ಸಂತೋಷ್‌ ಭೇಟಿಯಾದ ಅನರ್ಹ ಶಾಸಕರು


Team Udayavani, Nov 14, 2019, 3:05 AM IST

Karnataka-rebel-MLAs-in-Mumbai_0

ಬೆಂಗಳೂರು: ಸುಪ್ರೀಂ ಕೋರ್ಟ್‌ ತೀರ್ಪು ಹೊರಬೀಳುತ್ತಿದ್ದಂತೆ ಬಹುತೇಕ ಅನರ್ಹ ಶಾಸಕರು ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿ ಹಲವು ವಿಚಾರಗಳ ಬಗ್ಗೆ ಖಾತರಿಪಡಿಸಿಕೊಂಡರು.

ಪಕ್ಷ ಸೇರ್ಪಡೆ, ಟಿಕೆಟ್‌ ಖಾತರಿ, ಬಂಡಾಯ ಉಪಶಮನ, ಕುಟುಂಬದವರಿಗೆ ಟಿಕೆಟ್‌ ಇತರೆ ವಿಚಾರಗಳ ಬಗ್ಗೆ ಸಂತೋಷ್‌ ಅವರೊಂದಿಗೆ ಮುಕ್ತವಾಗಿ ಚರ್ಚಿಸಿ ಖಾತರಿಪಡಿಸಿಕೊಂಡರು. ಪಕ್ಷ ಸೇರ್ಪಡೆ, ಟಿಕೆಟ್‌ ಖಾತರಿ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಮಾತ್ರವಲ್ಲದೆ, ಪಕ್ಷದ ವರಿಷ್ಠರ ಸಹಮತದ ಬಗ್ಗೆ ಖಾತರಿ ಪಡೆದುಕೊಳ್ಳಲು ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಕೆಲವರಲ್ಲಿ ಅಸಮಾಧಾನ: ಸುಪ್ರೀಂ ಕೋರ್ಟ್‌ ತೀರ್ಪು ತಮ್ಮ ಪರವಾಗಿ ಬರುವ ನಿರೀಕ್ಷೆ ಅನರ್ಹ ಶಾಸಕರಲ್ಲಿತ್ತು. ಸ್ಪೀಕರ್‌ ಆದೇಶವನ್ನು ಮರುಶೀಲಿಸುವಂತೆ ನ್ಯಾಯಾಲಯ ತೀರ್ಪು ನೀಡುವ ನಿರೀಕ್ಷೆ ಹಲವು ಅನರ್ಹ ಶಾಸಕರಲ್ಲಿತ್ತು. ಒಂದೊಮ್ಮೆ ತೀರ್ಪು ಆ ರೀತಿ ಬಂದಿದ್ದರೆ ರಾಜೀನಾಮೆ ಅಂಗೀಕಾರವಾಗಿ ಅನರ್ಹತೆಯ ಕಳಂಕ ಕಳಚುತ್ತಿತ್ತು. ನಂತರ ಸಚಿವರಾಗಿ ಆ ಮೇಲೆ ಉಪಚುನಾವಣೆ ಎದುರಿಸುವ ಲೆಕ್ಕಾಚಾರದಲ್ಲಿದ್ದರು. ಆದರೆ ಸುಪ್ರೀಂ ಕೋರ್ಟ್‌ ಅನರ್ಹತೆಯನ್ನು ಎತ್ತಿ ಹಿಡಿದು, ಚುನಾವಣಾ ಸ್ಪರ್ಧೆಯ ನಿರ್ಬಂಧ ಸಡಿಲಿಸಿದೆ. ಇದು ಕೆಲ ಅನರ್ಹರಲ್ಲಿ ಬೇಸರ ಮೂಡಿಸಿದ್ದರೂ ಆ ಬಗ್ಗೆ ಹೆಚ್ಚಾಗಿ ತೋರ್ಪಡಿಸಿಕೊಳ್ಳಲಿಲ್ಲ.

ಅಲ್ಪಸಂಖ್ಯಾತರಿಗೆ ಟಿಕೆಟ್‌?: ಶಿವಾಜಿನಗರ ಕ್ಷೇತ್ರದಿಂದ ಮಾಜಿ ಸಚಿವ ಆರ್‌.ರೋಷನ್‌ ಬೇಗ್‌ ತಮ್ಮ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡುವಂತೆ ಕೋರಿದ್ದು, ಇದಕ್ಕೆ ಸಹಮತ ವ್ಯಕ್ತವಾಗಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಬ್ಬ ಅಲ್ಪಸಂಖ್ಯಾತ ಅಭ್ಯರ್ಥಿಗೂ ಟಿಕೆಟ್‌ ನೀಡಿರಲಿಲ್ಲ. ಇದೀಗ ರೋಷನ್‌ ಬೇಗ್‌ ಪುತ್ರನಿಗೆ ಟಿಕೆಟ್‌ ನೀಡಲು ಮುಂದಾದರೆ ಅಲ್ಪಸಂಖ್ಯಾತರೊಬ್ಬರಿಗೆ ಟಿಕೆಟ್‌ ನೀಡಿದಂತಾಗಲಿದೆ.

ಅಥಣಿ ಅಭ್ಯರ್ಥಿ ಗೊಂದಲ?: ಅಥಣಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಅಥಣಿ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಹಾಗಾಗಿ ಲಕ್ಷ್ಮಣ ಸವದಿ ಅವರ ಸ್ಪರ್ಧೆ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹಾಗಿದ್ದರೂ ಮಹೇಶ್‌ ಕುಮಟಳ್ಳಿ ಅವರೇ ಅಭ್ಯರ್ಥಿಯಾಗಲಿದ್ದಾರೆಯೇ ಎಂಬ ಬಗ್ಗೆಯೂ ಅನುಮಾನವಿದೆ. ಇಬ್ಬರ ಪೈಕಿ ಒಬ್ಬರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡುವುದು, ಮತ್ತೂಬ್ಬರನ್ನು ಕಣಕ್ಕಿಳಿಸುವ ಬಗ್ಗೆ ಹಿರಿಯ ನಾಯಕರು ಚರ್ಚಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.