Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

ಪಟ್ಟಿ ಜತೆ ಸಿಎಂ, ಡಿಸಿಎಂ ರಾಜಧಾನಿಗೆ ದೌಡು

Team Udayavani, May 29, 2024, 7:08 AM IST

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

ಬೆಂಗಳೂರು: ಮೇಲ್ಮನೆ ಅಭ್ಯರ್ಥಿಗಳ ಆಯ್ಕೆಗಾಗಿ ರಾಜ್ಯ ಕಾಂಗ್ರೆಸ್‌ ದಿಲ್ಲಿಯಲ್ಲಿ ಕಸರತ್ತು ಆರಂಭಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲಾ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮಂಗಳವಾರ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತಿತರ ಮುಖಂಡರು ಏಳು ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಮುದ್ರೆ ಒತ್ತುವ ಸಾಧ್ಯತೆಗಳಿವೆ.

ಪ್ರಾದೇಶಿಕತೆ ಹಾಗೂ ಜಾತಿವಾರು ಆಗಿ ಸಿದ್ಧಪಡಿಸಿಕೊಂಡು ಹೋಗಿದ್ದ ಪಟ್ಟಿಯನ್ನು ಸುಜೇìವಾಲ ಹಾಗೂ ವೇಣುಗೋಪಾಲ್‌ ಮುಂದಿಟ್ಟು ಚರ್ಚಿಸಿರುವ ಸಿಎಂ, ಡಿಸಿಎಂ ತಮ್ಮ ಅತ್ಯಾಪ್ತರ ಪರವಾಗಿಯೂ ಬೇಡಿಕೆ ಮಂಡಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಇಬ್ಬರು ಎಐಸಿಸಿ ಪ್ರ.ಕಾರ್ಯದರ್ಶಿಗಳ ಜತೆ ಮಾತುಕತೆ ಮುಗಿಸಿದ್ದಾರೆ. ಹರಿಯಾಣ ಪ್ರವಾಸದಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸುವುದು ವಿಳಂಬವಾದದ್ದರಿಂದ ಅವರ ಭೇಟಿ ಸಾಧ್ಯವಾಗಲಿಲ್ಲ. ಹೀಗಾಗಿ ಖರ್ಗೆ ಜತೆ ಬುಧವಾರ ಮಹತ್ವದ ಹಾಗೂ ಅಂತಿಮ ಸುತ್ತಿನ ಸಭೆ ನಡೆಯಲಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವ ಪುತ್ರ ಯತೀಂದ್ರ ಅವರಿಗೆ ಮೇಲ್ಮನೆ ಸದಸ್ಯತ್ವ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಒತ್ತಡ ಹಾಕುತ್ತಿದ್ದಾರೆ. ಮೇಲ್ಮನೆಯಲ್ಲಿ ಅನುಭವಿಗಳು ಇರುವುದು ಮುಖ್ಯ, ಹೀಗಾಗಿ ರಮೇಶ್‌ ಕುಮಾರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗ್ರಹಿಸುತ್ತಿದ್ದಾರೆ. ಸುಜೇìವಾಲಾ ಜತೆಗೆ ಪ್ರತ್ಯೇಕವಾಗಿ ಚರ್ಚಿಸಿದ ಡಿಸಿಎಂ, ಮೇಲ್ಮನೆಯಲ್ಲಿ ರಮೇಶ್‌ ಕುಮಾರ್‌ ಅವರ ಅನಿವಾರ್ಯವನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದು, ಮುಂದೆ ಮೇಲ್ಮನೆಯಲ್ಲಿ ಸಭಾಪತಿ ಸ್ಥಾನವನ್ನು ನೀಡಿದರೆ ಹೆಚ್ಚಿನ ಅನುಕೂಲ ಆಗಲಿದೆ ಎಂಬುದನ್ನು ಅರ್ಥ ಮಾಡಿಸಲು ಯತ್ನಿಸಿದರು.

ಸಚಿವ ಬೋಸರಾಜ್‌ ಮುಂದುವರಿಕೆ ಸಾಧ್ಯತೆ
ಪ್ರಸ್ತುತ ಮೇಲ್ಮನೆಯಲ್ಲಿ ಸಭಾನಾಯಕರಾಗಿರುವ ಸಚಿವ ಬೋಸರಾಜ್‌ ಅವರನ್ನು ಮುಂದುವರಿಸುವ ಸಾಧ್ಯತೆಗಳಿದ್ದು, ಕೆ. ಗೋವಿಂದರಾಜು ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಸಚಿವ ಸಂಪುಟ ದರ್ಜೆಯಲ್ಲಿ ಮುಂದುವರಿಸಿ, ಮೇಲ್ಮನೆಯಲ್ಲಿ ಅವರ ಸ್ಥಾನಕ್ಕೆ ಒಕ್ಕಲಿಗ ಕೋಟಾದಡಿ ಮತ್ತೂಬ್ಬರಿಗೆ ಅವಕಾಶ ನೀಡುವ ಚಿಂತನೆಗಳು ನಡೆದಿವೆ. ಪಕ್ಷದಲ್ಲಿ ಹಿರಿಯರಾದ ಬಿ.ಎಲ್‌. ಶಂಕರ್‌, ವಿನಯ್‌ ಕಾರ್ತಿಕ್‌, ವಿ.ಆರ್‌. ಸುದರ್ಶನ್‌, ಬಿ.ವಿ. ಶ್ರೀನಿವಾಸ್‌, ಪುಷ್ಪಾ ಅಮರನಾಥ್‌, ಮಂಜುಳಾ ನಾಯ್ಡು, ಸಚಿನ್‌ ಮೀಗಾ ಸಹಿತ ಹಲವರ ಹೆಸರು ಕೇಳಿ ಬರುತ್ತಿವೆ.

ಪರಿಷತ್‌ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಸಿಎಂ, ಡಿಸಿಎಂ ಇಬ್ಬರೇ ನಿರ್ಧಾರ ಕೈಗೊಳ್ಳ ಬಾರದು. ನಮ್ಮೆಲ್ಲ ಹಿರಿ ಯರ, ಅನುಭವಿಗಳ ಸಲಹೆ- ಸೂಚನೆ ಪಡೆಯುವುದು ಸೂಕ್ತ.
– ಡಾ| ಪರಮೇಶ್ವರ, ಗೃಹ ಸಚಿವ

ಇರುವುದು ಏಳೇ ಸ್ಥಾನ. 300ಕ್ಕೂ ಹೆಚ್ಚು ಆಕಾಂಕ್ಷಿ ಗಳಿದ್ದಾರೆ. ಎಲ್ಲರಿಗೂ ಕೊಡ ಲಾಗುವು ದಿಲ್ಲ. ಕಷ್ಟಕರ ಸ್ಥಿತಿ ಇದೆ. ನೋಡೋಣ. ಖಂಡಿತ ಪರಮೇಶ್ವರ ಅವರ ಮಾತು ಕೇಳಿಯೇ ಕೇಳುತ್ತೇವೆ.
– ಡಿ.ಕೆ. ಶಿವಕುಮಾರ್‌, ಡಿಸಿಎಂ

ಟಾಪ್ ನ್ಯೂಸ್

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

suicide (2)

kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.