V. Somanna: ಮೊಟ್ಟ ಮೊದಲ ಪ್ರಯತ್ನದಲ್ಲೇ ಒಲಿದ ಅದೃಷ್ಟ
Team Udayavani, Jun 10, 2024, 1:42 AM IST
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿರುವ ವಿ.ಸೋಮಣ್ಣ ಅವರಿಗೆ ಚೊಚ್ಚಲ ಆಯ್ಕೆಯಲ್ಲೇ ಅದೃಷ್ಟದ ಬಾಗಿಲು ತೆರೆದಿದ್ದು, ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಮಂತ್ರಿ ಯಾಗಿ ಪದವಿ ಪಡೆದಿದ್ದಾರೆ.
ರಾಮನಗರ ಜಿಲ್ಲೆ ದೊಡ್ಡ ಮರಳ ವಾಡಿಯಲ್ಲಿ ವೀರಣ್ಣ- ಕೆಂಪಮ್ಮ ದಂಪತಿಯ ಪುತ್ರರಾಗಿ 1951ರ ಜು.20 ರಂದು ಜನಿಸಿದ ಸೋಮಣ್ಣ, 1974ರಲ್ಲಿ ಬೆಂಗಳೂರಿನ ವಿವಿ ಪುರಂ ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. ಪದವಿ ಪಡೆದರು.
1983-87ರ ವರೆಗೆ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಅವರು, 1994ರಲ್ಲಿ ಬಿನ್ನಿಪೇಟೆ ವಿಧಾ ನ ಸಭಾ ಕ್ಷೇತ್ರದ ಜನತಾ ದಳ ಶಾಸಕ ರಾಗಿ ವಿಧಾನಸಭೆ ಪ್ರವೇಶಿಸಿದರು. 1996-99ರ ವರೆಗೆ ಬೆಂಗಳೂರು ನಗರಾಭಿವೃದ್ಧಿ ಮತ್ತು ಬಂಧಿಖಾನೆ ಸಚಿವರಾಗಿ ಸೇವೆ ಸಲ್ಲಿಸಿದ ಸೋಮಣ್ಣ, 1999ರಲ್ಲಿ ಬಿನ್ನಿಪೇಟೆಯಿಂದ ಸ್ವತಂತ್ರ ವಾಗಿ ಗೆದ್ದು ಶಾಸಕರಾಗುವ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದರು.
2004 ರಲ್ಲಿ ಕಾಂಗ್ರೆಸ್ನಿಂದ 3ನೇ ಬಾರಿಗೆ ವಿಧಾನಸಭೆ ಪ್ರವೇ ಶಿಸಿದ ಅವರು, 2008ರಲ್ಲಿ ಗೋವಿಂದರಾಜ ನಗರದ ಕಾಂಗ್ರೆಸ್ ಶಾಸಕ ರಾದರು. 2010-18ರವ ರೆಗೆ ಕರ್ನಾ ಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ, 2018ರಲ್ಲಿ ಬಿಜೆಪಿಯಿಂದ ಶಾಸಕರಾಗಿ 2019-20 ರಲ್ಲಿ ತೋಟಗಾರಿಕೆ, ರೇಷ್ಮೆ ಸಚಿವರಾಗಿ, ವಸತಿ, ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನೂ ನಿಭಾಯಿಸಿದ್ದರು. 2023ರಲ್ಲಿ ವರುಣ, ಚಾಮರಾ ಜನಗರದಿಂದ ಸ್ಪರ್ಧಿಸಿ ಸೋಲುಂಡಿದ್ದ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರ ಕಲ್ಪವೃಕ್ಷವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.