![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 5, 2024, 10:15 PM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.10 ಮತ್ತು 11 ರಂದು ಕರ್ನಾಟಕಕ್ಕೆ ಬರಲಿದ್ದು, ಅವರ ಕಾರ್ಯಕ್ರಮಗಳ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಸೋಮವಾರ ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅಮಿತ್ ಶಾ ಅವರ ತಾತ್ಕಾಲಿಕ ಕಾರ್ಯಕ್ರಮ ಪಟ್ಟಿ ಪ್ರಕಾರ ಅವರು ಫೆ.10ರ ಶನಿವಾರ ಬೆಳಗ್ಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎಂದರು.
ಅದೇ ದಿನ ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಕೋರ್ ಕಮಿಟಿ ಸದಸ್ಯರ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸರ್ಕಾರಿ ಕಾರ್ಯಕ್ರಮವೂ ಇರಲಿದೆ. ಸಂಜೆ 5 ಗಂಟೆಗೆ ಸುತ್ತೂರು ಜಾತ್ರೆಯಲ್ಲೂ ಪಾಲ್ಗೊಳ್ಳುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಮೊದಲು ಫೆ.9 ಮತ್ತು 10 ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿತ್ತು. ಅದರೀಗ ಫೆ.10 ಮತ್ತು 11 ಎನ್ನಲಾಗುತ್ತಿದ್ದು, ಕಾರ್ಯಕ್ರಮ ಪಟ್ಟಿ ಇನ್ನೂ ಅಂತಿಮಗೊಳ್ಳದೇ ಇರುವುದರಿಂದ ಸ್ಪಷ್ಟತೆ ಇಲ್ಲದಂತಾಗಿದೆ. ಆದರೆ, ಫೆ.10 ರ ಸಂಜೆ 5 ಗಂಟೆಗೆ ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗುವ ವಿಚಾರವನ್ನು ಸುತ್ತೂರು ಶ್ರೀಗಳಿಗೆ ಖಚಿತಪಡಿಸಿದ್ದಾರೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.