Tumakuru: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ಸಂಸಾರ ಮಾಡೋದು ಕಷ್ಟವಾಗಿದೆ.ಊಟ ಮಾಡೋಕು ಕಷ್ಟ ಆಗಿದೆ....

Team Udayavani, Nov 26, 2023, 11:40 PM IST

1-sdsads

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸದಾಶಿವ ನಗರದಲ್ಲಿ ನಡೆದಿದೆ. ಸಾವಿಗೀಡಾದವರು ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಎಂದು ತಿಳಿದು ಬಂದಿದೆ.

ಸಾವಿಗೂ ಮುನ್ನ ಗರೀಬ್ ಸಾಬ್ ದೊಡ್ಡಮ್ಮನಿಗೆ ಡೆತ್ ನೋಟ್ ಬರೆದಿದ್ದಾರೆ‌. ದೊಡ್ಡಮ್ಮನಿಗೆ ನಮಸ್ಕಾರಗಳು. ನಮಗೆ ಸಾಲ ಹೆಚ್ಚಾಗಿದೆ. ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರ್ತಿಲ್ಲ.ಹೀಗಾಗಿ ಸಂಸಾರ ಮಾಡೋದು ಕಷ್ಟವಾಗಿದೆ.ಊಟ ಮಾಡೋಕು ಕಷ್ಟ ಆಗಿದೆ. ಊರಲ್ಲಿದ್ದಾಗ ಹೆಂಡತಿ ಅಣ್ಣ ಸಾದಿಕ್, ಹೆಂಡತಿಯ ತಂಗಿ ಯಾಸಿನ್ ನಮ್ಮ ಮೇಲೆ ವಿಷ ಕಾರಿದ್ದರು. ಅದಕ್ಕೆ ನಾವು ಇಲ್ಲಿಗೆ ಬಂದಿದ್ದೇವೆ. ಇಲ್ಲಿ ಸಾಲ ಕಟ್ಟೋದು ಹೆಚ್ಚಾಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೀವಿ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ.

ಉಳಿದ ಹಣವನ್ನ ನಮ್ಮ ದೊಡ್ಡಮ್ಮನಿಗೆ ವಾಪಾಸು ಕೊಡಿ.ಮನೆ ವಸ್ತುಗಳನ್ನ ನೀವು ತಗೋಳಿ.ಹದಿನೈದು ಸಾವಿರ ಹಣವನ್ನ ಜರಿನಾ ಆಂಟಿಗೆ ಕೊಡಿ. ನಮ್ಮ ಬೈಕ್ ನ ನಮ್ಮ ಹಿರಿಯಣ್ಣ ಅಜಾಜ್ ಗೆ ಕೊಡಿ. ಅತ್ತಿಗೆ ಪರ್ವೀನ್ ಮತ್ತು ಅಣ್ಣನಿಗೆ ಫೋನ್ ಕೊಡಿ. ದೊಡ್ಡಮ್ಮ ನೀವು ಬೇಕಾದ ವಸ್ತುಗಳನ್ನ ಇಟ್ಟುಕೊಳ್ಳಬಹುದು ಅಥವಾ ಮಾರಿಕೊಳ್ಳಬಹುದು. ತುಂಬಾ ವಿಷಯ ಇದೆ. ಆದ್ರೆ ಇದರಲ್ಲಿ ಬರೆಯೋಕಾಗಲ್ಲ. ಈ ಪತ್ರವನ್ನ ಪೊಲೀಸರಿಗೆ ತೋರಿಸಿ ಎಂದು ಬರೆಯಲಾಗಿದೆ.

ಮತ್ತರ್ ಮಾಮನಿಗೆ ಕೊನೆಯ ನಮಸ್ಕಾರಗಳು. ನಮಗೆ ಊಟಕ್ಕೆ ಅಕ್ಕಿ ಕೊಟ್ಟಿದ್ದೀರಾ, ಅದಕ್ಕೆ ನಿಮಗೆ ಮೆಳೇಕೋಟೆಯಲ್ಲಿರೋ ಅಂಗಡಿಯಲ್ಲಿರೋ ಸಾಮಾನುಗಳು ಮತ್ತೆ ಅದರಲ್ಲಿ ಐದು ಸಾವಿರ ಇಟ್ಟಿದ್ದೀವಿ. ಒಂದು ತಿಂಗಳು ಬಾಡಿಗೆ 2000 ರೂ. ಕೊಡಬೇಕು. ಸದಾಶಿವನಗರದ ಮೂರನೇ ಬಿ ಮುಖ್ಯರಸ್ತೆಯಲ್ಲಿರುವ ನಾವು ವಾಸಿಸುವ ಮನೆಯ ಕೆಳಗಿನವರು ನಮಗೆ ತುಂಬಾ ಕಾಟ ಕೊಟ್ಟಿದ್ದಾರೆ.
ನಮಗೆ ಯಾರಾದರೂ ಸಹಾಯ ಮಾಡಿದರೆ ಅವರಿಗೆ ಇಲ್ಲಸಲ್ಲದನ್ನ ಹೇಳ್ತಿದರು. ನಾವು ಅವರು ಹೇಳಿದಂತೆ ಕೇಳಬೇಕಿತ್ತು. ಇಲ್ಲವಾದರೆ ಅವರು ನಮ್ಮ ಜತೆ ಜಗಳ ಮಾಡುತಿದ್ದರು.ಶಬಾನಾ ನಮಗೆ ಏಳು ತಿಂಗಳ ಹಣ ಕೊಟ್ಟಿರಲಿಲ್ಲ. ಹಣ ಕೇಳಿದ್ದಕ್ಕೆ ನಮ್ಮ ಮೇಲೆ ವಿಷ ಕಾರುತ್ತಿದ್ದಾಳೆ. ನಮ್ಮ ಸಾವಿಗೆ ಐದು ಜನರೇ ಕಾರಣ. ನಮ್ಮ ಮನೆಯ ಕೆಳಗಿನ ಖಲಂದರ್, ಅವನ ಮಗಳು ಸಾನಿಯಾ,ಅವನ ಹಿರಿಯ ಮಗ, ಮಹಡಿ ಮನೆಯ ಶಬಾನಾ, ಮತ್ತು ಅವಳ ಮಗಳು ಸಾನಿಯಾ ಈ ಎಲ್ಲರೂ ನಮ್ಮ ಸಾವಿಗೆ ಕಾರಣ ಎಂದು ಬರೆಯಲಾಗಿದೆ.

ನಮ್ಮ ಸಾವಿಗೆ ಗೃಹ ಮಂತ್ರಿ ಸರ್ ಕಾನೂನು ರೀತಿ ಶಿಕ್ಷೆ ಕೊಡಬೇಕು ಎಂದು ಬೇಡಿಕೊಳ್ತೀನಿ.ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕೈ ಮುಗಿದು ಕೇಳಿಕೊಳ್ಳುತ್ತೇವೆ. ನಮ್ಮ ದೇಹವನ್ನ ಪೋಸ್ಟ್ ಮಾರ್ಟಮ್ ಮಾಡಬೇಕು. ಇನ್ನೂ ವಿಷಯ ಫೋನ್ ನಲ್ಲಿದೆ. ಇಂತಿ ನಿಮ್ಮ ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಎಂದು ಬರೆಯಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

Karnataka ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.