![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2020, 3:05 AM IST
ಮಂಗಳೂರು: ಈಗ ಪ್ರಾರಂಭಗೊಂಡಿರುವ ವಿಧಾನಮಂಡಲ ಅಧಿವೇಶನದಲ್ಲಿ ಗಮನಸೆಳೆಯುವ ಮೂಲಕ ತುಳು ಭಾಷೆಯನ್ನು ಅಧಿಕೃತ ರಾಜ್ಯಭಾಷೆಯಾಗಿ ಮಾಡುವ ಭರವಸೆ ಕಾರ್ಯರೂಪಕ್ಕೆ ತರಬೇಕೆಂದು ಆಗ್ರಹಿಸಿ ಜೈ ತುಳುನಾಡ್ ಸಂಘಟನೆ ಆಶ್ರಯದಲ್ಲಿ ಟ್ವೀಟ್ ತುಳುನಾಡ್ ಅಭಿಯಾನ ಸೋಮವಾರ ಸಂಜೆ 6ರಿಂದ ರಾತ್ರಿ 10ರ ವರೆಗೆ ನಡೆಯಿತು.
#TuluOfficialin KA_KL ಹ್ಯಾಶ್ಟ್ಯಾಗ್ ಅಡಿಯಲ್ಲಿ ಅಭಿಯಾನ ನಡೆಸಲಾಯಿತು. ತುಳು ಅಧಿಕೃತ ರಾಜ್ಯಭಾಷೆ ಮಾಡಬೇಕೆಂಬ ತುಳುನಾಡಿನ ಕೂಗನ್ನು ಈಗಾಗಲೇ ಇಲ್ಲಿನ ಶಾಸಕರು ಸರ್ಕಾರಕ್ಕೆ ತಲುಪಿಸಿದ್ದಾರೆ. ಫೆ. 18ರಿಂದ ಅಧಿವೇಶನ ಆರಂಭವಾಗುವುದರಿಂದ ಮತ್ತೂಮ್ಮೆ ನೆನಪಿಸುವ ಉದ್ದೇಶದಿಂದ ಹ್ಯಾಶ್ಟ್ಯಾಗ್ ಅಭಿಯಾನ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಜೈ ತುಳುನಾಡ್ ಸಂಘಟನೆಯು ಈಗಾಗಲೇ ಹಲವು ಬಾರಿ ಟ್ವೀಟರ್ ಅಭಿಯಾನ ನಡೆಸಿ ಜನಪ್ರತಿನಿಧಿಗಳ ಗಮನ ಸೆಳೆದಿದೆ.
ಸಚಿವರ ಟ್ವೀಟ್: ತುಳು ಭಾಷೆಯನ್ನು ಅಧಿಕೃತ ರಾಜ್ಯ ಭಾಷೆಯಾಗಿ ಘೋಷಿಸಬೇಕೆಂಬ ತುಳುವರ ಬೇಡಿಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗುವುದು. ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಅಗತ್ಯ ತೀರ್ಮಾನ ಕೈಗೊಳ್ಳಲು ಇದು ಸಕಾಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.