೆ.

ಟಿಟಿಡಿ ಹೆಚ್ಚುವರಿ ನಂದಿನಿ ತುಪ್ಪ ಖರೀದಿ ಮಾಡುವ ಸಂಬಂಧ ಬೇಡಿಕೆ ಸಲ್ಲಿಸಿದೆ. ಇತ್ತೀಚಿನ ಟೆಂಡರ್‌ನಂತೆ ಹೆಚ್ಚುವರಿ ತುಪ್ಪವನ್ನು ಪೂರೈಸಲಾಗುತ್ತದೆ.ಟಿಟಿಡಿಯ ಸೂಚನೆ ಬಂದಾಗ ಪೂರೈಸಲು ಸಿದ್ಧರಿದ್ದೇವೆ.
– ಎಂ.ಕೆ. ಜಗದೀಶ್‌, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ

 ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Rain Heavy

Heavy Rain alert; ಕರಾವಳಿ, ಕೊಡಗಿನಲ್ಲಿ ಇಂದು ಭಾರೀ ಮಳೆ?

1-cpy

CP Yogeeshwara ಮತ್ತೆ ದಿಲ್ಲಿಗೆ!; ‘ಸೈನಿಕ’ನ ಮುಂದಿನ ನಡೆಯೇ ಬಹಳ ಕುತೂಹಲ

priyank-kharge

Gram Panchayat; ಗ್ರಾಮಸಭೆ ಕಡ್ಡಾಯ: ಕಾರ್ಯಾಚರಣೆ ಮಾರ್ಗಸೂಚಿ ಪ್ರಕಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.