![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 13, 2022, 9:55 AM IST
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ಟೇಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಎಲ್ಲಾ ಹುದ್ದೆಗಳನ್ನು ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದ್ದು, ಅಕ್ಟೋಬರ್ ತಿಂಗಳ 31 ರಂದು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371J ಮೀಸಲಾತಿಯಂತ ಒಟ್ಟು 420 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರಲ್ಲಿ 11 ಪುರುಷ ತೃತೀಯ ಲಿಂಗಿಗಳಿಗೆ ಮೀಸಲಾಗಿದೆ. ರಾಜ್ಯದ ಇತರ ಭಾಗಗಳಲ್ಲಿ ಒಟ್ಟು 3064 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 68 ಹುದ್ದೆಗಳು ತೃತೀಯ ಲಿಂಗಿ ಪುರುಷರಿಗೆ ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳಲ್ಲಿ ಒಟ್ಟು ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳಲ್ಲಿ ಸುಮಾರು 16000 ಹುದ್ದೆಗಳು ಭರ್ತಿಯಾಗಬೇಕಿದೆ ಎಂದರು.
ಇದನ್ನೂ ಓದಿ:ಉಪ್ಪಿನಂಗಡಿ : 8,800ರೂ. ಬೆಲೆಯ ಫೋನ್ 1,785 ರೂ.ಗೆ : ಪಾರ್ಸೆಲ್ ನಂಬಿ ಹಣ ಕಳೆದುಕೊಂಡರು
ನೇಮಕಾತಿ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ನಡೆಯಲಿದ್ದು, ಅಭ್ಯರ್ಥಿಗಳು, ಯಾವುದೇ ಅಕ್ರಮಗಳ ಅಥವಾ ವಾಮಮಾರ್ಗದ ಮೂಲಕ ಹುದ್ದೆಗಳನ್ನು ಪಡೆಯಲು ಯತ್ನಿಸಿದರೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವರು ಎಚ್ಚರಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.