IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
Team Udayavani, Jul 4, 2024, 1:03 PM IST
ಬೆಂಗಳೂರು: ಬುಧವಾರವಷ್ಟೇ 25 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರವು, ಇದೀಗ ಮತ್ತೆ ನಾಲ್ಕು ಅಧಿಕಾರಿಗಳನ್ನು ವರ್ಗ ಮಾಡಿದೆ.
ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ.
ಕೊಪ್ಪಳ ಎಸ್ಪಿ ಯಶೋಧಾ ಒಂಟಗೋಡಿ ಅವರನ್ನು ವರ್ಗಾವಣೆ ಮಾಡಿ, ಲೋಕಾಯುಕ್ತ ಎಸ್ ಪಿಯಾಗಿ ನೇಮಿಸಲಾಗಿದೆ.
ಕರ್ನಾಟಕ ಲೋಕಾಯುಕ್ತ ಅಧಿಕಾರಿಯಾಗಿದ್ದ ಡಾ. ರಾಮ್ ಅರಸಿದ್ದಿ ಅವರನ್ನು ಕೊಪ್ಪಳಕ್ಕೆ ನೂತನ ಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಲೋಕಾಯುಕ್ತ ಎಸ್ ಪಿಯಾಗಿದ್ದ ಸಂಜೀತ್ ವಿ.ಜೆ ಅವರನ್ನು ಈಶಾನ್ಯ ಡಿಸಿಪಿ ಆಗಿ ನೇಮಿಸಲಾಗಿದೆ.
ಸೀಮಾ-ಸುಮನ್ ವರ್ಗಾವಣೆ
10 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮೈಸೂರು ಹಾಗೂ ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತರು ಸೇರಿ ಒಟ್ಟು 25 ಐಪಿಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಗುಪ್ತಚರ ದಳದಲ್ಲೂ ಬದಲಾವಣೆ ಮಾಡಿದೆ. ಅಲ್ಲದೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ವಿಶೇಷ ತನಿಖಾ ತಂಡದಲ್ಲಿರುವ ಇಬ್ಬರು ಅಧಿಕಾರಿಗಳ ಹುದ್ದೆಯಲ್ಲಿ ವರ್ಗಾವಣೆ ಮಾಡಿದ್ದು, ತನಿಖಾ ತಂಡದಲ್ಲಿ ಮುಂದುವರಿಸಿದೆ.
ಪ್ರಜ್ವಲ್ ಪ್ರಕರಣದ ಎಸ್ಐಟಿಯಲ್ಲಿದ್ದ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರನ್ನು ಮೈಸೂರು ನಗರ ಪೊಲೀಸ್ ಆಯುಕ್ತೆಯಾಗಿ ವರ್ಗಾಯಿಸಿದ್ದು, ಬೆಂಗಳೂರು ಆಡಳಿತ ವಿಭಾಗದ ಎಐಜಿ ಡಾ.ಸುಮನ್ ಡಿ.ಪೆನ್ನೇಕರ್ ಅವರನ್ನು ಬಿಎಂಟಿಎಫ್ ಎಸ್ಪಿಯಾಗಿ ವರ್ಗಾಯಿಸಿದೆ. ಆದರೆ, ಎಸ್ಐಟಿಯಲ್ಲೇ ಮುಂದು ವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.